Homeಕರ್ನಾಟಕ‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚಿನ ಅಧಿಸೂಚನೆಯು ‘ಕರ್ನಾಟಕ ಅಬಕಾರಿ ನಿಯಮಗಳು – 2023’ ರ ಕರಡು, ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಅಬಕಾರಿ ಇಲಾಖೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಯಿತು.

ಖಂಡಿಸಿದ ವಿದ್ಯಾರ್ಥಿ ಸಂಘಟನೆಗಳು:

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಈ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ. ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈವರೆಯೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ. ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಹೇಳಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ಕುಡಿತದ ವಯೋಮಿತಿ ಸಡಿಲಿಕೆ ಮಾಡುವ ಸರಕಾರದ ತಿದ್ದುಪಡಿಗೆ ಜನ ಆಕ್ಷೇಪ ವ್ಯಕ್ತಪಡಿಸುವ ಸಂಭವವಿದ್ದು, ಇದನ್ನು ನೀತಿ ನಿರ್ಧಾರವಾಗಿ ಸರಕಾರ ಮುಂದುವರಿಸಲಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಪಬ್‌ಗಳಲ್ಲಿ ತಮ್ಮ 18 ನೇ ಹುಟ್ಟುಹಬ್ಬವನ್ನು ಆಚರಿಸಲು ಬಯಸುವ ಅನೇಕರಿಗೆ ಪಬ್ ಸಂಸ್ಕೃತಿಯ ಮೇಲೆ ವ್ಯಾಮೋಹ ಬೆಳೆಸಿರುವುದರಿಂದ ಕೆಲವರು ವಯಸ್ಸಿನ ಸಡಿಲಿಕೆಯ ಪರವಾಗಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...