Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...