Homeದಲಿತ್ ಫೈಲ್ಸ್ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

- Advertisement -
- Advertisement -

ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳಲ್ಲಿ ದಲಿತ, ಆದಿವಾಸಿಗಳಿಗೆ ಹೆಚ್ಚಿನ ಅವಕಾಶಗಳು ಇಲ್ಲವಾಗಿವೆ. ಇಲ್ಲಿನ ವೈಜ್ಞಾನಿಕ ಕ್ಷೇತ್ರದಲ್ಲಿ ಸಮುದಾಯಗಳ ವೈವಿಧ್ಯತೆ ಕಡೆಗಣಿಸಿರುವುದನ್ನು ಪ್ರತಿಷ್ಠಿತ ವಿಜ್ಞಾನ ನಿಯತಕಾಲಿಕೆ ‘ನೇಚರ್‌’ ಗುರುತಿಸಿದೆ.

ವಿವಿಧ ದೇಶಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿರುವ ಜನಾಂಗೀಯ ಅಥವಾ ಜನಾಂಗೀಯ ವೈವಿಧ್ಯತೆ ಹೇಗಿದೆ ಎಂಬ ಅಂಕಿ-ಅಂಶಗಳನ್ನು ದಾಖಲಿಸುತ್ತಿರುವ ‘ನೇಚರ್‌’ ತನ್ನ ಸರಣಿಯಲ್ಲಿ ಭಾರತದಲ್ಲಿನ ತಾರತಮ್ಯವನ್ನು ವಿವರಿಸಿದೆ.

ಜಾತಿಯ ಕಾರಣಕ್ಕೆ ತನ್ನ ಐಡೆಂಟಿಯನ್ನು ಮುಚ್ಚಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಆದಿವಾಸಿಯುವಕನೊಬ್ಬನ ಮಾತುಗಳೊಂದಿಗೆ ಆರಂಭವಾಗುವ ವರದಿಯು, ವೈಜ್ಞಾನಿಕ ಕ್ಷೇತ್ರದಲ್ಲಿ ಸವಲತ್ತು ಪಡೆದ ಸಮುದಾಯಗಳೇ ಪಾರಮ್ಯ ಮೆರೆದಿರುವುದನ್ನು ತೆರೆದಿಟ್ಟಿದೆ.

‘ಸಾಮಾನ್ಯ’ ವರ್ಗ ಭಾರತದ ಸಂಶೋಧನಾ ಸಂಸ್ಥೆಗಳಲ್ಲಿ ಪ್ರಾಬಲ್ಯ ಮೆರೆದಿದೆ. ಪಿಎಚ್‌ಡಿ ವಿದ್ಯಾರ್ಥಿಗಳಲ್ಲಿ ಆದಿವಾಸಿಗಳು ಮತ್ತು ದಲಿತರ ಪ್ರಾತಿನಿಧ್ಯ ಕೆಳಮಟ್ಟದಲ್ಲಿದೆ. ದಮನಿತ ಸಮುದಾಯಗಳಿಂದ ಬಂದ 1% ಕ್ಕಿಂತ ಕಡಿಮೆ ಪ್ರಾಧ್ಯಾಪಕರು ಉನ್ನತ ಶ್ರೇಣಿಯ 23 ಸಂಸ್ಥೆಗಳಲ್ಲಿ ಇದ್ದಾರೆ.

ವಿಜ್ಞಾನ ಸಂಸ್ಥೆಗಳಲ್ಲಿ ವೈವಿಧ್ಯತೆ ಕಡೆಗಣೆನೆಯಾಗಿರುವುದು ಪ್ರತಿ ರಾಷ್ಟ್ರದಲ್ಲಿ ವಿಭಿನ್ನ ರೂಪಗಳು ಇದೆ. ಭಾರತದಲ್ಲಿನ ಪರಿಸ್ಥಿತಿಗೆ ಅದರ ಜಾತಿ ವ್ಯವಸ್ಥೆಯು ಕಾರಣವಾಗಿರುವುದನ್ನು ವರದಿ ಗಮನ ಸೆಳೆದಿದೆ.

ಜಾತಿ ಮತ್ತು ಶೈಕ್ಷಣಿಕ ಸ್ಥಾನದ ಮೂಲಕ ವಿಜ್ಞಾನಿಗಳ ವಿಶ್ಲೇಷಣೆ ಮಾಡಲು ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕಳೆದ ಕೆಲವು ವರ್ಷಗಳಲ್ಲಿ, ಪತ್ರಕರ್ತರು, ವಿದ್ಯಾರ್ಥಿ ಗುಂಪುಗಳು ಮತ್ತು ಸಂಶೋಧಕರು ಸಾರ್ವಜನಿಕ-ಮಾಹಿತಿ ಕಾನೂನುಗಳನ್ನು ಬಳಸಿಕೊಂಡು ವೈವಿಧ್ಯತೆಯ ಡೇಟಾವನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬದಲಾವಣೆಗಾಗಿ ಒತ್ತಾಯಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಜಾತಿ ಸವಾಲು ಶಾಲಾ ಹಂತದಲ್ಲೇ ಪ್ರಾರಂಭವಾಗುತ್ತದೆ. ವಿಶ್ವವಿದ್ಯಾನಿಲಯದ ಪ್ರವೇಶದಲ್ಲಿ ಢಾಳಾಗಿ ಕಂಡು ಬರುತ್ತದೆ. ಆದಿವಾಸಿಗಳು ಮತ್ತು ದಲಿತರು ಪದವಿಪೂರ್ವ ವಿಜ್ಞಾನ ಕೋರ್ಸ್‌ಗಳಲ್ಲಿ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಆದರೆ ಕಲಾ ಕೋರ್ಸ್‌ಗಳಲ್ಲಿ ಹೆಚ್ಚಿದ್ದಾದೆ ಎಂದು ಉನ್ನತ-ಶಿಕ್ಷಣ ಸಮೀಕ್ಷೆಯ ಡೇಟಾಗಳು ತೋರಿಸುತ್ತವೆ.

“ಆರ್ಟ್ಸ್‌ನಲ್ಲಿ ಹೆಚ್ಚಿನದಾಗಿ ಆದಿವಾಸಿ, ದಲಿತರು ಸೇರುತ್ತಿರುವುದಕ್ಕೆ ಆರ್ಟ್ಸ್ ಕೋರ್ಸ್‌ಗಳು ಹೆಚ್ಚು ಜನಪ್ರಿಯವಾಗಿರುವುದು ಕಾರಣವಲ್ಲ. ಈ ವಿದ್ಯಾರ್ಥಿಗಳು, ವಿಶೇಷವಾಗಿ ಆದಿವಾಸಿಗಳು ಕಲಿಯುವ ಗ್ರಾಮೀಣ ಪ್ರೌಢಶಾಲೆಗಳಲ್ಲಿ ವಿಜ್ಞಾನದಲ್ಲಿ ಪರಿಣತಿ ಹೊಂದಿರುವ ಶಿಕ್ಷಕರು ಮತ್ತು ಮಾರ್ಗದರ್ಶಕರು ವಿರಳವಾಗಿರುತ್ತಾರೆ” ಎಂದು ಕಂಪ್ಯೂಟರ್ ವಿಜ್ಞಾನಿ ಮತ್ತು ಸಿಡೋ ಕನ್ಹು ಮುರ್ಮು ವಿಶ್ವವಿದ್ಯಾಲಯದ ಉಪಕುಲಪತಿ ಸೋನಾಜಾರಿಯಾ ಮಿಂಜ್ ಹೇಳುತ್ತಾರೆ (ಮಿಂಜ್ ಭಾರತದಲ್ಲಿ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ಆದಿವಾಸಿ ಮಹಿಳೆ.) ಒಬಿಸಿ ಗುಂಪಿನ ವಿದ್ಯಾರ್ಥಿಗಳ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ ಎಂದಿದೆ ವರದಿ.

ಪಿಎಚ್‌ಡಿಯಲ್ಲಿ ದಮನಿತರ ಸ್ಥಿತಿಗತಿ

ಪಿಎಚ್‌ಡಿ ಪಡೆಯುತ್ತಿರುವವರಲ್ಲಿ ದಮನಿತ ಸಮುದಾಯಗಳ ಪ್ರಮಾಣವು ಮತ್ತಷ್ಟು ಕುಸಿಯುತ್ತದೆ. ನೇಚರ್ ಸಂಗ್ರಹಿಸಿದ ಐದು ಉನ್ನತ ಶ್ರೇಣಿಯ ಐಐಟಿಗಳಲ್ಲಿ 2020ರಲ್ಲಿ ಪಿಎಚ್‌ಡಿ ಕೋರ್ಸ್‌ಗಳ ದತ್ತಾಂಶ ಹೇಳುವುದೇನೆಂದರೆ- ದಲಿತರಿಗೆ ಸರಾಸರಿ 10% ಮತ್ತು ಆದಿವಾಸಿಗಳಿಗೆ 2% ಪ್ರಾತಿನಿಧ್ಯ ಸಿಕ್ಕಿದೆ. ಭಾರತದ ಅಗ್ರ ಶ್ರೇಯಾಂಕದ ವಿಶ್ವವಿದ್ಯಾನಿಲಯ, ಬೆಂಗಳೂರಿನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಕೂಡ ಹೆಚ್ಚಿನ ಪ್ರಾತಿನಿಧ್ಯವನ್ನೇನು ನೀಡಿಲ್ಲ.

ಶೋಷಿತ ಸಮುದಾಯದ ಅಭ್ಯರ್ಥಿಗಳು ಪಿಎಚ್‌ಡಿ ಪ್ರಾರಂಭಿಸಿದಾಗ ಸವಾಲು ಎದುರಿಸುತ್ತಾರೆ. ತಮ್ಮನ್ನು ಶಿಷ್ಯರನ್ನಾಗಿ ತೆಗೆದುಕೊಳ್ಳಲು ಸಿದ್ಧರಿರುವ ಉತ್ತಮ ಮಾರ್ಗದರ್ಶಕರನ್ನು ಹುಡುಕಲು ಹೆಣಗಾಡಬೇಕಾಗುತ್ತದೆ. ಸವಲತ್ತುಳ್ಳ ಜಾತಿ ಪ್ರಾಧ್ಯಾಪಕರು ಶೋಷಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡದಿರುವುದು “ಸಾಮಾನ್ಯವಾಗಿದೆ” ಎಂದು ಒಬಿಸಿ ಗುಂಪಿಗೆ ಸೇರಿದ ಮತ್ತು ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದ ಸಹಾಯಕ ಪ್ರಾಧ್ಯಾಪಕರಾದ ಕಿರ್ಪಾ ರಾಮ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಆದಿವಾಸಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ನೇಚರ್‌ಗೆ ಪ್ರತಿಕ್ರಿಯಿಸಿದ್ದು, “2018ರಲ್ಲಿ ನಡೆದ ಘಟನೆ. ನನಗೆ ಮೇಲ್ವಿಚಾರಕರಾಗುವಂತೆ ಕೋರಲು ಮೇಲ್ಜಾತಿ ಪ್ರಾಧ್ಯಾಪಕರನ್ನು ಸಂಪರ್ಕಿಸಿದೆ. ನೀನು ಕೋಟಾ ಅಭ್ಯರ್ಥಿ, ಎಲ್ಲಿಯಾದರೂ ಮೇಲ್ವಿಚಾರಕರನ್ನು ಹುಡುಕಬಹುದು” ಎಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಧ್ಯಪ್ರದೇಶ: ಕೀಳು ಜಾತಿಯ ನಿನಗೆ ಓದುವ ಹಕ್ಕಿಲ್ಲ ಎಂದ ಶಿಕ್ಷಕ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಸಿಬ್ಬಂದಿ ನೇಮಕಾತಿಯಲ್ಲಿ ತಾರತಮ್ಯ

ಅಂಚಿನಲ್ಲಿರುವ ಜಾತಿಗಳ ಕೆಲವೇ ಕೆಲವು ಡಾಕ್ಟರೇಟ್ ವಿದ್ಯಾರ್ಥಿಗಳು ಪ್ರಖ್ಯಾತ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ಉನ್ನತ-ಶ್ರೇಣಿಯ IITಗಳು ಮತ್ತು IISc ಗಳಲ್ಲಿ 98% ಪ್ರಾಧ್ಯಾಪಕರು, 90% ಕ್ಕಿಂತ ಹೆಚ್ಚು ಸಹಾಯಕ ಅಥವಾ ಸಹಪ್ರಾಧ್ಯಾಪಕರು ಸವಲತ್ತುಳ್ಳ ಜಾತಿಗಳವರಾಗಿದ್ದಾರೆ ಎಂದು ನೇಚರ್ ಕಂಡುಕೊಂಡಿದೆ. ಮುಂಬೈ ಮೂಲದ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನಲ್ಲಿ (ಟಿಐಎಫ್‌ಆರ್), ಎಲ್ಲಾ ಪ್ರಾಧ್ಯಾಪಕರು ಸವಲತ್ತು ಪಡೆದ ಜಾತಿಗಳವರಾಗಿದ್ದಾರೆ.

ಕೆಲವು ಪ್ರಮುಖ ಸಂಸ್ಥೆಗಳಲ್ಲಿ ಪರಿಸ್ಥಿತಿ ಪರವಾಗಿಲ್ಲ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್‌ನಲ್ಲಿ 18% ಸಂಶೋಧಕರು (ಹಿರಿಯ ಸಿಬ್ಬಂದಿ ಶ್ರೇಣಿಗಳನ್ನು ಒಟ್ಟುಗೂಡಿಸಿ) ದಲಿತರಿದ್ದಾರೆ, 4% ಆದಿವಾಸಿಗಳು ಇದ್ದಾರೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...