Homeಮುಖಪುಟದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ಕೇಂದ್ರ ಸರ್ಕಾರವು ದೆಹಲಿಯ ಪೌರಕಾರ್ಮಿಕರ ಹುದ್ದೆಗಳ ಮೇಲೆ ನಿಯಂತ್ರಣ ಸಾಧಿಸುತ್ತಿದ್ದು ಇದರಿಂದ ದೆಹಲಿಯ ಚುನಾಯಿತ ಸರ್ಕಾರ ಕಾರ್ಯ ನಿರ್ವಹಿಸಲು ತೊಂದರೆಯಾಗುವುದಿಲ್ಲವೇ ಎಂದು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಈ ಬಗ್ಗೆ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಕಾರ್ಯಕಾರಿ ಅಧಿಕಾರದ ವ್ಯಾಪ್ತಿ ಮತ್ತು ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣದ ಕುರಿತು ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವಿನ ವಿವಾದದ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು ವಿಚಾರಣೆ ನಡೆಸುತ್ತಿದೆ.

ದೆಹಲಿಯು ಕೇಂದ್ರಾಡಳಿತ ಪ್ರದೇಶವಾಗಿದೆ ಮತ್ತು ಅದು ಒಕ್ಕೂಟದ ವಿಸ್ತರಣೆಯಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು. “ಕೇಂದ್ರಾಡಳಿತ ಪ್ರದೇಶವನ್ನು ರಚಿಸುವ ಉದ್ದೇಶವೇ ಆ ಪ್ರದೇಶವನ್ನು ಕೇಂದ್ರ ನಿರ್ವಹಿಸುವುದಕ್ಕಾಗಿ” ಎಂದು ಅವರು ವಾದಿಸಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, “ಎಲ್ಲವೂ ಕೇಂದ್ರ ಸರ್ಕಾರ ಬಯಸುವಂತೆ ನಡೆಯಬೇಕು ಎಂದಾದರೆ ಈ ಚುನಾಯಿತ ಸರ್ಕಾರ ಇರುವುದು ಯಾಕೆ?” ಎಂದು ಪ್ರಶ್ನಿಸಿದರು.

ಅದಕ್ಕೆ ಉತ್ತರಿಸಿದ ಮೆಹ್ತಾ, ಚುನಾಯಿತ ಸರ್ಕಾರವು ಅಧಿಕಾರಿಗಳ ಮೇಲೆ ಕ್ರಿಯಾತ್ಮಕ ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಹೇಳಿದರು. ಅಲ್ಲಿ ಅಧಿಕಾರಿಗಳು ತಮ್ಮ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸದಿದ್ದರೆ ದೆಹಲಿ ಸರ್ಕಾರ ವರ್ಗಾಯಿಸಲು ಸಾಧ್ಯವಿಲ್ಲವೇ? ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಕೇಳಿದರು.

“ಶಿಕ್ಷಣ, ಪರಿಸರ ಮುಂತಾದ ಕ್ಷೇತ್ರದಲ್ಲಿನ ಪೋಸ್ಟಿಂಗ್‌ ವಿಚಾರಗಳಲ್ಲಿ ದೆಹಲಿ ಸರ್ಕಾರದ ಯಾವುದೇ ಅಧಿಕಾರ ವ್ಯಾಪ್ತಿ ಇಲ್ಲ ಎಂದು ನೀವು ಹೇಳುತ್ತೀರಾ? ಹಾಗಿದ್ದರೆ ಅಲ್ಲಿ ಚುನಾಯಿತ ಸರ್ಕಾರ ಇದ್ದು ಏನು ಉಪಯೋಗ?” ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಸಂವಿಧಾನದ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸೇವೆಗಳಿವೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾರ್ವಜನಿಕ ಸೇವಾ ಆಯೋಗಗಳಿಲ್ಲ. ದೆಹಲಿಯು ಕಾಸ್ಮೋಪಾಲಿಟನ್ ನಗರವಾಗಿದೆ. ಇದು ರಾಷ್ಟ್ರರಾಜಧಾನಿಯಾಗಿದೆ ಇಲ್ಲಿಯ ಆಡಳಿತಾತ್ಮಕ ಸೇವೆಗಳ ಮೇಲೆ ಕೇಂದ್ರದ ನಿಯಂತ್ರಣ ಇರಬೇಕು ಎಂದು ಸಾಲಿಸಿಟರ್ ಜನರಲ್ ಮೆಹ್ತಾ ವಾದಿಸಿದರು.

ದೆಹಲಿ ಸರ್ಕಾರ ಗುರುವಾರ, ಇಲ್ಲಿ ನಾವು ಹುದ್ದೆಗಳನ್ನು ಸೃಷ್ಟಿಸುವ, ಅಧಿಕಾರಿಗಳನ್ನು ನೇಮಿಸುವ ಮತ್ತು ಅಗತ್ಯಕ್ಕೆ ತಕ್ಕಂತೆ ಅವರನ್ನು ವರ್ಗಾವಣೆ ಮಾಡುವ ಅಧಿಕಾರವನ್ನು ನೀಡದಿದ್ದರೆ, ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸಂವಿಧಾನ ಪೀಠದ ಮುಂದೆ ವಾದಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...