Homeರಾಜಕೀಯಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

- Advertisement -
- Advertisement -

ತಮಿಳುನಾಡು ವಿಧಾನಸಭೆಯು ಗುರುವಾರ ವಿಶೇಷ ನಿರ್ಣಯವನ್ನು ಅಂಗೀಕರಿಸಿದ್ದು, ಸೇತುಸಮುದ್ರಂ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ನಿರ್ಣಯವನ್ನು ಬಿಜೆಪಿ ಸೇರಿದಂತೆ ವಿಧಾನಸಭೆಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಹಡಗು ಮಾರ್ಗವನ್ನು ರಚಿಸಲು ಸೇತುಸಮುದ್ರಂ ಯೋಜನೆಯನ್ನು ಆರಂಭದಲ್ಲಿ 1860ರಲ್ಲಿ ರಚಿಸಲಾಗಿತ್ತು. ಮನ್ನಾರ್ ಕೊಲ್ಲಿ ಮತ್ತು ಪಾಕ್ ಜಲಸಂಧಿಯನ್ನು ಸಂಪರ್ಕಿಸುವ ಕಾಲುವೆ ರಚನೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನಿರ್ಣಯವನ್ನು ಅಂಗೀಕರಿಸಿದವು. ಆದರೆ ರಾಮಸೇತುವಿಗೆ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳ್ಳುವವರೆಗೂ ಬೆಂಬಲಿಸುವುದಾಗಿ ಬಿಜೆಪಿ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಸೇತುಸಮುದ್ರಂ ಯೋಜನೆಯ ಅನುಷ್ಠಾನದಿಂದ ತಮಿಳುನಾಡಿನ ಆರ್ಥಿಕತೆಯನ್ನು ಸುಧಾರಿಸುತ್ತದೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಿದೆ ಎಂದು ಸಿಎಂ ಸ್ಟಾಲಿನ್‌ ನಿರ್ಣಯವನ್ನು ಓದುವಾಗ ಪ್ರಸ್ತಾಪಿಸಿದ್ದಾರೆ.

ಒಕ್ಕೂಟ ಸರಕಾರ ಕೂಡಲೇ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. “ತಮಿಳುನಾಡು ಮತ್ತು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸೇತುಸಮುದ್ರಂ ಯೋಜನೆ ಅತ್ಯಗತ್ಯ. ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಸರ್ಕಾರ ಎಲ್ಲ ಸಹಕಾರ ನೀಡಲಿದೆ” ಎಂದು ಸಿಎಂ ಹೇಳಿದ್ದಾರೆ.

“ಇದು ಡಿಎಂಕೆಯ ಮೊದಲ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ ಕನಸಿನ ಯೋಜನೆಯಾಗಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕೂಡ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಆಸಕ್ತಿ ವಹಿಸಿದ್ದರು. ಈ ಯೋಜನೆಯನ್ನು ನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಆಗಿನ ಪ್ರಧಾನಿ ಜವಾಹರಲಾಲ್ ನೆಹರು ನೇತೃತ್ವದ ಸಚಿವ ಸಂಪುಟ ಸಭೆಯು ಅನುಮೋದಿಸಿದೆ” ಎಂದು ಸಿಎಂ ಹೇಳಿದ್ದಾರೆ.

1967ರಲ್ಲಿ ಮುಖ್ಯಮಂತ್ರಿಯಾದ ಅಣ್ಣಾದೊರೈ ತಮಿಳುನಾಡನ್ನು ಶ್ರೀಮಂತ ರಾಜ್ಯವನ್ನಾಗಿ ಮಾಡುವುದಾಗಿ ಹೇಳಿ ಈ ಯೋಜನೆಯನ್ನು ಜಾರಿಗೆ ತರಲು ಬಯಸಿದ್ದರು ಎಂದು ಅವರು ಹೇಳಿದ್ದಾರೆ.

2004ರಲ್ಲಿ ಡಿಎಂಕೆಯನ್ನು ಒಳಗೊಂಡ ಯುಪಿಎ ಸರ್ಕಾರ ಈ ಯೋಜನೆಗೆ 2,427 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 50%ದಷ್ಟು ಕಾಮಗಾರಿ ಮುಗಿಯುವ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ಅಡೆತಡೆಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

“ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಆರಂಭದಲ್ಲಿ ಇದನ್ನು ಬೆಂಬಲಿಸಿದ್ದರು. ಆದರೆ ನಂತರ ತಮ್ಮ ನಿಲುವನ್ನು ಬದಲಾಯಿಸಿದರು ಮತ್ತು ಯೋಜನೆಯ ವಿರುದ್ಧ ಪ್ರಕರಣ ದಾಖಲಿಸಿದರು” ಎಂದು ಸ್ಟಾಲಿನ್ ಹೇಳಿದರು.

ಈ ಯೋಜನೆ ಜಾರಿಯಾದರೆ ತಮಿಳುನಾಡಿನ ಆರ್ಥಿಕತೆಯನ್ನು ಮೇಲೆತ್ತುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣದ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಈ ನಡುವೆ ಮುಖ್ಯಮಂತ್ರಿ ರಾಮನನ್ನು ಕಾಲ್ಪನಿಕ ಪಾತ್ರ ಎಂಬ ಹೇಳಿಕೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ವಿರೋಧಿಸಿದ್ದು, ಎಐಎಡಿಎಂಕೆ ನಾಯಕ, ಪೊಲ್ಲಾಚಿ ವಿ.ಜಯರಾಮನ್ ಅವರು, ಶ್ರೀರಾಮ ಅವತಾರವೇ ಹೊರತು ಮುಖ್ಯಮಂತ್ರಿ ಹೇಳಿದಂತೆ ಕಾಲ್ಪನಿಕ ಪಾತ್ರವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...