Homeಮುಖಪುಟಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

ಟಿವಿ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದಲ್ಲಿ ಟೆಲಿವಿಷನ್ ಚಾನೆಲ್‌ಗಳು ಸಮಾಜವನ್ನು ವಿಭಜಿಸುತ್ತಿವೆ ಮತ್ತು ಸುದ್ದಿಗಳನ್ನು ಸಂವೇದನಾಶೀಲಗೊಳಿಸುವ ಅಜೆಂಡಾ ಹೊಂದಿವೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಈ ವೇಳೆ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು, ಚಾನಲ್‌ಗಳಿಗೆ ಹಣ ನೀಡುವವರು ತಮ್ಮ ವಿಷಯವನ್ನು ನಿರ್ದೇಶಿಸುತ್ತಾರೆ ಎಂದು ಹೇಳಿದರು.

“ಎಲ್ಲವೂ TRP [ಟೆಲಿವಿಷನ್ ರೇಟಿಂಗ್ ಪಾಯಿಂಟ್] ನಿಂದ ನಡೆಸಲ್ಪಡುತ್ತದೆ, ಹಾಗಾಗಿ ಅವರು ವಿಷಯಗಳನ್ನು ಸಂವೇದನಾಶೀಲಗೊಳಿಸುತ್ತಾರೆ. ಇದರಿಂದ ಹೆಚ್ಚಿನ ವೀಕ್ಷಕರಕರನ್ನು ಸೆಳೆಯುವ ಕಾರ್ಯಸೂಚಿಯನ್ನು ಅವರು ಅನುಸರಿಸುತ್ತಾರೆ. ದೃಶ್ಯ ಮಾಧ್ಯಮವು ಪತ್ರಿಕೆಗಿಂತ ಹೆಚ್ಚು ನಿಮ್ಮ ಮೇಲೆ ಪ್ರಭಾವ ಬೀರುತ್ತದೆ” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನ್ಯಾಯಪೀಠವು ದ್ವೇಷದ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿದೆ. ಟೆಲಿವಿಷನ್ ಸುದ್ದಿ ವಾಹಿನಿಗಳು ದ್ವೇಷ ಭಾಷಣಕ್ಕೆ ಅವಕಾಶ ನೀಡುವುದಲ್ಲದೇ ಅದಕ್ಕೆ ಯಾವುದೇ ಶಿಕ್ಷೆಯಿಲ್ಲದೆ ತಪ್ಪಿಸಿಕೊಳ್ಳುವುದನ್ನು ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯ ಗಮನಿಸಿತ್ತು. ಒಂದು ತಿಂಗಳ ನಂತರ, ಅಪರಾಧಿಗಳ ಯಾವುದೇ ಧರ್ಮವನ್ನು ಲೆಕ್ಕಿಸದೆ, ದೂರುಗಳಿಗೂ ಕಾಯದೆ ದ್ವೇಷ ಭಾಷಣದ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪೊಲೀಸ್ ಪಡೆಗಳಿಗೆ ಸೂಚಿಸಿದೆ.

ದ್ವೇಷದ ಭಾಷಣವನ್ನು ಉತ್ತೇಜಿಸುವ ಅಥವಾ ತೊಡಗಿಸಿಕೊಳ್ಳುವ ಸುದ್ದಿ ನಿರೂಪಕರನ್ನು ಶಿಕ್ಷಿಸಬೇಕು ಎಂದು ಶುಕ್ರವಾರದ ವಿಚಾರಣೆಯಲ್ಲಿ ನ್ಯಾಯಾಲಯ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ವಾಹಿನಿಯಲ್ಲಿ ದ್ವೇಷದ ಮಾತುಗಳನ್ನಾಡಿದರೆ ಆಂಕರ್‌ಗಳ ಮೇಲೆ ದಂಡ ವಿಧಿಸಿಬೇಕು. ಅಂತಹ ಆಂಕರ್‌ಗಳನ್ನು ತೆಗೆಯಬಹುದು ಎಂದು ನ್ಯಾಯಾಲಯ ಹೇಳಿದೆ. ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್‌ನ ಕಾರ್ಯವೈಖರಿಯನ್ನು ಟೀಕಿಸಿದ ಪೀಠ, ನಿಯಂತ್ರಕರು ಏನನ್ನೂ ಮಾಡುತ್ತಿಲ್ಲ ಎಂದು ಹೇಳಿದೆ.

ಲೈವ್ ಕಾರ್ಯಕ್ರಮಗಳ ಕಾನೂನಿನ ಪ್ರಕಾರ, “NBSA ಪಕ್ಷಪಾತ ಮಾಡಬಾರದು” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು. “ನೀವು ಎಷ್ಟು ಬಾರಿ ಆಂಕರ್‌ಗಳನ್ನು ತೆಗೆದಿದ್ದೀರಿ? ಚಾನೆಲ್‌ಗಳು ಜನರನ್ನು ಸಮಾನವಾಗಿ ಮಾತನಾಡಲು ಬಿಡುವುದಿಲ್ಲ. ನಿಮ್ಮ ಅಜೆಂಡಾಗಳ ವಿರುದ್ಧ ಜನರು ಅಥವಾ ವಕ್ತಾರರು ಪ್ರಶ್ನೆಗಳನ್ನು ಕೇಳಲು ಬಯಸಿದಾಗ ಅವರ ಧ್ವನಿಯನ್ನು ಮ್ಯೂಟ್ ಮಾಡಲಾಗುತ್ತದೆ. ಆಗ ಪ್ರಶ್ನೆ ಕೇಳಲು ಅವಕಾಶವೇ ಇರುವುದಿಲ್ಲ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಈ ವೇಳೆ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಪರ ವಕೀಲ ಅರವಿಂದ್ ದಾತಾರ್ ಮಾತನಾಡಿ, ‘ಹಲವು ಬಾರಿ ಇಂತಹ ಉಲ್ಲಂಘನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಪೀಠಕ್ಕೆ ತಿಳಿಸಿದರು. ಆದರೆ ಸುದರ್ಶನ್ ಟಿವಿ ಮತ್ತು ರಿಪಬ್ಲಿಕ್ ಟಿವಿಯಂತಹ ದೂರದರ್ಶನ ಚಾನೆಲ್‌ಗಳು ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಅವರು ಹೇಳಿದರು.

2020 ರಲ್ಲಿ ಸುದರ್ಶನ್ ನ್ಯೂಸ್‌ನಲ್ಲಿ “ಯುಪಿಎಸ್‌ಸಿ ಜಿಹಾದ್” ಎಂಬ ಕಾರ್ಯಕ್ರಮಕ್ಕೆ ಪ್ರಸಾರವಾಗಿತ್ತು. ಇದಕ್ಕೆ ಸಂಬಂಧಿಸಿದ ಒಂದು ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ವಿದೇಶದಿಂದ ಬರುವ ಭಯೋತ್ಪಾದಕ ನಿಧಿಯನ್ನು ಬಳಸಿಕೊಂಡು ಮುಸ್ಲಿಮರು ನಾಗರಿಕ ಸೇವೆಗಳಿಗೆ “ನುಸುಳುತ್ತಿದ್ದಾರೆ” ಎಂದು ಚಾನೆಲ್ ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...