Homeರಾಷ್ಟ್ರೀಯಭಾರತ್ ಜೋಡೋ ಯಾತ್ರೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್ ಸಂಸದ ಚೌಧರಿ ಸಿಂಗ್; ನಿಧನ

ಭಾರತ್ ಜೋಡೋ ಯಾತ್ರೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್ ಸಂಸದ ಚೌಧರಿ ಸಿಂಗ್; ನಿಧನ

- Advertisement -
- Advertisement -

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ಸಂಸದ ಚೌಧರಿ ಸಂತೋಖ್ ಸಿಂಗ್ ಅವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶನಿವಾರ ಪಂಬಾಬ್‌ನಲ್ಲಿ ಸಂಭವಿಸಿದೆ. ರಾಜ್ಯದ ಫಿಲ್ಲೌರ್ ಟೌನ್‌ನಲ್ಲಿ ಯಾತ್ರೆಯ ಸಮಯದಲ್ಲಿ ಸಂಸದ ಚೌಧರಿ ಸಂತೋಖ್‌ ಕುಸಿದು ಬಿದ್ದಿದ್ದಾರೆ.

ಅಲ್ಲಿಂದ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. 2019 ರ ಚುನಾವಣೆಯಲ್ಲಿ ಚೌದರಿ ಸಿಂಗ್ ಅವರು 19,491 ಮತಗಳ ಅಂತರದಿಂದ ಜಲಂಧರ್‌ನಿಂದ ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಾತ್ರೆಯ ನೇತೃತ್ವ ವಹಿಸಿದ್ದ ರಾಹುಲ್ ಗಾಂಧಿ ಅವರು ಪಾದಯಾತ್ರೆಯನ್ನು ಮಧ್ಯದಲ್ಲಿಯೇ ಬಿಟ್ಟು ಸಂಸದ ಚೌದರಿ ಅವರನ್ನು ಕರೆದುಕೊಂಡು ಹೋಗಿದ್ದ ಆಸ್ಪತ್ರೆಗೆ ಧಾವಿಸಿದರು ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ. ಅವರು ಇಂದು ಜಲಂಧರ್‌ನಲ್ಲಿರುವ ಅವರ ಮನೆಯಲ್ಲಿ ಚೌಧರಿ ಅವರ ಕುಟುಂಬವನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ರಾಹುಲ್ ಗಾಂಧಿಯವರು ಇಂದಿನ ಯಾತ್ರೆಯ ಫೋಟೋ ಕೊಲಾಜ್ ಅನ್ನು ಹಂಚಿಕೊಂಡಿದ್ದು, ಅದರಲ್ಲಿ ಚೌಧರಿ ಅವರು ಇತರ ಪಕ್ಷದ ಸದಸ್ಯರೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಇವೆ.

“ಶ್ರೀ ಸಂತೋಖ್ ಸಿಂಗ್ ಚೌಧರಿ ಅವರ ಹಠಾತ್ ನಿಧನದಿಂದ ಆಘಾತವಾಗಿದೆ. ಯುವ ಕಾಂಗ್ರೆಸ್‌ನಿಂದ ಬಂದು ಸಂಸತ್ ಸದಸ್ಯರಾಗಿ ತಮ್ಮ ಜೀವನವನ್ನು ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟ ಅವರು ಭೂಮಿಯ ಮೇಲಿನ ಶ್ರಮಶೀಲ ನಾಯಕ, ಧರ್ಮನಿಷ್ಠ ವ್ಯಕ್ತಿ ಮತ್ತು ಕಾಂಗ್ರೆಸ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದರು. ಮೃತರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಭಾರತ್‌ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಹೇಳಿದ್ದಾರೆ. ನಾಳೆ ಬೆಳಿಗ್ಗೆ ಸಂಸದ ಚೌಧರಿ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚೌಧರಿ ಅವರ ನಿಧನವು ಪಕ್ಷ ಮತ್ತು ಸಂಘಟನೆಗೆ ದೊಡ್ಡ ಹೊಡೆತವಾಗಿದೆ ಎಂದು ಹೇಳಿದ್ದಾರೆ.

“ನಮ್ಮ ಸಂಸದರಾದ ಶ್ರೀ ಸಂತೋಖ್ ಸಿಂಗ್ ಚೌಧರಿ ಅವರ ಅಕಾಲಿಕ ನಿಧನದ ಬಗ್ಗೆ ತಿಳಿದು ತೀವ್ರ ಆಘಾತ ಮತ್ತು ದುಃಖವಾಗಿದೆ. ಅವರ ಅಗಲಿಕೆ ಪಕ್ಷ ಮತ್ತು ಸಂಘಟನೆಗೆ ದೊಡ್ಡ ಹೊಡೆತವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಹೃದಯವು ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳ ಜೊತೆ ಇರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಖರ್ಗೆ ಅವರು ಟ್ವೀಟ್ ಮಾಡಿದ್ದಾರೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಮೃತಪಟ್ಟ ಸಂಸದರಿಗೆ ಸಂತಾಪ ಸೂಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...