Homeಕರ್ನಾಟಕಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟದ ಮುಂದುವರೆದ ಭಾಗವಾಗಿ ನಿನ್ನೆ (ಶುಕ್ರವಾರ) ಶಿಗ್ಗಾಂವಿಯಲ್ಲಿ ಹೋರಾಟಗಾರರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಸಮುದಾಯದ ನಾಯಕರು ವಾಗ್ಧಾಳಿ ನಡೆಸಿದರು.

ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿ, “ಬಸವರಾಜ ಬೊಮ್ಮಾಯಿ ಅವರ ನಿಷ್ಕಾಳಜಿಯಿಂದ ನಮ್ಮ ಸಮುದಾಯಕ್ಕೆ ಮೀಸಲಾತಿ ಸಿಗುವ ಅವಕಾಶ ತಪ್ಪಿದೆ. ಈ ಹಿಂದೆ ನಾವು ನಮ್ಮ ಹೋರಾಟ ತೀವ್ರಗೊಳಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದೆವು. ಆಗ ಬೊಮ್ಮಾಯಿಯವರು, ನಿಮಗೆ 2ಎ ಮೀಸಲಾತಿ ಕೊಟ್ಟೇಕೊಡ್ತೀವಿ ಎಂದು ತಾಯಿಯ ಮೇಲೆ ಆಣೆ ಮಾಡಿದ್ದರು. ಆಗ ನಾವು ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದೆವು. ಆದರೆ ದುರ್ದೈವದ ಸಂಗತಿಯೆಂದರೆ ತಾಯಿ ಮೇಲೆ ಆಣೆ ಪ್ರಮಾಣ ಮಾಡಿಯೂ ನೀವು ಮಾತು ತಪ್ಪಿದ್ದೀರಿ. ಈ ಬಾರಿ ನಾವು ಸುಮ್ಮನೆ ಇರಲ್ಲ. ನಿಮ್ಮ ಮೇಲೆ ಯಾವ ನಂಬಿಕೆಯೂ ನಮ್ಮ ಸಮುದಾಯಕ್ಕೆ ಇಲ್ಲ, ನಿಮ್ಮಿಂದ ಅನ್ಯಾಯ ಆಗಿದೆ. ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಮ್ಮ ಬೇಡಿಕೆ ಈಡೇರಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೇ ವೇಳೆ ಸರ್ಕಾರದ ಮಂತ್ರಿಯೊಬ್ಬರು ಎಂದು ಸಂಬೋಧಿಸಿ ಹೆಸರು ಹೇಳದೇ, “ಪಿಂಪ್ ಮಂತ್ರಿಯೊಬ್ಬ ನನಗೆ ಟಿಕೆಟ್ ಕೊಡದಂತೆ ಮಾಡ್ತೀನಿ ಎಂದು ಹೇಳುತ್ತಾನೆ. ಮೊದಲು ಅವನು ತನ್ನ ಬಗ್ಗೆ ಯೋಚಿಸಲಿ, ಸ್ವಾಮೀಜಿಗಳಿಗೆ ದುಡ್ಡು ಕೊಟ್ಟು ಮುಖ್ಯಮಂತ್ರಿಯವರ ಮೇಲೆ ಒತ್ತಡ ತಂದು ಮಂತ್ರಿಯಾದವನು ಅವನು” ಎಂದು ಹೇಳಿದ್ದರು. ಯತ್ನಾಳ್ ಮತ್ತು ಮುರಗೇಶ್ ನಿರಾಣಿ ನಡುವೆ ಜಿದ್ದಾಜಿದ್ದಿ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಹೀಗಾಗಿ ಯತ್ನಾಳ್ ವಾಗ್ದಾಳಿ ನಡೆಸಿದ್ದು ನಿರಾಣಿ ಮೇಲೇಯೇ ಎಂಬುದು ಸ್ಪಷ್ಟ.

ಇದಕ್ಕೆ ಪ್ರತಿಯಾಗಿ ಸರ್ಕಾರದ ಭಾಗಿಯಾಗಿರುವ ಲಿಂಗಾಯತ ಸಮುದಾಯದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಿ.ಸಿ.ಪಾಟೀಲ್ ಮಾತನಾಡಿ, “ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡಿರುವುದನ್ನು ನಾವು ಖಂಡಿಸುತ್ತೇನೆ. ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೂಡಿ ಸ್ವಾಮೀಜಿಗಳು ಹಾಗೂ ಯತ್ನಾಳ ಅವರು ಹೋರಾಟ ನಡೆಸುತ್ತಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಈ ಸ್ವಾಮೀಜಿಗಳಾಗಲಿ, ಕಾಂಗ್ರೆಸ್‌‌ನಲ್ಲಿರುವ ಪಂಚಮಸಾಲಿ ನಾಯಕರು ಮೀಸಲಾತಿಗೆ ಧ್ವನಿ ಎತ್ತಲಿಲ್ಲ. ಆದರೆ ನಮ್ಮ ಸರ್ಕಾರ 2ಸಿ, 2ಡಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ಹೆಚ್ಚಿಸುವ ನಿರ್ಧಾರಕ್ಕೆ ಬಂದಿತ್ತು. ಆದರೆ ಈ ಹೋರಾಟಗಾರರಿಗೆ ಸಮಾಧಾನವಿಲ್ಲ. ಇವರ ಹೋರಾಟ ಮೀಸಲಾತಿಗಾಗಿ ಎನ್ನುವುದಕ್ಕಿಂತ ಬಿಜೆಪಿ ವಿರುದ್ಧ ಎನ್ನುವಂತಾಗಿದೆ” ಎಂದು ಆರೋಪ ಮಾಡಿದರು.

ಈ ಬಗ್ಗೆ ಸಚಿವ ಮುರಗೇಶ್ ನಿರಾಣಿ ಮಾತನಾಡಿದ್ದು, “ನಮ್ಮ ಸರ್ಕಾರಕ್ಕೆ 2ಎ ಮೀಸಲಾತಿ ಕೊಡುವ ಬಗ್ಗೆ ಯಾವುದೇ ತೊಂದರೆ ಇರಲಿಲ್ಲ. ಆದರೆ ಬೇರೆ ಸಮುದಾಯಗಳಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ 2ಸಿ, 2ಡಿ ಪ್ರವರ್ಗ ಸೃಷ್ಟಿ ಮಾಡಿ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡಿದ್ದಾರೆ. ಆದರೂ ಕೂಡ ನಮ್ಮ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರೆ ಇದು ರಾಜಕಾರಣದ ಹೊರತಾಗಿ ಮತ್ತೇನು ಅಲ್ಲ. ಈ ಹೋರಾಟದ ಮುಂಚೂಣಿಯ ನಾಯಕರು ಲಿಂಗಾಯತವನ್ನು ಒಡೆಯುವಂತಹ ಪ್ಲ್ಯಾನ್ ಮಾಡಿದ್ದಾರೆ” ಎಂದು ಆರೋಪಿಸಿದರು.

ನಿರಾಣಿ ಕೂಡ ಹೆಸರು ಹೇಳದೇ ವಿಜಯಪುರದ ನಾಯಕ ಎಂದು ಸಂಬೋಧಿಸಿ, “ಅವನದ್ದು ಎಲುಬಿಲ್ಲದ ನಾಲಿಗೆ, ದೀಪ ಆರುವ ಮುನ್ನ ಹೆಚ್ಚು ಉರಿಯುತ್ತದೆ. ಹಾಗಾಗಿ ಆತನ ಮಾತು ಮಿತಿಮೀರುತ್ತಿದೆ. ಆತ ಅಪ್ಪನಿಗೆ ಹುಟ್ಟಿದ ಮಗನಾಗಿದ್ರೆ ಆ ರೀತಿಯಲ್ಲಿ ಮಾತಾಡ್ತಿರಲಿಲ್ಲ. ಪಿಂಪ್ ಕೆಲಸ ಅವರೇ ಯಾರಾದ್ರೂ ಮಾಡಿರಬಹುದು. ಅದಕ್ಕೆ ಆ ಪದ ಬಳಸುತ್ತಿದ್ದಾರೆ. ಹೀಗೆ ನೀನು ನಾಲಿಗೆ ಹರಿಬಿಟ್ಟರೆ ನಿನ್ನ ನಾಲಿಗೆ ಕತ್ತರಿಸುವಂತ ಸಮಯ ಬರುತ್ತೆ ಹುಷಾರ್” ಎಂದು ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ಕರ್ನಾಟಕದಲ್ಲಿ ಯಾವ ಯಾವ ಕೆಟಗರಿಯಲ್ಲಿ ಎಷ್ಟೆಷ್ಟು ಜಾತಿಗಳಿವೆ? ಮೀಸಲಾತಿಯ ಪಾಲೆಷ್ಟಿದೆ? – ಪೂರ್ಣ ವಿವರ ಇಲ್ಲಿದೆ

“ಅವನೊಬ್ಬ (ಯತ್ನಾಳ) ಢೋಂಗಿ ಮನುಷ್ಯ, ಮುಸ್ಲಿಂ ಸಮುದಾಯದ ಜೊತೆ ಹೋದ್ರೆ ಟೋಪಿ ಹಾಕಿಕೊಂಡು ಟಿಪ್ಪುವನ್ನು ಹೊಗಳುವುದು, ಹಿಂದೂ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಮಾತನಾಡುವುದು- ಇದೇನು ನಾಟಕ ಕಂಪನಿನಾ? ಇಲ್ಲಿಯವರೆಗೂ ನಮ್ಮ ಪಕ್ಷದ ನಾಯಕರು ನಿಮ್ಮ ಬಗ್ಗೆ ಸಹನೆಯಿಂದ ಇದ್ದಾರೆ. ಹೀಗೆ ಮುಂದುವರಿದರೆ ಪರಿಸ್ಥಿತಿ ಬೇರೆಯೇ ಆಗತ್ತದೆ” ಎಂದು ಯತ್ನಾಳ್‌ಗೆ ನಿರಾಣಿ ಎಚ್ಚರಿಕೆ ನೀಡಿದರು.

“ನಮ್ಮ ಪಕ್ಷದ ಮೇಲೆ ನಮ್ಮ ನಾಯಕರ ಮೇಲೆ ನಿನಗೆ ಗೌರವ ಇಲ್ಲ ಎನ್ನುವುದಾದರೆ. ನಮ್ಮ ಪಕ್ಷದಲ್ಲಿ ಯಾಕೆ ಇದ್ದೀಯಾ? ರಾಜೀನಾಮೆ ಕೊಟ್ಟು ಹೊರನಡೆದು ಮಾತನಾಡು” ಎಂದು ನಿರಾಣಿ ಆಕ್ರೋಶ ಹೊರಹಾಕಿದರು.

ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ಬೇಕು ಎಂದು ಕೆಲವು ನಾಯಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರದ ಭಾಗವಾಗಿರುವ ಪಂಚಮಸಾಲಿ ಸಮುದಾಯದ ನಾಯಕರು, ಈ ಹೋರಾಟ ಬಿಜೆಪಿಯ ಹೋರಾಟ ಎಂದು ಬಿಂಬಿಸುತ್ತಿದ್ದಾರೆ. ಅದರಲ್ಲೂ ಯತ್ನಾಳ ಹಾಗೂ ನಿರಾಣಿ ವೈಯಕ್ತಿಕ ದಾಳಿಯಲ್ಲಿ ನಿರತರಾಗಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ಸಮುದಾಯದ ನಾಯಕರಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇದರಿಂದ ಸಮುದಾಯದ ಮೇಲೆ ಯಾವ ಪರಿಣಾಮ ಉಂಟು ಮಾಡಬಹುದೆಂಬುದು ಸದ್ಯದ ಕುತೂಹಲವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...