Homeಮುಖಪುಟ2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

2023 ರ ನ್ಯೂಯಾರ್ಕ್ ಟೈಮ್ಸ್ 52 ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಕೇರಳ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ತೀವ್ರ ಹೊಡೆತ ಬಿದ್ದಿದ್ದ ಪ್ರವಾಸೋದ್ಯಮವು ಇದೀಗ ಮತ್ತೆ ಚೇತರಿಸಿಕೊಳ್ಳುತ್ತಿದೆ. 2023ರಲ್ಲಿ ಪ್ರವಾಸ ಮಾಡಲು ಅತ್ಯುತ್ತಮ 52 ಸ್ಥಳಗಳನ್ನು ನ್ಯೂಯಾರ್ಕ್‌ ಟೈಮ್ಸ್‌ ಪಟ್ಟಿ ಮಾಡಿದ್ದು ಅದರಲ್ಲಿ ಕೇರಳವು ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿ ಕಂಡು ಬಂದ ಭಾರತದ ಏಕೈಕ ಪ್ರದೇಶವಾಗಿ ಕೇರಳ ಕಾಣಿಸಿಕೊಂಡಿದೆ.

ನೈಸರ್ಗಿಕ ಸೌಂದರ್ಯಕ್ಕಾಗಿ ‘ದೇವರ ಸ್ವಂತ ನಾಡು’ ಎಂದು ಕರೆಯಲ್ಪಡುವ ಕೇರಳ, ತನ್ನ ರಮಣೀಯ ಪ್ರಕೃತಿ, ಪಾಕಪದ್ಧತಿ ಮತ್ತು ಹಿನ್ನೀರು ಹೆಸರುವಾಸಿಯಾಗಿದೆ. ಕೇರಳದ ಜೊತೆಗೆ ಲಂಡನ್, ಮೊರಿಯೊಕಾ, ಪಾಮ್ ಸ್ಪ್ರಿಂಗ್ಸ್ ಮತ್ತು ಗ್ರೀನ್‌ವಿಲ್ಲೆ ಸೇರಿದಂತೆ ಒಟ್ಟು 52 ಸ್ಥಳಗಳನ್ನು ನ್ಯೂಯಾರ್ಕ್ ಟೈಮ್ಸ್‌‌ ಪಟ್ಟಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳವು ಕಡಲತೀರಗಳು, ಗಿರಿಧಾಮಗಳು ಮತ್ತು ವಿವಿಧ ಪ್ರಕೃತಿಯ ಸ್ಥಳಾಕೃತಿಗಳಿಂದ ಕೂಡಿದೆ. ಇದು ಎಲ್ಲಾ ರೀತಿಯ ಪ್ರಯಾಣಿಕರನ್ನು ಆಕರ್ಷಿಸುವ ಪ್ರಯಾಣದ ತಾಣವಾಗಿದೆ.

ಸುಮಾರು ಎರಡು ವರ್ಷಗಳ ಕೊರೊನಾ ನಿರ್ಬಂಧಗಳ ನಂತರ ಪ್ರವಾಸೋದ್ಯಮ ಮತ್ತೆ ತೆರೆದುಕೊಳ್ಳುತ್ತುದ್ದು, ಹೆಚ್ಚಿನ ಜನರು ಪ್ರವಾಸ ಹೋಗಲು ಸ್ಥಳಗಳನ್ನು ಹುಡುಕುತ್ತಿದ್ದಾರೆ. ನ್ಯೂಯಾರ್ಕ್ ಟೈಮ್ಸ್‌ ಪಟ್ಟಿಯಲ್ಲಿ ಕೇರಳದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಗುರುತಿಸಿರುವುದು ರಾಜ್ಯಕ್ಕೆ ವಿಶ್ವದಾದ್ಯಂತ ಜನರನ್ನು ಆಕರ್ಷಿಸುತ್ತದೆ.

ರಾಜ್ಯಕ್ಕೆ ಪ್ರಯಾಣಿಸಲು ಯೋಜಿಸುತ್ತಿದ್ದರೆ ಕೇರಳದ ಹಲವಾರು ಸ್ಥಳಗಳಿದ್ದು, ಅವುಗಳಲ್ಲಿ ಕುಮಾರಕೋಮ್ ತನ್ನ ಸುಂದರವಾದ ಹಿನ್ನೀರಿಗೆ ಪ್ರಸಿದ್ದವಾಗಿದೆ. ಅಲಪ್ಪುಳದ ಕಡಲತೀರಗಳು, ಮುನ್ನಾರ್‌ನ ಮಂಜಿನ ಬೆಟ್ಟಗಳು ಮತ್ತು ಕಣ್ಣೂರು ಮತ್ತು ತಿರುವನಂತಪುರಂನ ಐತಿಹಾಸಿಕ ಸ್ಥಳಗಳು ಸೇರಿವೆ.

ರಾಜ್ಯವು ತನ್ನ ಪಾಕಪದ್ಧತಿಯಲ್ಲಿ ವೈವಿಧ್ಯಮಯ ಸಮುದ್ರಾಹಾರ ಭಕ್ಷ್ಯಗಳು, ಸಸ್ಯಾಹಾರಿ ಭಕ್ಷ್ಯಗಳು, ತಿಂಡಿಗಳು, ಪಾನೀಯಗಳಿಗೆ ಕೂಡಾ ಹೆಸರವಾಸಿಯಾಗಿದೆ. ಕೋಝಿಕ್ಕೋಡ್‌ನ ಉತ್ತರದ ಜಿಲ್ಲೆಯನ್ನು ವಿಶೇಷವಾಗಿ ರಾಜ್ಯದ ಆಹಾರ ನಗರ ಎಂದು ಕರೆಯಲಾಗುತ್ತದೆ. ಇಷ್ಟೆ ಅಲ್ಲದೆ, ಕಲಾಭಿಮಾನಿಗಳಿಗೆ ಕೇರಳ ಆಕರ್ಷನೆಯ ತಾಣವಾಗಿದ್ದು, ಹಲವಾರು ಜಾನಪದ ಆಚರಣೆಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...