Homeದಲಿತ್ ಫೈಲ್ಸ್ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

- Advertisement -
- Advertisement -

“ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ದುಷ್ಕರ್ಮಿಗಳು ಮಲವನ್ನು ಬೆರೆಸಿದ್ದಾರೆ ಎಂದು ಕಳೆದ ತಿಂಗಳು ದೂರು ನೀಡಿದ್ದ ವೆಂಗವಾಯಲ್ ಗ್ರಾಮಸ್ಥರಿಗೆ ಪುದುಕ್ಕೋಟೈ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಖ್ಯಾತ ಸಿನಿಮಾ ನಿರ್ದೇಶಕ ಪ.ರಂಜಿತ್‌ ಶುಕ್ರವಾರ ಆರೋಪಿಸಿದ್ದಾರೆ.

“ಈ ಅಪರಾಧ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಾಯಿಸುತ್ತಿದ್ದಾರೆ. ಈ ಅಪರಾಧದ ಹಿಂದೆ ಸಂತ್ರಸ್ತರೇ ಇರುವುದಾಗಿ ಪೊಲೀಸರು ಆರೋಪಿಸುತ್ತಿದ್ದಾರೆ” ಎಂದು ರಂಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಮನಿತ ಸಮುದಾಯಗಳ ಪರವಾಗಿ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುವ ಮೂಲಕ ದಲಿತ ಅಸ್ಮಿತೆಗೆ ಒತ್ತು ನೀಡಿರುವ ಅಂಬೇಡ್ಕರ್‌ವಾದಿ ರಂಜಿತ್‌, “ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ” ಎಂದಿದ್ದಾರೆ.

“ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ. ಪುದುಕ್ಕೋಟೈನ ವೆಂಗವಯಲ್ ಗ್ರಾಮದಲ್ಲಿ ಮನುಷ್ಯರ ಮಲವನ್ನು ಬೆರೆಸಿದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸದೆ ತಮಿಳುನಾಡು ಪೊಲೀಸ್ ಇಲಾಖೆಯು ತನಿಖೆಯ ಹೆಸರಿನಲ್ಲಿ ಸಂತ್ರಸ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಈ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದಲಿತರೇ ಹೆಚ್ಚಾಗಿರುವ ಗ್ರಾಮದ ನಿವಾಸಿಗಳನ್ನು ಭೇಟಿಯಾಗಿ ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕರು ಮತ್ತು ಆದಿ ದ್ರಾವಿಡ ಕಲ್ಯಾಣ ಸಚಿವರಿಗೆ ಧೈರ್ಯವಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೆಲವು ಮಕ್ಕಳು ಅಸ್ವಸ್ಥತೆ ಅನುಭವಿಸಿದ ನಂತರ ಅನ್ನವಾಸಲ್ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಗ್ರಾಮಕ್ಕೆ ಪೂರೈಕೆಯಾಗುವ ನೀರು ಕಲುಷಿತವಾಗಿದೆಯೇ ಎಂದು ಪರಿಶೀಲಿಸುವಂತೆ ಅವರ ಪೋಷಕರಿಗೆ ತಿಳಿಸಿದರು. ಆಗ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಟ್ಯಾಂಕ್‌ ಪರಿಶೀಲಿಸಿದಾಗ ಅದರಲ್ಲಿ ಮಲಮೂತ್ರ ಪತ್ತೆಯಾಗಿತ್ತು.

ಈ ಘಟನೆಯು ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕವಿತಾ ರಾಮು ಮತ್ತು ಎಸ್ಪಿ ವಂದಿತಾ ಪಾಂಡೆ ಅವರು ಪ್ರಕರಣದ ಕುರಿತು ಗಮನ ಹರಿಸಿದ ನಂತರ ಐಪಿಸಿ ಸೆಕ್ಷನ್ 277 (ಯಾವುದೇ ಸಾರ್ವಜನಿಕ ಟ್ಯಾಂಕ್‌ ಅಥವಾ ಜಲಾಶಯದ ನೀರನ್ನು ಕಲುಷಿತಗೊಳಿಸುವುದು), 328 (ಅಪರಾಧದ ಉದ್ದೇಶದೊಂದಿಗೆ ವಿಷವನ್ನು ಬಳಸುವ ಮೂಲಕ ನೋವುಂಟು ಮಾಡುವುದು) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ಶೀಘ್ರದಲ್ಲೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.

ಇದನ್ನೂ ಓದಿರಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಎರಡು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಾ, “ರಾಜ್ಯವು ಕೋಮು ವಿಭಜಕ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಎದುರಿಸಲಿದೆ” ಎಂದು ಹೇಳಿದ್ದರು. ಘಟನೆಯ ಕುರಿತು ಶಾಸಕರು ವಿಶೇಷ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸ್ಟಾಲಿನ್, “ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ ಎಂಬುದನ್ನು ಈ ಘಟನೆ ಸೂಚಿಸುತ್ತದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ 70 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಹೇಳಿದ್ದರು.

“7 ಲಕ್ಷ ರೂ. ವೆಚ್ಚದಲ್ಲಿ ಹೊಸ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಎಲ್ಲಾ 32 ಮನೆಗಳಿಗೆ ಹೊಸ ಕುಡಿಯುವ ನೀರಿನ ಪೈಪ್ ಸಂಪರ್ಕವನ್ನು ನೀಡಲಾಗುವುದು. ನೈರ್ಮಲ್ಯ ನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ದಿನಕ್ಕೆ ಎರಡು ಬಾರಿ ಟ್ರಕ್‌ಗಳನ್ನು ಬಳಸಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...