Homeಮುಖಪುಟಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

- Advertisement -
- Advertisement -

ಉತ್ತರಾಖಂಡ್‌ನ ಜೋಶಿಮಠ ಪಟ್ಟಣದಲ್ಲಿ ಉಂಟಾಗುತ್ತಿರುವ ಭೂ ಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಅಥವಾ ಆನ್‌ಲೈನ್‌ ವೇದಿಕೆಗಳಲ್ಲಿ ಅಂಕಿ-ಅಂಶಗಳನ್ನು ಹಂಚಿಕೊಳ್ಳಬಾರದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಇಲ್ಲಿನ ನಿವಾಸಿಗಳಲ್ಲಿ ಭೀತಿ ಉಂಟಾಗದಿರಲೆಂದು ಈ ಕ್ರಮ ಜರುಗಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಡಿಸೆಂಬರ್ 27 ಮತ್ತು ಜನವರಿ 8ರ ನಡುವೆ ಜೋಶಿಮಠ ಪಟ್ಟಣವು 5.4 ಸೆಂಟಿಮೀಟರ್‌ಗಳಷ್ಟು ಕುಸಿದಿದೆ ಎಂದು ಇಸ್ರೋ ಬಿಡುಗಡೆ ಮಾಡಿದ ಚಿತ್ರಗಳು ತೋರಿಸಿದ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.

ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಈ ವಿಷಯಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಬಿಡುಗಡೆ ಮಾಡುತ್ತಿವೆ. ಪರಿಸ್ಥಿತಿಯ ಕುರಿತು ತಮ್ಮದೇ ಆದ ವ್ಯಾಖ್ಯಾನಗಳ ಜೊತೆಯಲ್ಲಿ ಮಾಧ್ಯಮಗಳೊಂದಿಗೆ ಸಂವಹನ ನಡೆಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಸರ್ಕಾರಿ ಇಲಾಖೆಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇದು ಸಂತ್ರಸ್ತ ನಿವಾಸಿಗಳಲ್ಲಿ ಮಾತ್ರವಲ್ಲದೆ ದೇಶದ ನಾಗರಿಕರಲ್ಲಿಯೂ ಗೊಂದಲವನ್ನು ಸೃಷ್ಟಿಸುತ್ತಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಗುರುವಾರ ಬಿಡುಗಡೆ ಮಾಡಿದ ಉಪಗ್ರಹ ಚಿತ್ರಗಳು ಜೋಶಿಮಠದ ಬೆಳವಣಿಗೆಗಳ ಕುರಿತು ಬೆಳಕು ಚೆಲ್ಲಿದ್ದವು. ಡಿಸೆಂಬರ್ 27 ರಿಂದ ಜನವರಿ 8ರವರೆಗಿನ 12 ದಿನಗಳಲ್ಲಿ ದಾಖಲಾಗಿರುವ ಭೂ ಕುಸಿತವು, ಏಪ್ರಿಲ್ ಮತ್ತು ನವೆಂಬರ್ ನಡುವೆ ಘಟಿಸಿದ ಒಂಬತ್ತು ಸೆಂಟಿಮೀಟರ್‌ಗಳ ಕುಸಿತಕ್ಕಿಂತ ಹೆಚ್ಚು ವೇಗವಾಗಿದೆ ಎಂದು ವಿವರಿಸಿತ್ತು.

ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್‌ನ ವರದಿಯು ಸೆಂಟ್ರಲ್‌ ಜೋಶಿಮಠದಲ್ಲಿರುವ ಭಾರತೀಯ ಸೇನೆಯ ಹೆಲಿಪ್ಯಾಡ್ ಮತ್ತು ನರಸಿಂಹ ದೇವಾಲಯ ಇರುವ ವಲಯವನ್ನು ಗುರುತಿಸಿತ್ತು.

ಗುರುವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿ, “ದುರಂತದ ಬಗ್ಗೆ ವದಂತಿಗಳು ಹಬ್ಬುತ್ತಿವೆ. ಜೋಶಿಮಠ ಪಟ್ಟಣದ ಬಗ್ಗೆ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ. ಇದು ಇಲ್ಲಿನ ನಿವಾಸಿಗಳು ಮತ್ತು ಜೋಶಿಮಠದ ಆರ್ಥಿಕತೆಗೆ ಹಾನಿಯನ್ನು ಉಂಟು ಮಾಡುತ್ತಿದೆ” ಎಂದಿದ್ದಾರೆ.

“ಚಾರ್‌ ಧಾಮ್‌ ಯಾತ್ರೆಯ ಮೂಲಕ ನಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದ್ದೇವೆ. ಜೋಶಿಮಠವು ಸಂಪೂರ್ಣ ಹಾನಿಗೊಳಗಾಗಿದೆ, ಅಸುರಕ್ಷಿತವಾಗಿದೆ ಎಂದು ಆತಂಕ ಸೃಷ್ಟಿಸಬೇಡಿ” ಎಂದು ಮನವಿ ಮಾಡಿದ್ದಾರೆ.

ಜೋಶಿಮಠ ಮುಳುಗುತ್ತಿರುವುದೇಕೆ?

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಇದನ್ನೂ ಓದಿರಿ: ಬೆಂಗಳೂರು ಮೆಟ್ರೋ ಪಿಲ್ಲರ್‌ ದುರಂತ: ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...