Homeಮುಖಪುಟಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

- Advertisement -
- Advertisement -

ಉತ್ತರಾಖಂಡ್‌ನ ಜೋಶಿಮಠ ಪಟ್ಟಣದಲ್ಲಿ ಉಂಟಾಗುತ್ತಿರುವ ಭೂ ಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಅಥವಾ ಆನ್‌ಲೈನ್‌ ವೇದಿಕೆಗಳಲ್ಲಿ ಅಂಕಿ-ಅಂಶಗಳನ್ನು ಹಂಚಿಕೊಳ್ಳಬಾರದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಇಲ್ಲಿನ ನಿವಾಸಿಗಳಲ್ಲಿ ಭೀತಿ ಉಂಟಾಗದಿರಲೆಂದು ಈ ಕ್ರಮ ಜರುಗಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಚಿತ್ರಗಳನ್ನು ಬಿಡುಗಡೆ ಮಾಡಿತ್ತು. ಡಿಸೆಂಬರ್ 27 ಮತ್ತು ಜನವರಿ 8ರ ನಡುವೆ ಜೋಶಿಮಠ ಪಟ್ಟಣವು 5.4 ಸೆಂಟಿಮೀಟರ್‌ಗಳಷ್ಟು ಕುಸಿದಿದೆ ಎಂದು ಇಸ್ರೋ ಬಿಡುಗಡೆ ಮಾಡಿದ ಚಿತ್ರಗಳು ತೋರಿಸಿದ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.

ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಈ ವಿಷಯಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಬಿಡುಗಡೆ ಮಾಡುತ್ತಿವೆ. ಪರಿಸ್ಥಿತಿಯ ಕುರಿತು ತಮ್ಮದೇ ಆದ ವ್ಯಾಖ್ಯಾನಗಳ ಜೊತೆಯಲ್ಲಿ ಮಾಧ್ಯಮಗಳೊಂದಿಗೆ ಸಂವಹನ ನಡೆಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಸರ್ಕಾರಿ ಇಲಾಖೆಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ಇದು ಸಂತ್ರಸ್ತ ನಿವಾಸಿಗಳಲ್ಲಿ ಮಾತ್ರವಲ್ಲದೆ ದೇಶದ ನಾಗರಿಕರಲ್ಲಿಯೂ ಗೊಂದಲವನ್ನು ಸೃಷ್ಟಿಸುತ್ತಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಗುರುವಾರ ಬಿಡುಗಡೆ ಮಾಡಿದ ಉಪಗ್ರಹ ಚಿತ್ರಗಳು ಜೋಶಿಮಠದ ಬೆಳವಣಿಗೆಗಳ ಕುರಿತು ಬೆಳಕು ಚೆಲ್ಲಿದ್ದವು. ಡಿಸೆಂಬರ್ 27 ರಿಂದ ಜನವರಿ 8ರವರೆಗಿನ 12 ದಿನಗಳಲ್ಲಿ ದಾಖಲಾಗಿರುವ ಭೂ ಕುಸಿತವು, ಏಪ್ರಿಲ್ ಮತ್ತು ನವೆಂಬರ್ ನಡುವೆ ಘಟಿಸಿದ ಒಂಬತ್ತು ಸೆಂಟಿಮೀಟರ್‌ಗಳ ಕುಸಿತಕ್ಕಿಂತ ಹೆಚ್ಚು ವೇಗವಾಗಿದೆ ಎಂದು ವಿವರಿಸಿತ್ತು.

ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್‌ನ ವರದಿಯು ಸೆಂಟ್ರಲ್‌ ಜೋಶಿಮಠದಲ್ಲಿರುವ ಭಾರತೀಯ ಸೇನೆಯ ಹೆಲಿಪ್ಯಾಡ್ ಮತ್ತು ನರಸಿಂಹ ದೇವಾಲಯ ಇರುವ ವಲಯವನ್ನು ಗುರುತಿಸಿತ್ತು.

ಗುರುವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿ, “ದುರಂತದ ಬಗ್ಗೆ ವದಂತಿಗಳು ಹಬ್ಬುತ್ತಿವೆ. ಜೋಶಿಮಠ ಪಟ್ಟಣದ ಬಗ್ಗೆ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ. ಇದು ಇಲ್ಲಿನ ನಿವಾಸಿಗಳು ಮತ್ತು ಜೋಶಿಮಠದ ಆರ್ಥಿಕತೆಗೆ ಹಾನಿಯನ್ನು ಉಂಟು ಮಾಡುತ್ತಿದೆ” ಎಂದಿದ್ದಾರೆ.

“ಚಾರ್‌ ಧಾಮ್‌ ಯಾತ್ರೆಯ ಮೂಲಕ ನಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದ್ದೇವೆ. ಜೋಶಿಮಠವು ಸಂಪೂರ್ಣ ಹಾನಿಗೊಳಗಾಗಿದೆ, ಅಸುರಕ್ಷಿತವಾಗಿದೆ ಎಂದು ಆತಂಕ ಸೃಷ್ಟಿಸಬೇಡಿ” ಎಂದು ಮನವಿ ಮಾಡಿದ್ದಾರೆ.

ಜೋಶಿಮಠ ಮುಳುಗುತ್ತಿರುವುದೇಕೆ?

ಪ್ರಕೃತಿ ವಿಕೋಪಗಳಿಂದ ನಲುಗಿರುವ ಉತ್ತರಖಾಂಡ ರಾಜ್ಯ ಮತ್ತೆ ಬಿಕ್ಕಟ್ಟಿಗೆ ಸಿಲುಕಿದೆ. ಇಲ್ಲಿನ ಜೋಶಿಮಠ ಪಟ್ಟಣದಲ್ಲಿನ ಮನೆಗಳ ಗೋಡೆಗಳಲ್ಲಿ, ಹೊಲೆಗಳಲ್ಲಿ, ರಸ್ತೆಗಳಲ್ಲಿ ಬಿರುಕುಗಳು ದೊಡ್ಡದಾಗಿ ಕಾಣಿಸಲಾರಂಭಿಸಿವೆ. ಬೆಟ್ಟದ ಪಟ್ಟಣವೆಂದೇ ಖ್ಯಾತವಾದ ಜೋಶಿಮಠದ ನಿವಾಸಿಗಳು ತೊಂದರೆಗೆ ಸಿಲುಕಿದ್ದಾರೆ. ಅವರ ಊರು ಮುಳುಗುತ್ತಿದೆ.

ಈ ಪ್ರದೇಶವನ್ನು ಭೂಕುಸಿತ ಮತ್ತು ಭೂ ಕುಸಿತ ಪೀಡಿತ ಪ್ರದೇಶ ಎಂದು ಜನವರಿ 8 ರಂದು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ. ಜನವರಿ 9ರ ಹೊತ್ತಿಗೆ, 678 ಕಟ್ಟಡಗಳು (ಮನೆಗಳು ಸೇರಿದಂತೆ) ಬಿರುಕುಬಿಟ್ಟಿವೆ. ಅಧಿಕಾರಿಗಳು 80 ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಸಮೀಪದ ಪಟ್ಟಣಗಳಾದ ರೈನಿ ಮತ್ತು ಕರ್ಣಪ್ರಯಾಗದಲ್ಲಿನ ಮನೆಗಳಲ್ಲಿಯೂ ಬಿರುಕುಗಳು ಕಾಣಿಸಿಕೊಂಡಿವೆ.

ತಪೋವನ ವಿಷ್ಣುಘಡ ಜಲವಿದ್ಯುತ್ ಯೋಜನೆ ಭಾಗವಾಗಿ ಕೈಗೊಂಡ ಕಾಮಗಾರಿಯು ತಮ್ಮ ಪಟ್ಟಣ ಮುಳುಗಲು ಒಂದು ಕಾರಣ ಎಂದು ಜೋಶಿಮಠದ ನಿವಾಸಿಗಳು ಆರೋಪಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೈಗೊಂಡ ಚಾರ್ ಧಾಮ್ ಯೋಜನೆ (900  ಕಿಮೀ ಉದ್ದದ ರಸ್ತೆ ನಿರ್ಮಾಣ) ಪ್ರಾಕೃತಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿದೆ ಎಂದು ತಜ್ಞರು ಬೊಟ್ಟು ಮಾಡುತ್ತಾರೆ.

ಈ ಭೂಭಾಗದ ಕುರಿತು 40 ವರ್ಷಗಳ ಹಿಂದೆಯೇ ಮಹತ್ವದ ವರದಿಗಳು ಬಂದಿವೆ. ಅದರ ಹೊರತಾಗಿಯೂ ಸರ್ಕಾರಗಳು ಇಂತಹ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಪ್ರದೇಶದಲ್ಲಿ ಭಾರೀ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಬೇಕು ಎಂದು ಎಚ್ಚರಿಸಿವೆ. ಹವಾಮಾನ ಬದಲಾವಣೆ ಉಲ್ಬಣದ ಜೊತೆಗೆ, ಸದ್ಯದ ಪರಿಸ್ಥಿತಿಯು ಈ ಪ್ರದೇಶಕ್ಕೆ ಒಳ್ಳೆಯದಾಗಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಜೋಶಿಮಠ ಭೂಕುಸಿತ ಪೀಡಿತ ಪ್ರದೇಶವಾಗಿದೆ. ಜೋಶಿಮಠ-ಬದರಿನಾಥ್ ರಸ್ತೆ ಕಾರಿಡಾರ್‌ನಲ್ಲಿ ಭೂಕುಸಿತದ ಅಪಾಯದ ಪ್ರದೇಶಗಳನ್ನು ಪರೀಕ್ಷೆ ಮಾಡಿದ 2007ರ ಅಧ್ಯಯನವು ಜೋಶಿಮಠ ಪಟ್ಟಣವು ಪ್ರದೇಶದ ಅತ್ಯಂತ ಅಪಾಯಕಾರಿ ಭೂಕುಸಿತ ಪೀಡಿತ ಸ್ಥಳಗಳಲ್ಲಿ ಒಂದಾಗಿದೆ ಎಂದು ಎಚ್ಚರಿಸಿತ್ತು. ವಾಸ್ತವವಾಗಿ 70ರ ದಶಕದಲ್ಲಿಯೇ ಜೋಶಿಮಠದಲ್ಲಿ ಆರಂಭವಾಗಿದ್ದ ಭೂಕುಸಿತಗಳು ಅಲ್ಲಿನ ನಿವಾಸಿಗಳನ್ನು ಚಿಂತೆಗೀಡುಮಾಡಿದ್ದವು. 1976ರಲ್ಲಿ ಅಂದಿನ ಸರ್ಕಾರವು ಎಂ.ಸಿ. ಮಿಶ್ರಾ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅಲ್ಪಾವಧಿ ಮತ್ತು ದೀರ್ಘಾವಧಿ ಕ್ರಮಗಳನ್ನು ಜರುಗಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಪರ್ವತ ತಪ್ಪಲಿನಲ್ಲಿ ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ನಡೆಸಬಾರದು ಎಂದಿತ್ತು. ಜೊತೆಗೆ ಇಲ್ಲಿನ ಪ್ರಾಕೃತಿಕ ಗುಣದ ಬಗ್ಗೆ ಬೆಳಕು ಚೆಲ್ಲಿತ್ತು.

ಇದನ್ನೂ ಓದಿರಿ: ಬೆಂಗಳೂರು ಮೆಟ್ರೋ ಪಿಲ್ಲರ್‌ ದುರಂತ: ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್

ಜೋಶಿಮಠದ ಪಟ್ಟಣವು ಭೂಕುಸಿತಕ್ಕೆ ಹೆಸರುವಾಸಿ. ಇಲ್ಲಿನ ಪ್ರದೇಶ ಮರಳು ಮತ್ತು ಕಲ್ಲಿನ ಮಿಶ್ರಣವಾಗಿದೆ. ಮಳೆ ಅಥವಾ ಹಿಮ ಕರಗುವಿಕೆಯಿಂದ ಉಂಟಾಗುವ ಮೇಲ್ಮೈ ನೀರು ಮಣ್ಣನ್ನು ಸಡಿಲಗೊಳಿಸಬಹುದು.  ಭೂಮಿಯನ್ನು ಅಸ್ಥಿರಗೊಳಿಸಬಹುದು, ಇದು ಭೂಕುಸಿತಗಳಿಗೆ ಕಾರಣವಾಗುತ್ತದೆ ಎಂ.ಸಿ.ಮಿಶ್ರಾ ವರದಿ ಗಮನ ಸೆಳೆದಿದೆ.

ಅಂತರ್ಜಲವನ್ನು ಹೊರತೆಗೆಯುವುದು ಸಹ ಕುಸಿತಕ್ಕೆ ಕಾರಣವಾಗಬಹುದು ಎಂದು ಅಧ್ಯಯನಗಳು ತೋರಿಸುತ್ತವೆ. ಬ್ಲಾಸ್ಟ್‌ ಮಾಡುವುದು, ಸುರಂಗಗಳನ್ನು ನಿರ್ಮಿಸುವುದು (ನಿವಾಸಿಗಳ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ತಪೋವನ-ವಿಷ್ಣುಗಡ ಜಲವಿದ್ಯುತ್ ಯೋಜನೆ) ಕೂಡ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...