Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...