Homeಕರ್ನಾಟಕವೈಎಸ್‌ವಿ ದತ್ತಾ, ನಾಗೇಶ್ 'ಕೈ' ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

- Advertisement -
- Advertisement -

“ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಪಕ್ಷದ ಮೇಲೆ ಜನರ ವಿಶ್ವಾಸ ಕಡಿಮೆ ಆಗುತ್ತಿದೆ. ಹಾಗಾಗಿ ಬೇರೆ ಪಕ್ಷಗಳ ಅನೇಕ ನಾಯಕರು ಕಾಂಗ್ರೆಸ್ ಸೇರಲು ಮುಂದೆ ಬಂದಿದ್ದಾರೆ” ಎಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಾಗೇಶ್, ವೈಎಸ್ವಿ ದತ್ತಾ ಅವರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸಂಕ್ರಮಣ, ರೈತರ ಬದುಕು ಶುಭಾರಂಭವಾಗುವ ಪವಿತ್ರ ದಿನ ನಾವೆಲ್ಲ ಇಂದು ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಸೇರಿದ್ದೇವೆ.

ಬಿಜೆಪಿಗೆ ಸರ್ಕಾರ ನಡೆಸಲು, ಜನರಿಗೆ ಉತ್ತಮ ಆಡಳಿತ ನೀಡಲು ಆಗುತ್ತಿಲ್ಲ. ಜನ ನಿತ್ಯ ನೋವು ಅನುಭವಿಸುತ್ತಿದ್ದಾರೆ ಎಂದು ಇಂದು ಅನೇಕ ನಾಯಕರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಬಿಜೆಪಿ ಸೇರಿದವರು, ಬಿಜೆಪಿಯಲ್ಲಿ ಇರುವ ಬಹಳ ನಾಯಕರು ಒಳಗೊಳಗೇ ಅನೇಕ ಚರ್ಚೆ ಮಾಡುತ್ತಿದ್ದು, ಆ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದರು.

ಇಂದು ಮೂವರು ಪ್ರಮುಖ ನಾಯಕರು ಕಾಂಗ್ರೆಸ್ ಸೇರಲು ಬಂದಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ನಾಯಕರಾಗಿದ್ದ ವೈಎಸ್ ವಿ ದತ್ತಾ ಅವರು, ಬಿಜೆಪಿ ಸಹ ಸದಸ್ಯರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದ ಹಾಲಿ ಶಾಸಕ ನಾಗೇಶ್ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿ ವಿಧಾನಸಭೆಯಲ್ಲಿ ಸ್ಥಾನ ಪಡೆಯಲಿದ್ದಾರೆ. ಇವರಿಗೆ ಕಾಂಗ್ರೆಸ್ ಪಕ್ಷದ ಸಹ ಸದಸ್ಯತ್ವ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ದತ್ತಾ ಅವರನ್ನು ಕಳೆದ 48 ವರ್ಷಗಳಿಂದ ನಾನು ಬಲ್ಲೆ. ಅವರು ಪಾಠ ಮಾಡುವಾಗ ನಾನು ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದೆ. ಬಾಲ್ಯದಿಂದ ನಾವು ಆತ್ಮೀಯರು. ಅನೇಕ ಸಂಘಟನೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರು ಕಡೂರು ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷದ ವಿವಿಧ ಹುದ್ದೆಗಳ ನಿರ್ವಹಣೆ ಮಾಡಿದ್ದಾರೆ. ಅವರು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಜನತಾದಳದಲ್ಲಿ ಭವಿಷ್ಯ ಇಲ್ಲ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ರಾಹುಲ್ ಗಾಂಧಿ ಅವರ ಶ್ರಮ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಗಮನದಲ್ಲಿ ಇಟ್ಟುಕೊಂಡು ನಮ್ಮ ಪಕ್ಷಕ್ಕೆ ಸೇರುತ್ತಿದ್ದು, ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದರು.

ಈ ನಾಯಕರ ಜೊತೆಗೆ  ಹಲವು ಪ್ರಮುಖ ನಾಯಕರು ಪಕ್ಷ ಸೇರುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಪಕ್ಷದ ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿದ್ದೇವೆ. ಪಕ್ಷ ತನ್ನ ನಾಯಕರು ಹಾಗೂ ಕಾರ್ಯಕರ್ತರನ್ನು ವಿಸ್ತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಮೈಸೂರಿನ ಮೂಡಾ ಅಧ್ಯಕ್ಷರಾಗಿ ಕೆಲಸ ಮಾಡಿರುವ ಮೋಹನ್ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿದ್ದರು. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಕೋಲಾರ ಯುವ ಜನತಾದಳದ ಅಧ್ಯಕ್ಷರಾಗಿ ಕೆಲಸ ಮಾಡಿದ ದಯಾನಂದ್ ಅವರು ಪಕ್ಷಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಇದು ಆರಂಭ. ಇನ್ನು ಮುಂದೆ ಪ್ರತಿವಾರ ಅಥವಾ ಮೂರು ದಿನಕ್ಕೆ ಒಂದೊಂದು ದಿನ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಪರ್ವ ಆರಂಭವಾಗಿದ್ದು, ರಾಜ್ಯದ ಜನ ಈಗಾಗಲೇ ತಮ್ಮ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಗೇಶ್ ಅವರು ಹಾಲಿ ಶಾಸಕರು. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಪಕ್ಷದ ಕಡೆ ನೋಡಿದ್ದಾರೆ ಎಂದರೆ ಅವರ ಅನುಭವ, ಲೆಕ್ಕಾಚಾರ ಕೆಲಸ ಮಾಡಿದೆ. ಇನ್ನು ದತ್ತಾ ಅವರಿಗೆ ಜನರ ನಾಡಿ ಮಿಡಿತ ಗೊತ್ತಿದೆ. ಅವರಿಗೆ ತಮ್ಮದೇ ಆದ ಅನುಭವವಿದೆ. ದಳದ ಪರಿಸ್ಥಿತಿ ಗೊತ್ತಿದೆ. ಈ ಎಲ್ಲ ನಾಯಕರು ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಬೇರೆ ನಾಯಕರ ಷರತ್ತು ಒಪ್ಪಿ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಯಾರು ಬೇಷರತ್ತಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿ ಕೆಲಸ ಮಾಡಲು ಬಯಸುತ್ತಾರೆ ಅಂತಹವರನ್ನು ಮಾತ್ರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪಕ್ಷ ಅವರ ಅರ್ಹತೆಗೆ ತಕ್ಕಂತೆ ಪಕ್ಷ ಅವರಿಗೆ ಸ್ಥಾನಮಾನ ನೀಡಲಿದೆ. ವ್ಯಕ್ತಿಗಿಂತ ನಮಗೆ ಪಕ್ಷ ಮುಖ್ಯ. ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲಾ ರೀತಿಯ ಲೆಕ್ಕಾಚಾರ ಮಾಡಿ ನಾವು ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...