Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...