Homeಸಿನಿಮಾಕ್ರೀಡೆಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

- Advertisement -
- Advertisement -

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಅಂತರದಿಂದ ಗೆಲುವು ಪಡೆದ ಭಾರತ ತಂಡವು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದಿದೆ.

317ರನ್‌ಗಳ ಅಂತರದಿಂದ ಗೆದ್ದು ಅತಿ ಹೆಚ್ಚು ರನ್‌ಗಳ ಅಂತರದಿಂದ ವಿಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. 50 ಓವರ್‌ಗಳಲ್ಲಿ 390 ರನ್‌ ಗಳಿಸಿ 391 ರನ್‌ಗಳ ಟಾರ್ಗೆಟ್ ನೀಡಿದ್ದ ಭಾರತ, ಶ್ರೀಲಂಕಾವನ್ನು 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲ್‌ಔಟ್ ಮಾಡುವ ಮೂಲಕ ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು.

2008ರಲ್ಲಿ ನ್ಯೂಜಿಲಾಂಡ್ ತಂಡವು ಐರ್ಲೆಂಡ್ ವಿರುದ್ಧ 290ರನ್‌ಗಳ ಅಂತರದಿಂದ ಗೆದ್ದದ್ದು ಈವರೆಗಿನ ಅತಿ ಹೆಚ್ಚು ಅಂತರದ ಗೆಲುವಿನ ಸಾಧನೆಯಾಗಿತ್ತು. ಆಫಘಾನಿಸ್ತಾನದ ವಿರುದ್ಧ ಆಸ್ಟ್ರೆಲಿಯಾ 275 ರನ್‌ಗಳ ಅಂತರದಿಂದ 2015ರಲ್ಲಿ ಗೆದ್ದಿತ್ತು.

ಭಾರತ ತಂಡದ ಪರವಾಗಿ ಹತ್ತು ಓವರ್‌ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 32 ರನ್ ನೀಡಿ 4 ವಿಕೆಟ್ ಕಬಳಿಸಿದರು. ಐದು ಓವರ್‌ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ 16 ರನ್‌ ನೀಡಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 6 ಓವರ್‌ ಎಸೆದು 20 ರನ್‌ ನೀಡಿ 2 ವಿಕೆಟ್ ಗಳಿಸಿದರು.

ಅತಿ ಹೆಚ್ಚು ಅಂತರದಿಂದ ಗೆದ್ದ ತಂಡಗಳ ವಿವರ

ದಾಖಲೆ ಬರೆದ ಕೊಹ್ಲಿ

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ ತೆಂಡೂಲ್ಕರ್‌ರವರ ದಾಖಲೆಯನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿದಿದ್ದಾರೆ. ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 21ನೇ ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾದರು.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 104 ಪಂದ್ಯಗಳಲ್ಲಿ 21 ಶತಕ ಬಾರಿಸಿದ್ದಾರೆ.

ಅಲ್ಲದೆ ತಂಡವೊಂದರ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದಾಖಲೆ ಸಹ ಕೊಹ್ಲಿ ಪಾಲಾಯಿತು. ಸಚಿನ್ ಮತ್ತು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಲಾ 9 ಶತಕ ಸಿಡಿಸಿದ್ದರೆ, ಇಂದಿನ ಪಂದ್ಯದಲ್ಲಿನ ಶತಕದ ಮೂಲಕ ಕೊಹ್ಲಿ ಶ್ರೀಲಂಕಾ ತಂಡದ ವಿರುದ್ಧ 10 ಶತಕಗಳನ್ನು ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 8 ಶತಕಗಳನ್ನು ಬಾರಿಸಿದ್ದಾರೆ.

ಒಟ್ಟಾರೆ ಏಕದಿನ ಶತಕಗಳಲ್ಲಿ ಸಚಿನ್ 49 ಶತಕ ಬಾರಿಸಿದರೆ ಕೊಹ್ಲಿ 46 ಶತಕಗಳನ್ನು ಬಾರಿಸಿ 2ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನೇ ಶತಕ ಇದಾಗಿದೆ. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಕೊಹ್ಲಿ 110 ಬಾಲ್‌ಗಳಲ್ಲಿ 166 ರನ್ ಸಿಡಿಸಿದರು. ಅವರ ಬ್ಯಾಟ್ ಮೂಲಕ 13 ಫೋರ್‌, 8 ಸಿಕ್ಸ್‌ ಮೂಡಿಬಂದವು.

ಶುಭ್‌ಮನ್‌ ಗಿಲ್ ಶತಕ

ಮೊದಲ ಬ್ಯಾಟ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರರು ಭದ್ರಬುನಾದಿ ಹಾಕಿಕೊಟ್ಟರು. 49 ಬಾಲ್‌ಗಳಲ್ಲಿ 42 ರನ್‌ಗಳನ್ನು (2 ಫೋರ್‌, 3 ಸಿಕ್ಸ್‌) ಕ್ಯಾಪ್ಟನ್‌ ರೋಹಿತ್‌ ಶರ್ಮ ಗಳಿಸಿದರೆ, ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಶತಕ ಸಿಡಿಸಿದರು. 97 ಎಸೆಗಳಲ್ಲಿ 116 ರನ್‌ ಗಳಿಸಿದ ಗಿಲ್‌, 14 ಫೋರ್‌, 2 ಸಿಕ್ಸ್‌ ಭಾರಿಸಿದರು. ಆ ನಂತರ ಬಂದ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್‌ (38 ರನ್‌, 32 ಬಾಲ್‌, 2 ಫೋರ್‌, 1 ಸಿಕ್ಸ್‌) ತಂಡ ಉತ್ತಮ ಮೊತ್ತ ಗಳಿಸಲು ಕಾರಣವಾದರು. ಕೆ.ಎಲ್‌.ರಾಹು‌ಲ್ 7 ರನ್‌, ಸೂರ್ಯಕುಮಾರ್‌ ಯಾದವ್‌ 4 ರನ್‌, ಅಕ್ಸರ್ ಪಟೇಲ್‌ ಅಜೇಯ 2 ರನ್‌ ಗಳಿಸಿದರು. ಅಂತಿಮವಾಗಿ ಭಾರತ ಐದು ವಿಕೆಟ್ ನಷ್ಟಕ್ಕೆ 390 ರನ್‌ ಗಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...