Homeಸಿನಿಮಾಕ್ರೀಡೆಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

- Advertisement -
- Advertisement -

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಅಂತರದಿಂದ ಗೆಲುವು ಪಡೆದ ಭಾರತ ತಂಡವು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದಿದೆ.

317ರನ್‌ಗಳ ಅಂತರದಿಂದ ಗೆದ್ದು ಅತಿ ಹೆಚ್ಚು ರನ್‌ಗಳ ಅಂತರದಿಂದ ವಿಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. 50 ಓವರ್‌ಗಳಲ್ಲಿ 390 ರನ್‌ ಗಳಿಸಿ 391 ರನ್‌ಗಳ ಟಾರ್ಗೆಟ್ ನೀಡಿದ್ದ ಭಾರತ, ಶ್ರೀಲಂಕಾವನ್ನು 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲ್‌ಔಟ್ ಮಾಡುವ ಮೂಲಕ ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು.

2008ರಲ್ಲಿ ನ್ಯೂಜಿಲಾಂಡ್ ತಂಡವು ಐರ್ಲೆಂಡ್ ವಿರುದ್ಧ 290ರನ್‌ಗಳ ಅಂತರದಿಂದ ಗೆದ್ದದ್ದು ಈವರೆಗಿನ ಅತಿ ಹೆಚ್ಚು ಅಂತರದ ಗೆಲುವಿನ ಸಾಧನೆಯಾಗಿತ್ತು. ಆಫಘಾನಿಸ್ತಾನದ ವಿರುದ್ಧ ಆಸ್ಟ್ರೆಲಿಯಾ 275 ರನ್‌ಗಳ ಅಂತರದಿಂದ 2015ರಲ್ಲಿ ಗೆದ್ದಿತ್ತು.

ಭಾರತ ತಂಡದ ಪರವಾಗಿ ಹತ್ತು ಓವರ್‌ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 32 ರನ್ ನೀಡಿ 4 ವಿಕೆಟ್ ಕಬಳಿಸಿದರು. ಐದು ಓವರ್‌ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ 16 ರನ್‌ ನೀಡಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 6 ಓವರ್‌ ಎಸೆದು 20 ರನ್‌ ನೀಡಿ 2 ವಿಕೆಟ್ ಗಳಿಸಿದರು.

ಅತಿ ಹೆಚ್ಚು ಅಂತರದಿಂದ ಗೆದ್ದ ತಂಡಗಳ ವಿವರ

ದಾಖಲೆ ಬರೆದ ಕೊಹ್ಲಿ

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ ತೆಂಡೂಲ್ಕರ್‌ರವರ ದಾಖಲೆಯನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿದಿದ್ದಾರೆ. ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 21ನೇ ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾದರು.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 104 ಪಂದ್ಯಗಳಲ್ಲಿ 21 ಶತಕ ಬಾರಿಸಿದ್ದಾರೆ.

ಅಲ್ಲದೆ ತಂಡವೊಂದರ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದಾಖಲೆ ಸಹ ಕೊಹ್ಲಿ ಪಾಲಾಯಿತು. ಸಚಿನ್ ಮತ್ತು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಲಾ 9 ಶತಕ ಸಿಡಿಸಿದ್ದರೆ, ಇಂದಿನ ಪಂದ್ಯದಲ್ಲಿನ ಶತಕದ ಮೂಲಕ ಕೊಹ್ಲಿ ಶ್ರೀಲಂಕಾ ತಂಡದ ವಿರುದ್ಧ 10 ಶತಕಗಳನ್ನು ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 8 ಶತಕಗಳನ್ನು ಬಾರಿಸಿದ್ದಾರೆ.

ಒಟ್ಟಾರೆ ಏಕದಿನ ಶತಕಗಳಲ್ಲಿ ಸಚಿನ್ 49 ಶತಕ ಬಾರಿಸಿದರೆ ಕೊಹ್ಲಿ 46 ಶತಕಗಳನ್ನು ಬಾರಿಸಿ 2ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನೇ ಶತಕ ಇದಾಗಿದೆ. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಕೊಹ್ಲಿ 110 ಬಾಲ್‌ಗಳಲ್ಲಿ 166 ರನ್ ಸಿಡಿಸಿದರು. ಅವರ ಬ್ಯಾಟ್ ಮೂಲಕ 13 ಫೋರ್‌, 8 ಸಿಕ್ಸ್‌ ಮೂಡಿಬಂದವು.

ಶುಭ್‌ಮನ್‌ ಗಿಲ್ ಶತಕ

ಮೊದಲ ಬ್ಯಾಟ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರರು ಭದ್ರಬುನಾದಿ ಹಾಕಿಕೊಟ್ಟರು. 49 ಬಾಲ್‌ಗಳಲ್ಲಿ 42 ರನ್‌ಗಳನ್ನು (2 ಫೋರ್‌, 3 ಸಿಕ್ಸ್‌) ಕ್ಯಾಪ್ಟನ್‌ ರೋಹಿತ್‌ ಶರ್ಮ ಗಳಿಸಿದರೆ, ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಶತಕ ಸಿಡಿಸಿದರು. 97 ಎಸೆಗಳಲ್ಲಿ 116 ರನ್‌ ಗಳಿಸಿದ ಗಿಲ್‌, 14 ಫೋರ್‌, 2 ಸಿಕ್ಸ್‌ ಭಾರಿಸಿದರು. ಆ ನಂತರ ಬಂದ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್‌ (38 ರನ್‌, 32 ಬಾಲ್‌, 2 ಫೋರ್‌, 1 ಸಿಕ್ಸ್‌) ತಂಡ ಉತ್ತಮ ಮೊತ್ತ ಗಳಿಸಲು ಕಾರಣವಾದರು. ಕೆ.ಎಲ್‌.ರಾಹು‌ಲ್ 7 ರನ್‌, ಸೂರ್ಯಕುಮಾರ್‌ ಯಾದವ್‌ 4 ರನ್‌, ಅಕ್ಸರ್ ಪಟೇಲ್‌ ಅಜೇಯ 2 ರನ್‌ ಗಳಿಸಿದರು. ಅಂತಿಮವಾಗಿ ಭಾರತ ಐದು ವಿಕೆಟ್ ನಷ್ಟಕ್ಕೆ 390 ರನ್‌ ಗಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...