Homeಕರ್ನಾಟಕಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ.....

ಎದ್ದೇ ನಿಲ್ಲದ ಸರ್ಕಾರವೊಂದು ಬಿದ್ದ ಈ ಹೊತ್ತಲ್ಲಿ…..

- Advertisement -
- Advertisement -

ಬೀಳಲೇಬೇಕಿದ್ದ ಸರ್ಕಾರ ಬಿದ್ದು ಹೋಗಿದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಒಂದಾಗಿದ್ದೇವೆ ಎಂದು ಹೇಳಿದ್ದ ಪಕ್ಷಗಳು ಅದರಲ್ಲಿ ಸಫಲವಾಗದ್ದೇಕೆ? ದಕ್ಷಿಣ ಭಾರತದ ಇತರ ರಾಜ್ಯಗಳ ರಾಜಕಾರಣವನ್ನು ಗಮನಿಸಿದರೆ ಕೋಮುವಾದಿ ದುಷ್ಟ ಶಕ್ತಿಗಳಿಗೆ ಸವಾಲು ಒಡ್ಡಲು ಈ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.

ಅದರಲ್ಲೂ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಪಕ್ಷ ಮತ್ತು ಅವರ ಕುಟುಂಬಕ್ಕೆ ಕೋಮುವಾದಿ ವಿರೋಧ ಎಂಬ ನುಡಿಗಟ್ಟೇ ಇಷ್ಟವಿರಲಿಲ್ಲ. ಹೈಕಮಾಂಡ್ ಒತ್ತಡಕ್ಕೆ ಮಣಿದು ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸಿದ ಸಿದ್ದರಾಮಯ್ಯನವರು ಆರಂಭದಿಂದಲೇ ಎಚ್ಚರ ವಹಿಸಿದ್ದರೂ ಈಗಿನ ಭಿನ್ನಮತ ಉಂಟಾಗುತ್ತಲೇ ಇರಲಿಲ್ಲ.

ಸುಧಾಕರ್, ಎಂಟಿಬಿ ನಾಗರಾಜ್, ಸೋಮಶೇಖರ್, ಮುನಿರತ್ನ ಎಂಬ ದಗಲ್ಬಾಜಿಗಳನ್ನು ನಂಬಿದ್ದು ಅವರ ದೊಡ್ಡ ಪ್ರಮಾದವೇ ಆಗಿತ್ತು. ಈ ಸರ್ಕಾರದಲ್ಲಿ ತನ್ನದೇ ಛಾಪು ಮೂಡಿಸಿದ ಮಂತ್ರಿಗಳಿಲ್ಲ. ದೇಶಪಾಂಡೆಯಂತಹ ವಂಚಕರು ಎಲ್ಲಾ ಸರ್ಕಾರಗಳಲ್ಲೂ ಸಚಿವರಾಗುತ್ತಾರೆ. ಇತ್ತ ಜೆಡಿಎಸ್‍ನಲ್ಲಂತೂ ರೇವಣ್ಣ ಒಬ್ಬರೇ ಮಿನಿಸ್ಟರ್ ಎಂಬ ಲೆಕ್ಕದಲ್ಲಿ ನಾಶವಾಯಿತು.

ಈ ಸರ್ಕಾರಕ್ಕೆ ಒಂದು ಮುನ್ನೋಟವಿದ್ದಂತೆ ಕಾಣುತ್ತಿರಲಿಲ್ಲ. ಮೈತ್ರಿ ಪಕ್ಷಗಳ ನಡುವೆಯೂ ತಾಳ ಮೇಳ ಇರಲಿಲ್ಲ. ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿಕೊಳ್ಳುವಲ್ಲೂ ಈ ಸರ್ಕಾರ ವಿಫಲವಾಗಿತ್ತು. 2018ರ ಮೇ ತಿಂಗಳಲ್ಲಿ ಚುನಾವಣಾ ಫಲಿತಾಂಶ ಬಂದಾಗ, ದೆಹಲಿಯಲ್ಲಿ ಮಾತಾಡಿದ್ದ ಈ ದೇಶದ ಪ್ರಧಾನಿ ಅಂದೇ ಹೇಳಿದ್ದರು: ಅಲ್ಲಿ ‘ಅವರು’ ಸರ್ಕಾರ ಮಾಡಲು ಬಿಡಲ್ಲ ಎಂದು. ಅಂದರೆ ಅವತ್ತೇ ಈ ರಾಜ್ಯದ ಅಧಿಕಾರ ಕಬಳಿಸುವ ಆಟ ಶುರುವಾಗಿತ್ತು.

ಅದಕ್ಕಾಗಿ ಹಲವು ಪ್ರಯತ್ನಗಳನ್ನು ನಡೆಸಿ, ಕಡೆಯಲ್ಲಿ ನೇರವಾಗಿ ಹೈಕಮ್ಯಾಂಡ್ ಉಸ್ತುವಾರಿಯಲ್ಲಿ ನಡೆದ ಆಪರೇಷನ್‍ನಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಶಾಸಕರು ಬಲಿ ಬೀಳಲು ಕಾರಣವೇನು? ಇದಕ್ಕಿಂತ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಸೀಟುಗಳು ಬಿಜೆಪಿಗೆ ಹೋಗಲು ಕಾರಣವೇನು? ಆ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಕೆಲಸ ಮಾಡದಂತಾಗಿತ್ತು. ಏಕೆಂದರೆ ಕೋಮುವಾದ ವಿರೋಧವೆನ್ನುವುದು ಕೇವಲ ಘೋಷಣೆಯಾಗಿದ್ದು, ಅವರ ಕಾರ್ಯಕರ್ತರಿಗಿರಲಿ ಸ್ವತಃ ಶಾಸಕರಲ್ಲೂ ಅರಿವು ಮೂಡಿಸಿರಲಿಲ್ಲ.

ಕೆ.ಎನ್.ರಾಜಣ್ಣರಂತಹ ಹಿರಿಯ ಶಾಸಕರು ದೇವೇಗೌಡರನ್ನು ಸೋಲಿಸಲು ಕೆಲಸ ಮಾಡಿಸುತ್ತಾರೆ. ಇಂತಹ ಉದಾಹರಣೆಗಳು ರಾಜ್ಯದುದ್ದಕ್ಕೂ ಇವೆ. ತನ್ನ ಮನೆಗೇ 3 ಕೋಟಿ ತಂದುಕೊಟ್ಟರೂ ತಾನು ಆಪರೇಷನ್‍ಗೆ ಒಳಗಾಗಲಿಲ್ಲ ಎಂದು ಸದನದಲ್ಲಿ ಹೇಳಿಕೊಂಡ ಶ್ರೀನಿವಾಸಗೌಡರು ಬಹಿರಂಗವಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಪ್ರಚಾರ ಮಾಡುತ್ತಾರೆ. ಇಂದು ಮಿಕ್ಕೆಲ್ಲರಿಗೆ ಪಾಠ ಹೇಳುತ್ತಿರುವ ಸ್ಪೀಕರ್ ರಮೇಶ್‍ಕುಮಾರ್ ಅವರೇ ಈ ವಿಚಾರದಲ್ಲಿ ಅವರಿಗೆ ನಾಯಕರು.

ಸಿದ್ದರಾಮಯ್ಯನವರು ಬಿಜೆಪಿಯ ವಿರುದ್ಧ ಗುಡುಗುತ್ತಿದ್ದರಾದರೂ, ಅದಕ್ಕಾಗಿ ಕೆಲವು ತ್ಯಾಗಗಳನ್ನು ಮಾಡಲು ಸಿದ್ಧರಿರಲಿಲ್ಲ. ಇನ್ನು ಗೌಡರ ಕುಟುಂಬಕ್ಕೆ ಕುಟುಂಬದ ಹಿತಾಸಕ್ತಿಯೇ ರಾಜ್ಯದ ಹಿತಾಸಕ್ತಿ. ಹೀಗಾಗಿ ಪರಸ್ಪರ ಬೆನ್ನಿಗಿರಿಯುವ ಕೆಲಸಗಳು ಸಾಕಷ್ಟು ನಡೆದಿದ್ದವು. ಇವರು ಬೆಚ್ಚಿಬಿದ್ದು ಎಚ್ಚೆತ್ತುಕೊಂಡಿದ್ದು ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ. ನಂತರ ಗಾಬರಿಗೊಂಡಿದ್ದು ಗುಂಪು ರಾಜೀನಾಮೆ ಪ್ರಕರಣದ ನಂತರವೇ. ಆ ಹೊತ್ತಿಗೆ ಕಾಲ ಮಿಂಚಿ ಹೋಗಿತ್ತು.

ಸಮಾಜದಲ್ಲಿ ಕೋಮುವಾದದ ವಿರುದ್ಧದ ಮನೋಭಾವ ಮೂಡಿಸದೇ ಇದ್ದಾಗ ಶಾಸಕರು ಮಾಡಿದ ದ್ರೋಹವು ಪಕ್ಷದ್ರೋಹವೆನಿಸಿಕೊಳ್ಳುತ್ತದೆಯೇ ಹೊರತು ಸೈದ್ಧಾಂತಿಕ ದ್ರೋಹವೆಂದಲ್ಲ. ಇವೆಲ್ಲಾ ಹಿನ್ನೆಲೆಯನ್ನು ಕೆದಕಿ ನೋಡದೇ, ಈಗ ಮತ್ತೆ ಪಕ್ಷ ಕಟ್ಟುತ್ತೇವೆಂದು ಹೊರಟವರು ಏನನ್ನು ಕಟ್ಟಲು ಸಾಧ್ಯ? ಈ ವಿಚಾರವನ್ನು ಡಿ.ಕೆ.ಶಿವಕುಮಾರ್, ಎಚ್.ಡಿ.ಕೆ ಥರದವರು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ. ಆದರೆ ಸಿದ್ದರಾಮಯ್ಯನವರಿಗಾದರೂ ಇದು ಅರ್ಥವಾದೀತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...