Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...