Homeಮುಖಪುಟಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

ಏರ್‌ಸ್ಟ್ರೈಕ್‌‌ ಮೂಲಕ ಭಾರತದ ಭೂಪ್ರದೇಶಕ್ಕೆ ಬಾಂಬ್ ದಾಳಿ ಮಾಡಿದ ಮಯನ್ಮಾರ್‌ ಸೇನೆ

- Advertisement -
- Advertisement -

ಮಿಜೋರಾಂನ ಚಂಫೈ ಜಿಲ್ಲೆಯ ಸಮೀಪವಿರುವ ಪ್ರಮುಖ ಬಂಡುಕೋರರ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡು ನಡೆಸಿದ ವೈಮಾನಿಕ ದಾಳಿಯ ಸಂದರ್ಭದಲ್ಲಿ ಮಯನ್ಮಾರ್ ಸೈನ್ಯವೂ ಕಳೆದ ಮಂಗಳವಾರ ಭಾರತೀಯ ಭೂಪ್ರದೇಶದೊಳಗೆ ಬಾಂಬ್ ಅನ್ನು ಬೀಳಿಸಿದೆ ಎಂದು ಅಧಿಕಾರಿ ಮತ್ತು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ ಎಂದು Scroll.in ವರದಿ ಮಾಡಿದೆ.

ಮಯನ್ಮಾರ್ ಸೇನೆಯು ಬಂಡುಕೋರರಾದ ಚಿನ್ ರಾಷ್ಟ್ರೀಯ ಸೇನೆಯ ಪ್ರಧಾನ ಕಛೇರಿಯಾದ ವಿಕ್ಟೋರಿಯಾ ಕ್ಯಾಂಪ್ ಮೇಲೆ ವೈಮಾನಿಕ ದಾಳಿಯನ್ನು ನಡೆಸಿದೆ. ಚಿನ್ ರಾಷ್ಟ್ರೀಯ ಸೇನೆಯು ಮಯನ್ಮಾರ್ ಸೈನ್ಯದೊಂದಿಗೆ ಸಂಘರ್ಷ ನಡೆಸುತ್ತಿದ್ದು, ಇದು ಅಲ್ಲಿನ ಜನಾಂಗೀಯ ಸಶಸ್ತ್ರ ಗುಂಪುಗಳಲ್ಲಿ ಒಂದಾಗಿದೆ. ವಿಕ್ಟೋರಿಯಾ ಕ್ಯಾಂಪ್‌ ಭಾರತ-ಮಯನ್ಮಾರ್ ಗಡಿಯ ಟಿಯು ನದಿಯ ಉದ್ದಕ್ಕೂ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಯನ್ಮಾರ್ ಸೈನ್ಯದ ಜೆಟ್‌ಗಳಿಂದ ಬಾಂಬ್ ಸ್ಫೋಟ ಸಂಭವಿಸಿದ್ದು, ಕ್ಯಾಂಪ್‌‌ ಸಮೀಪದಲ್ಲಿರುವ ವಫೈನಲ್ಲಿರುವ ಹಳ್ಳಿಯಿಂದ ಸ್ಫೋಟಗಳು ಕೇಳಿಬರುತ್ತಿವೆ ಎಂದು ಸ್ಥಳೀಯ ನಿವಾಸಿ ಮಾಯೆಂಗಾ Scroll.in ಗೆ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

“ಒಂದು ಬಾಂಬ್ ಮಿಜೋರಾಂ ಭಾಗದಲ್ಲಿ ಬಿದ್ದಿದ್ದು… ಕ್ಷಿಪಣಿಯು ಭಾರತದ ಬದಿಯಲ್ಲಿರುವ ಟಿಯು ನದಿಯಿಂದ 30 ಮೀಟರ್ ದೂರದಲ್ಲಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಫರ್ಕವಾನ್ ಗ್ರಾಮದ ನಿವಾಸಿಗಳು ಮತ್ತು ನದಿಯ ಆಚೆಯ ಪ್ರದೇಶಗಳು ಕೂಡಾ ಬಾಂಬ್ ಸ್ಫೋಟದ ಶಬ್ದವನ್ನು ಕೇಳಿರಬಹುದೆಂದು ಚಂಫೈನಲ್ಲಿನ ಹಿರಿಯ ಅಧಿಕಾರಿಯೊಬ್ಬರು ಘಟನೆಯನ್ನು ಖಚಿತಪಡಿಸಿದ್ದಾರೆ.

“ಒಂದು ಕ್ಷಿಪಣಿ ಭಾರತದ ಕಡೆ ಬಿದ್ದಿದೆ ಎಂದು ನಾವು ಕೇಳಿದ್ದೇವೆ. ನಾವು ವಾಸ್ತವಾಂಶಗಳನ್ನು ಖಚಿತಪಡಿಸಿಕೊಳ್ಳಲು ಸ್ಥಳ ಪರಿಶೀಲನೆಯನ್ನು ಮಾಡುತ್ತಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ. ಟಿಯು ನದಿಯಿಂದ ಮರಳು ಸಂಗ್ರಹಿಸಲು ಹೋದ ಭಾರತೀಯ ಟ್ರಕ್‌ನ ವಿಂಡ್‌ಶೀಲ್ಡ್ ಹಾನಿಗೊಳಗಾಗಿರುವುದು ಕಂಡುಬಂದಿದ್ದು, ಖಚಿತವಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯಿಂದಾಗಿ ಗಡಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪ್ರಭಾವಿ ಸಮುದಾಯ ಸಂಘಟನೆಯಾದ ಯಂಗ್ ಮಿಜೋ ಅಸೋಸಿಯೇಷನ್‌ನ ಸದಸ್ಯರೂ ಆಗಿರುವ ಮಾಯೆಂಗಾ ಅವರು, ಬುಧವಾರ ಮಯನ್ಮಾರ್ ಮಿಲಿಟರಿ ಮತ್ತೆ ಎರಡು ಬಾರಿ ಬಾಂಬ್‌ಗಳನ್ನು ಬೀಳಿಸಿದೆ ಎಂದು ಹೇಳಿದ್ದಾರೆ.

“ನಾವು ಈಗ ಭಯಭೀತರಾಗಿದ್ದೇವೆ. ಅನೇಕ ರೈತರು ಮತ್ತು ಕಾರ್ಮಿಕರು ಭಯದಿಂದ ತಮ್ಮ ಕೆಲಸವನ್ನು ನಿಲ್ಲಿಸಿದ್ದಾರೆ … ಮಯನ್ಮಾರ್ ಮಿಲಿಟರಿ ಜೆಟ್ ಫೈಟರ್‌ಗಳು ಭಾರತದ ನೆಲದ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ಭಾರತೀಯ ವಾಯುಪ್ರದೇಶದ ಮೇಲೆ ಅಸಾಧ್ಯ ವೇಗದಿಂದ ಹಾರುವುದನ್ನು ತಡೆಯಲು ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಾವು ತೀವ್ರವಾಗಿ ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಚಿನ್ ನ್ಯಾಷನಲ್ ಆರ್ಮಿಯ ಐವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತದ ಕಡೆ ಬಾಂಬ್‌ಗಳನ್ನು ಬೀಳಿಸಲಾಗಿದೆಯೇ ಎಂಬುದನ್ನು ಭಾರತ ಸರ್ಕಾರ ಇನ್ನೂ ಅಧೀಕೃತವಾಗಿ ಖಚಿತಪಡಿಸಿಲ್ಲ.

ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾಂಗ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಫೆಬ್ರವರಿ 1, 2021 ರಂದು ಸೇನೆಯು ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮಯನ್ಮಾರ್ ಗೊಂದಲದಲ್ಲಿದೆ. ಅಧಿಕಾರಿಗಳು ಪ್ರಜಾಪ್ರಭುತ್ವದ ಪರವಾದ ಪ್ರತಿಭಟನೆಗಳಿಗೆ ಕ್ರೂರವಾಗಿ ವರ್ತಿಸುತ್ತಿದ್ದು, ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಮಯನ್ಮಾರ್‌ನಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಚಿನ್ ರಾಷ್ಟ್ರೀಯ ಸೇನೆಯು ಇತರ ಬಂಡಾಯ ಗುಂಪುಗಳೊಂದಿಗೆ ಹೋರಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...