Homeಮುಖಪುಟಕರಾವಳಿಯ ಸಾರಾತಾಯಿ

ಕರಾವಳಿಯ ಸಾರಾತಾಯಿ

- Advertisement -
- Advertisement -

ಸಾರಾ ಅಬೂಬಕ್ಕರ್ ಅಂದರೆ ನನ್ನ ಮೊದಲ ನೆನಪು ಬಾಲ್ಯದಲ್ಲಿ ಕೇಳಿದ ರೇಡಿಯೊ ನಾಟಕ ’ಚಂದ್ರಗಿರಿಯ ತೀರದಲ್ಲಿ’. ಆ ದಿನಗಳಲ್ಲಿ ಅದು ಎಷ್ಟು ಅರ್ಥವಾಗಿತ್ತೀ ಬಿಟ್ಟಿತ್ತೋ, ಆದರೆ ತಟ್ಟಿತ್ತು. ಅಂದಿನಿಂದ ನಾನು ಸಾರಾ ಅಭಿಮಾನಿಯಾದೆ. ’ಚಂದ್ರಗಿರಿಯ ತೀರದಲ್ಲಿ’ ಮೂಲ ಕೃತಿ ಹಾಗು ಇತರ ಹಲವು ಕಥನಗಳನ್ನು ಓದಿದ್ದು ನಂತರದ ದಿನಗಳಲ್ಲಿ. ಆದರೆ, ’ಚಂದ್ರಗಿರಿಯ ತೀರದಲ್ಲಿ’ ಕೃತಿ ನನ್ನನ್ನು ಹಸಿ ಮಣ್ಣಿನಲ್ಲಿ ನೆಟ್ಟ ಗಿಡ ಎಂದೇ ಹೇಳಬೇಕು.

ಅದು 2013 ಜೂನ್ ತಿಂಗಳು. ನನ್ನ ಕಥಾಸಂಕಲನ ’ದೂರತೀರಕ್ಕೆ’ ಮಾಸ್ತಿ ಕಥಾ ಪುರಸ್ಕಾರ ಸಂದಿತ್ತು. ಆ ವರ್ಷದ ಜೀವಮಾನದ ಮಾಸ್ತಿ ಸಾಹಿತ್ಯ ಪ್ರಶಸ್ತಿಗೆ ಸಾರಾ ಅಬೂಬಕ್ಕರ್ ಆಯ್ಕೆ ಆಗಿದ್ದರು. ಸಮಾರಂಭಕ್ಕೆ ಅವರು ಮಂಗಳೂರಿಂದ ಬೆಂಗಳೂರಿಗೆ ಹೊರಟರು. ನಾನು ಕಾಸರಗೋಡಿಂದ ಬೆಂಗಳೂರಿಗೆ ಹೊರಟೆ. ಆಗ ನಮ್ಮಿಬ್ಬರ ನಡುವೆ ಮೊದಲ ಬಾರಿಗೆ ದೂರವಾಣಿ ಮಾತು ನಡೆಯಿತು. ’ಎಲ್ಲಿ ಉಳಕೊಳ್ಳುವ ವ್ಯವಸ್ಥೆ’ ಎಂಬ ಮಾತು ಸಹಜವಾಗಿಯೇ ಬಂತು. ನಾನು ’ಅಲ್ಲಿ ತಮ್ಮನ ಮನೆ ಇದೆ; ಉಳಕೊಳ್ಳುವ ವ್ಯವಸ್ಥೆ ಬೇಡ ಅಂದಿರುವೆ ಅಂದೆ. ಅಂದು ಸಾರಾ ಏನೂ ಹೇಳಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರದ ಮಾತುಕತೆಯಲ್ಲಿ, ’ಇಂತಹ ಕಾರ್ಯಕ್ರಮಗಳಿಗೆ ಪರ ಊರಿಗೆ ಹೋಗುವಾಗ, ಎಷ್ಟೇ ಪ್ರಿಯರಾದರೂ ಯಾವುದೇ ಬಂಧುಗಳ ಮನೆ ನೆಚ್ಚಿಕೊಳ್ಳಬಾರದು. ಆಯೋಜಕರು ಮಾಡುವ ವ್ಯವಸ್ಥೆ ಪಡೆದುಕೊಳ್ಳಬೇಕು. ಅದು ನಮ್ಮ ಹಕ್ಕಿನದು. ಕೆಲವೊಮ್ಮೆ ನಮ್ಮ ಬರವಣಿಗೆ, ನಮ್ಮ ಬರಹದ ಮಹತ್ವ, ನಮಗಿರುವ ಗೌರವ ನಮ್ಮ ಆ ಬಂಧುಗಳಿಗೆ ಅರ್ಥವಾಗುವುದಿಲ್ಲ. ಇನ್ನು ಕೆಲವೊಮ್ಮೆ ಅರ್ಥ ಆದರೂ ಅವರಿಗದು ಬೇಕಿರುವುದಿಲ್ಲ. ಅದ್ಯಾವುದು ಅಲ್ಲದಿದ್ದರೆ ಕೆಲವೊಮ್ಮೆ ನಮ್ಮ ಸಮಯಕ್ಕೆ ಆವರ ಮನೆಯ ವ್ಯವಸ್ಥೆ ಇರುವುದಿಲ್ಲ.

ನಾವು ಏನೂ ಹೇಳಲಾಗುವುದಿಲ್ಲ. ಅಲ್ಲಿ ಹೊಂದಿಕೊಂಡಿರಬೇಕಷ್ಟೆ. ನಮ್ಮ ಮುಖ್ಯ ಕಾರ್ಯಕ್ರಮ ಅಸ್ತವ್ಯಸ್ತ ಆಗುವ ಸಾಧ್ಯತೆ ಇರುತ್ತದೆ. ಸಭೆಯಲ್ಲಿ ನಾವು ಮಾತಾಡುವುದಿರುತ್ತದೆ. ಅದಕ್ಕೂ ಮೊದಲು ನಮಗೊಂದಿಷ್ಟು ತಯಾರಿ, ಏಕಾಂತ ಬೇಕಾಗುತ್ತದೆ. ಇದನ್ನೆಲ್ಲ ನಮ್ಮ ಕುಟುಂಬದವರೇ ಆದರೂ, ನಮ್ಮ ಬಗ್ಗೆ ಅವರಿಗೆ ಎಷ್ಟೇ ಪ್ರೀತಿ ವಿಶ್ವಾಸ ಇದ್ದರೂ ನಾವು ಹೆಣ್ಣುಮಕ್ಕಳಾದ್ದರಿಂದ ಹಾಗೆಲ್ಲ ನಿರೀಕ್ಷೆ ಮಾಡಲಾಗುವುದಿಲ್ಲ. ಬಂಧುಗಳ ಮನೆಯ ಭೇಟಿ ನಮ್ಮ ಕಾರ್ಯಕ್ರಮ ಮುಗಿದ ಮೇಲೆ ಇಟ್ಟುಕೊಳ್ಳಬೇಕು’ ಎಂದು ಕಿವಿಮಾತು ಹೇಳಿ ನನ್ನ ಪಾಲಿಗೆ ಸಾರಾ ತಾಯಿ ಆಗಿಬಿಟ್ಟರು. ಪರಿಚಯವಾದ ಆರಂಭದಲ್ಲೊಮ್ಮೆ, ಮಾತಿನ ನಡುವೆ ನಿಮ್ಮ ಬಗ್ಗೆ ಗೊತ್ತಿರಲಿಲ್ಲ ಎನ್ನುತ್ತಾ ಅವರು ಬೇಸರಿಸಿಕೊಂಡಿದ್ದರು. ಅವರ ನೇರ ನಡೆ, ಸರಳತೆ ನನಗಂತೂ ಖುಷಿಯಾಗಿತ್ತು. ನನ್ನ ಬರವಣಿಗೆ ನಿರಂತರವಾಗಿಲ್ಲದಿರುವುದರಿಂದ, ಗೊತ್ತಿಲ್ಲದಿರುವುದು ಸಹಜವೇ. ಅದನ್ನೇ ಅವರಿಗೆ ಹೇಳಿದಾಗ, “ಕಥೆಯನ್ನೆ ಬರಿಬೇಕು ಅಂತ ಅಂದುಕೊಳ್ಬೇಡಿ. ಏನಾದರೂ ಹೇಳಬೇಕಾದಾಗ ಲೇಖನವೊ, ಅಭಿಪ್ರಾಯವೋ ಯಾವುದಾದರೂ ಒಂದು ರೂಪದಲ್ಲಿ ಬರೆದುಬಿಡಿ ಅಷ್ಟೆ”

ಮುಂದೆ 2015ರಲ್ಲಿ ನನ್ನ ’ಜೋಗತಿ ಜೋಳಿಗೆ’ ಕಥಾ ಸಂಕಲನಕ್ಕೆ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಸಾರಾ ಅವರ ಹೆಸರಿನಲ್ಲಿ ಕೊಡುವ ಸಾರಾ ಅಬೂಬಕ್ಕರ್ ಸಾಹಿತ್ಯ ದತ್ತಿ ಪುರಸ್ಕಾರ ಬಂತು. ಅವರ ಸಮ್ಮುಖದಲ್ಲೇ ಸಮಾರಂಭ ನಡೆಯಿತು. ಅವರು ನನ್ನ ಕಥಾ ಸಂಕಲನ ತರಿಸಿ ಓದಿ ಬಹಳ ಇಷ್ಟಪಟ್ಟಿದ್ದರು. ಕಥೆಗಳ ಬಗ್ಗೆ ಮತ್ತೆಮತ್ತೆ ಫೋನಿನಲ್ಲಿ ಮಾತಾಡಿದರು. ’ಸೈತಾನನ ಬಲೆ’ ಕಥೆಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಿ ಎಂದಾಗ ಸಾರ್ಥಕವೆನಿಸಿತ್ತು. ಮುಂದೆ ಅದೇ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಬಂದಾಗ ಬಹಳ ಖುಷಿ ಪಟ್ಟಿದ್ದರು. ಆಗಲೂ, “ಕಥೆ ಬರೆಯಲಾಗದಿದ್ದಾಗ ಬೇರೆ ಏನಾದರೂ ಬರೆಯಿರಿ” ಎನ್ನಲು ಮರೆತಿರಲಿಲ್ಲ. ಹೀಗೆ ಫೋನ್ ಸಂಭಾಷಣೆಯ ನೆನಪು ಎದೆಯೊಳಗೆ. 2018ರ ನಂತರ ನನಗೆ ಅವರನ್ನು ಭೇಟಿ ಮಾಡಲಾಗಲೇ ಇಲ್ಲ.

ಅನುಪಮಾ ಪ್ರಸಾದ್
ಬರಹಗಾರ್ತಿ


ಇದನ್ನೂ ಓದಿ: ಸಾಹಿತ್ಯದ ಮೂಲಕ ಸಾಮಾಜಿಕ ಬದಲಾವಣೆಯ ಕನಸು ಕಂಡಿದ್ದ ಸಾರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...