Homeಕರ್ನಾಟಕಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಎತ್ತಿನಹೊಳೆ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಎತ್ತಿನಹೊಳೆ ಮೂಲಕ ನೀರನ್ನು ಮೇಲೆತ್ತುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಕೇವಲ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

“ಇದು ಕುಡಿಯುವ ನೀರು ಸರಬರಾಜು ಯೋಜನೆಯಾಗಿದೆ. ಹೀಗಾಗಿ ಇದು ಪರಿಸರ ಪ್ರಭಾವ ಮೌಲ್ಯಮಾಪನ (EIA) ಅಧಿಸೂಚನೆ 2006 ಮತ್ತು ಅದರ 2009ರ ತಿದ್ದುಪಡಿಯ ನಿಬಂಧನೆಯನ್ನು ಕಡೆಗಣಿಸುವುದಿಲ್ಲ” ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಹಾಗಾಗಿ ಪರಿಸರ ಸಂಬಂಧಿತ ಅನುಮತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಜ್ಯಸಭೆಯಲ್ಲಿ ಇತ್ತೀಚಿನ ಅಧಿವೇಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಜೆಡಿಯುನ ಅನೀಲ್ ಪ್ರಸಾದ್ ಹೆಗ್ಡೆ ಅವರ ಪ್ರಶ್ನೆಗೆ ಉತ್ತರಿಸುತ್ತಾ ಸಚಿವರು ಈ ಮಾತುಗಳನ್ನಾಡಿದ್ದಾರೆ.

ಮೊದಲ ಹಂತಕ್ಕೆ ಅಗತ್ಯವಿರುವ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹಂತ-1ಕ್ಕೆ ಅನುಮತಿಯನ್ನು ಪರಿಸರ ಮತ್ತು ಅರಣ್ಯ ಸಚಿವಾಲಯದಿಂದ ಕೆಲವು ಷರತ್ತುಗಳೊಂದಿಗೆ ಜನವರಿ 29, 2016ರಂದು ಪಡೆಯಲಾಗಿದೆ. ಹಂತ-2ಕ್ಕೆ ಕೆಲವು ಷರತ್ತುಗಳೊಂದಿಗೆ ಸೆಪ್ಟೆಂಬರ್ 15, 2016ರಂದು ಕ್ಲಿಯರೆನ್ಸ್ ಪಡೆಯಲಾಗಿದೆ. ಎತ್ತಿನಹೊಳೆ ನೀರಾವರಿ ಯೋಜನೆಯು ರಾಜ್ಯ ಸರ್ಕಾರ ಹಣದಿಂದ ನಡೆಯುತ್ತಿದೆ.

ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ ಮತ್ತು ಬೆಂಗಳೂರು ಸೇರಿದಂತೆ ಏಳು ಬರಪೀಡಿತ ಜಿಲ್ಲೆಗಳ 29 ತಾಲ್ಲೂಕುಗಳ 6,557 ಗ್ರಾಮಗಳಿಗೆ ಮತ್ತು 38 ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದೆಂದು ಸರ್ಕಾರ ಹೇಳುತ್ತದೆ. ಅದಕ್ಕಾಗಿ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ತೊರೆಗಳಿಂದ 24.01 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಈ ಭಾಗಕ್ಕೆ ತರುವುದಾಗಿ ತಿಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆಂಜನೇಯ ರೆಡ್ಡಿ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಡೆಕ್ಕನ್‌ ಹೆರಾಲ್ಡ್‌ನಲ್ಲಿ ಮಾಡಲಾಗಿರುವ ವರದಿಯು ಅನಗತ್ಯವಾಗಿತ್ತು ಅನಿಸುತ್ತದೆ. ಎತ್ತಿನಹೊಳೆ ವಿಚಾರ ಸದ್ಯ ಚರ್ಚೆಯಲ್ಲಿಲ್ಲ. ಕರ್ನಾಟಕ ಸಲ್ಲಿಸಿರುವ ವರದಿಯನ್ನು ಆಧಾರಿಸಿ ಯಾವುದೇ ಅರಣ್ಯನಾಶವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈ ಕುರಿತು ಯಾವುದೇ ಅಧ್ಯಯನ ನಡೆದಿಲ್ಲ. ಕುಡಿಯುವ ನೀರಿನ ಯೋಜನೆ ಎಂದು ಹೇಳಿ ವಿನಾಯಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರದ ಸಂಪೂರ್ಣ ಹಣ ವಿನಿಯೋಗಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ” ಎಂದು ವಿವರಿಸಿದರು.

“ಈವರೆಗೆ ಒಂದೇ ಒಂದು ಊರಿಗೆ ಎತ್ತಿನಹೊಳೆ ಮೂಲಕ ನೀರು ಹರಿದುಬಂದಿಲ್ಲ. ಆದರೆ 13,000 ಕೋಟಿ ರೂ. ಖರ್ಚಾಗಿದೆ. 24,000 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವಿನಿಯೋಗಿಸುತ್ತಿದ್ದಾರೆ. ಈ ಯೋಜನೆ ಆರಂಭವಾದಾಗಿನಿಂದಲೂ ವೈಜ್ಞಾನಿಕ ಸಂಸ್ಥೆಗಳು ವಿರೋಧಿಸುತ್ತಾ ಬಂದಿವೆ. ಗುತ್ತಿಗೆದಾರರ ಜೇಬು ತುಂಬಿಸುವ ಯೋಜನೆ ಇದಾಗಿದೆ. ಅನಗತ್ಯ ಕೆಲಸಗಳನ್ನು ಕೈಗೊಂಡು ಹಣವನ್ನು ಲೂಟಿ ಮಾಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ನೀರಿನಲ್ಲಿ ಪ್ಲೋರೈಡ್, ನೈಟ್ರೇಡ್ ಇದೆ, ಹೀಗಾಗಿ ತಕ್ಷಣ ಎತ್ತಿನಹೊಳೆಯ ನೀರು ಹರಿಸಬೇಕೆಂದು ಹೇಳುತ್ತಿದ್ದರು. ಹತ್ತು ವರ್ಷವಾದರೂ ನೀರು ಬಂದಿಲ್ಲ. ಹೀಗಿರುವ 24,000 ಕೋಟಿ ರೂ.ಗಳನ್ನು ಹೆಚ್ಚಿಸಿಕೊಂಡು ಮುಂದಿನ ಚುನಾವಣೆಗಾಗಿ ಹಣ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ಕೆಲವು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷಿ ಭೂಮಿ ಹಾಗೂ ಕುಡಿಯುವ ನೀರಿನ ಮುಂದಾಲೋಚನೆಯಲ್ಲಿ ಕೆರೆ ಕುಂಟೆಗಳನ್ನು ಪಾರಂಪರಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಿ ಬೆಟ್ಟವನ್ನು ಕೇಂದ್ರವಾಗಿಟ್ಟುಕೊಂಡು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಹರಿದು ಹೋಗುವಂತೆ ವೈಜ್ಞಾನಿಕ ಕ್ರಮ ಅನುಸರಿಸಿರುವುದನ್ನು ಕಾಣಬಹುದು. ಉತ್ತರ ಪಿನಾಕಿನಿ, ದಕ್ಷಿಣಿ ಪಿನಾಕಿನಿ, ಅರ್ಕಾವತಿ, ಚಿತ್ರಾವತಿ, ಪಾಲಾರ್‌ ನದಿ ಪಾತ್ರದಲ್ಲಿ ಕೆರೆಗಳನ್ನು ನಿರ್ಮಿಸಲಾಗಿತ್ತು. ಇಂತಹ ಅದ್ಭುತವಾದ ಕೆರೆಗಳ ಜಾಲ ಇಂದು ಕಣ್ಮರೆಯಾಗುತ್ತಿದೆ. ಇವುಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಾಸರಿಗಿಂತ ದುಪ್ಪಟ್ಟು ಮಳೆಯಾಗಿದೆ. ದುರಾದೃಷ್ಟವಶಾತ್‌ ನೀರನ್ನು ತಮಿಳುನಾಡು, ಆಂಧ್ರಪ್ರದೇಶಕ್ಕೆ ಹರಿಬಿಟ್ಟಿದ್ದೇವೆಯೇ ಹೊರತು, ಕರೆಗಳಲ್ಲಿ ಹಿಡಿದಿಟ್ಟಲು ಯೋಚಿಸಲಿಲ್ಲ. ರಾಜಕಾಲುವೆ, ಕೆರೆಗಳು ಒತ್ತುಯಾಗಿವೆ. ಕೆಲವು ಕಡೆ ಮಾಯವಾಗಿವೆ, ಕೆಲವು ಕಡೆ ಹೂಳು ತುಂಬಿಕೊಂಡಿವೆ. ಈ ಜಲಮೂಲಗಳನ್ನು ಪುನರುಜ್ಜೀವನ ಮಾಡಿಕೊಂಡರೆ ನೀರಿನ ಅಭಾವವಾಗದು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...