Homeಮುಖಪುಟಜನಪರ ಸಿದ್ಧಾಂತಗಳಿಗೆ ಬದ್ಧವಾಗಿ ಬದುಕಿದ ಸಾರಾ

ಜನಪರ ಸಿದ್ಧಾಂತಗಳಿಗೆ ಬದ್ಧವಾಗಿ ಬದುಕಿದ ಸಾರಾ

- Advertisement -
- Advertisement -

ಸಾರಾ ಅಬೂಬಕ್ಕರ್ ನಿರ್ಗಮಿಸಿದ್ದಾರೆ. 86 ವರ್ಷಗಳ ತುಂಬು ಜೀವನವನ್ನು ತಮ್ಮ ಪ್ರಾಮಾಣಿಕ ಕ್ರಿಯಾಶೀಲ ಬದುಕಿನಿಂದ ಸಾರ್ಥಕಗೊಳಿಸಿದ್ದಾರೆ. ಸಾರಾ ಅವರ ಬರವಣಿಗೆಯನ್ನು ಕನ್ನಡಿಗರಿಗೆ ಪರಿಚಯಿಸಿದ್ದು ಲಂಕೇಶ್. ಅದು ಎಂಬತ್ತರ ದಶಕದ ಆರಂಭ. ಲಂಕೇಶ್ ಪತ್ರಿಕೆ ಕನ್ನಡದ ಸಾಂಸ್ಕೃತಿಕ ಲೋಕದ ಒಂದು ಘಟನೆಯಾಗಿ ಬರಹಗಾರರು ಮತ್ತು ಓದುಗರಲ್ಲಿ ಸಂಚಲವನ್ನೇ ಉಂಟುಮಾಡಿತ್ತು. ಹೊಸ ಸಂವೇದನೆಗೆ ಕಾರಣವಾಗಿತ್ತು. ಹೊಸ ಜನಾಂಗದ ತರುಣರು ಮತ್ತು ತಾಯಿಯರು ತಮ್ಮ ಅಂತರಂಗವನ್ನು ಹೇಳಿಕೊಳ್ಳುವಂತೆ ಲಂಕೇಶ್ ಬರವಣಿಗೆ ಪ್ರಚೋದಿಸಿತ್ತು. ಆ ಸಮಯದಲ್ಲಿಯೇ ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳು ತಲೆಎತ್ತಿ ಜನರ ನೆಮ್ಮದಿಯ ಬದುಕಿಗೆ ಗಂಡಾಂತರ ತಂದಿದ್ದವು. ಜನರ ಸಹಬಾಳ್ವೆಯನ್ನು ಕದಡಿ ಪ್ರತ್ಯೇಕಿಸುವಂತಹ ಮನೆಹಾಳು ಕೆಲಸಗಳು ಆರಂಭಗೊಂಡಿದ್ದವು. ಅಂತಹ ಸಮಯದಲ್ಲಿ ಒಬ್ಬ ಮುಸ್ಲಿಂ ಹೆಣ್ಣುಮಗಳಿಂದ ಪತ್ರವೊಂದು ಲಂಕೇಶರಿಗೆ ಬಂದಿತ್ತು. ಆ ಪತ್ರದಲ್ಲವರು ’ನನ್ನ ಸಹೋದರನೊಬ್ಬ ಸೈನ್ಯದಲ್ಲಿದ್ದು ಈ ದೇಶ ಕಾಯುತ್ತಿದ್ದಾನೆ ಆದರೂ ನಮ್ಮನ್ನಿಲ್ಲಿ ದೇಶದ್ರೋಹಿಗಳು ಎಂಬಂತೆ ಮೂದಲಿಸುತ್ತಿದ್ದಾರೆ. ನಾವು ಹೇಗೆ ಸಹಿಸಿಕೊಳ್ಳಬೇಕು ಮತ್ತು ಪ್ರತಿಕ್ರಿಯಿಸಬೇಕು’ ಎಂದು ಬರೆದುಕೊಂಡಿದ್ದರು. ಇದಕ್ಕೆ ಉತ್ತರವಾಗಿ ಲಂಕೇಶರು ನೀವು ಬೇಸರ ಮಾಡಿಕೊಳ್ಳುವ ಅಗತ್ಯವಿಲ್ಲ; ನಮ್ಮಲ್ಲಿ ಬರೆಯಿರಿ ಎಂದು ಉತ್ತರಿಸಿದರು. ಅಂದಿನಿಂದ ಸಾರಾ ಅಬೂಬಕ್ಕರ್ ನಿರಂತರವಾಗಿ ಲಂಕೇಶ್ ಪತ್ರಿಕೆಗೆ ಬರೆಯತೊಡಗಿದರು.

ಸಾರಾ ಅವರಿಗೆ ಖ್ಯಾತಿಯನ್ನು ತಂದುಕೊಟ್ಟಿದ್ದು ’ಚಂದ್ರಗಿರಿ ತೀರದಲಿ’ ಎಂಬ ಪುಟ್ಟ ಕಾದಂಬರಿ. ಆವರೆಗೆ ನಮಗೆ ಅಪರಿಚಿತವಾಗಿದ್ದ ಮುಸ್ಲಿಂ ಲೋಕದ ಹೆಣ್ಣು ಮಕ್ಕಳ ವಿವರ ತಿಳಿದದ್ದೇ ’ಚಂದ್ರಗಿರಿ ತೀರದಲ್ಲಿ’ ಎಂಬ ಧಾರವಾಹಿಯಿಂದ. ಬರವಣಿಗೆಯಲ್ಲಿನ ಪ್ರಾಮಾಣಿಕತೆ ಹೇಗಿರಬೇಕೆಂಬುದನ್ನು ಸಾರಾ ತೋರಿಸಿದ್ದರು. ಸೈಕಲ್ ಶಾಪು, ಗುಜರಿ ಅಂಗಡಿಗಳಲ್ಲಿನ ಬಡವರ ಮದುವೆ ಸಂಬಂಧಗಳು, ಕೊಡುಕೊಳ್ಳುವಿಕೆ ಮತ್ತು ವ್ಯವಹಾರಗಳು, ಅದರ ಪರಿಣಾಮ, ಮಹಿಳೆಯರ ಅತಂತ್ರ ಬದುಕು ಇವೆಲ್ಲಾ ಲೇಖಕಿಯಿಂದ ಯಾವ ಉತ್ಪ್ರೇಕ್ಷಿತ ಪದಪುಂಜಗಳಿಲ್ಲದೆ ಅನಾವರಣಗೊಂಡು ಮನಸ್ಸನ್ನು ಕಲಕಿದ್ದವು. ಸಾಮಾನ್ಯವಾಗಿ ಧಾರವಾಹಿಗಳನ್ನು ಓದುವವರೆಲ್ಲಾ ಆಗ ’ಚಂದ್ರಗಿರಿ ತೀರದಲ್ಲಿ’ ಕಾದು ಓದಿದ್ದರು. ಇನ್ನೆರಡು ವರ್ಷ ಕಳೆದರೆ ನಲವತ್ತು ವರ್ಷ ತುಂಬುವ ಆ ಕಾದಂಬರಿ ಇನ್ನೂ ಓದುಗರ ಮನಸ್ಸಿನಲ್ಲಿ ಉಳಿದಿರುವುದಕ್ಕೆ ಕಾರಣ ಅದರ ತಾಜಾತನ ಮತ್ತು ಪ್ರಾಮಾಣಿಕ ಅಭಿವ್ಯಕ್ತಿಯಾಗಿದೆ. ಆ ನಂತರ ಸಾರ ನಿರಂತರವಾಗಿ ಬರೆದರು. ಮುಸ್ಲಿಂ ಮಹಿಳೆಯರ ಬದುಕು ಮತ್ತು ಸ್ಥಿತಿಗತಿಗಳನ್ನು ಅನಾವರಣ ಮಾಡಿದರು. ಬರೆದಂತೆ ಬದುಕಿದ ಮಹಿಳೆಯಾಗಿದ್ದರು. ಅವರ ದನಿ ಮತಾಂಧರಿಗೆ ಸಿಟ್ಟು ತಂದಿದ್ದವು. ಆ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ಕುರ್ಚಿಯನ್ನು ಅವರ ಮೇಲೆ ಎಸೆದು ಗಲಭೆ ಎಬ್ಬಿಸಿದರು. ಇದರಿಂದೇನೂ ಅಂಜದ ಸಾರಾ, ’ನಾನು ಸತ್ಯವನ್ನು ಹೇಳುತ್ತೇನೆ, ಅದನ್ನೇ ಬರೆಯುತ್ತೇನೆ’ ಎಂದು ಕೂಗಿದರು. ಆಗ ಲಂಕೇಶ್, ಸಾರ ಅವರಿಗೆ ಧೈರ್ಯ ತುಂಬಿ, ’ಸಾರಾ ಅವರು ಮುಸ್ಲಿಂ ಸಂಪ್ರದಾಯಗಳನ್ನು ಪಾಲಿಸುತ್ತಿರುವವರು. ಅವರೆಂದೂ ಸಂಪ್ರದಾಯವನ್ನು ಬಿಟ್ಟವರಲ್ಲ. ಸಮಯಕ್ಕೆ ಸರಿಯಾಗಿ ಪ್ರಾರ್ಥನೆ ಮಾಡುವ ಮಹಿಳೆ. ಅಂಥವರನ್ನು ಸಹಿಸಿಕೊಳ್ಳಲಾಗದ ನಿಮಗೆ ಕೆಟ್ಟ ದಿನಗಳಿವೆ’ ಎಂದು ಟೀಕಿಸಿದ್ದರು. ಸಾಮಾನ್ಯವಾಗಿ ತಮ್ಮ ಅಭಿಪ್ರಾಯಗಳಿಗೆ ಉಗ್ರ ಪ್ರತಿಭಟನೆ ಬಂದರೆ ತಮ್ಮ ಅಭಿವ್ಯಕ್ತಿ ಶೈಲಿಯನ್ನ ಮೆತ್ತಗಾಗಿಸಿಕೊಳ್ಳುತ್ತಾರೆ ಇಲ್ಲ ಬದಲಿಸಿಕೊಳ್ಳುತ್ತಾರೆ. ಆದರೆ ಸಾರಾ ಹಾಗಾಗಲಿಲ್ಲ ಬದುಕಿನ ಕಡೆಯವರೆಗೂ ಅಭಿವ್ಯಕ್ತಿ ಪ್ರಾಮಾಣಿಕವಾಗಿಯೇ ಇತ್ತು.

ನಮ್ಮೆಲ್ಲರ ಇಷ್ಟದ ಲೇಖಕಿಯಾದ ಸಾರಾ ಅವರನ್ನು ಲಂಕೇಶ್ ಪತ್ರಿಕೆ ಇಪ್ಪತ್ತು ವರ್ಷ ತುಂಬಿದ ಸಮಾರಂಭಕ್ಕೆ ಕರೆಸಬೇಕೆಂದು ಆಲೋಚಿಸಿದೆವು. ಅದರಂತೆ 1999ರ ಡಿಸೆಂಬರ್ 6ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸಭೆ ಏರ್ಪಡಿಸಲಾಯಿತು. ಸಾರಾ ಅವರಿಗೆ ಫೋನ್ ಮಾಡಲಾಗಿ ಒಪ್ಪಿಕೊಂಡು ಬರುವುದಾಗಿ ಹೇಳಿದರು. ಆಹ್ವಾನ ಪತ್ರಿಕೆ ಪ್ರಿಂಟ್ ಹಾಕಿಸಿಕೊಂಡು ಬರುವುದಾಗಿ ಲಂಕೇಶರಿಗೆ ತೋರಲು ಹೋದರೆ, ಅವರು ರೇಗಿ “ಅದೇನಯ್ಯ ಡಿಸೆಂಬರ್ ಆರಿಗೆ ಗಂಟು ಬಿದ್ದಿದ್ದೀರಿ. ಬೇರೆ ದಿನಾಂಕ ಗೊತ್ತು ಮಾಡು” ಎಂದರು. ನಾನು ಮುಂದಿನ ಹದಿನಾಲ್ಕನೇ ತಾರೀಕು ನಿಗದಿ ಮಾಡುವ ಗಡಿಬಿಡಿಯಲ್ಲಿ ಕಾರ್ಯಕ್ರಮ ಮುಂದೆ ಹೋದದ್ದನ್ನು ಸಾರ ಅವರಿಗೆ ತಿಳಿಸಲಿಲ್ಲ. ಆದರೆ ಸಾರಾ ಆರನೇ ತಾರೀಕು ಶಿವಮೊಗ್ಗಕ್ಕೆ ಬಂದು ಕುವೆಂಪು ರಂಗಮಂದಿರಕ್ಕೆ ಹೋಗಿದ್ದಾರೆ. ಅಲ್ಲಿ ಯಾರೂ ಇರದಿದ್ದನ್ನು ಕಂಡು, ಕಡೆಗೆ ಇಲಾಖೆ ನಿರ್ದೇಶಕನ ಛೇಂಬರಿಗೆ ಹೋಗಿ ಕೇಳಿದಾಗ ಅವರು, ’ಈ ದಿನ ಯಾವ ಸಮಾರಂಭವೂ ಇಲ್ಲ’ ಎಂದಿದ್ದಾರೆ. ಸಾರಾ ವಾಪಸು ಹೊರಟುಹೋಗಿದ್ದಾರೆ. ಇದನ್ನು ನನ್ನ ಗಮನಕ್ಕೆ ನಿರ್ದೇಶಕರು ತಂದಾಗ, ನಾನು ಕ್ಷಮೆ ಯಾಚಿಸಲು ಫೋನ್ ಮಾಡಿ ಮಾತಾಡಿದೆ. ಆದರೆ ಸಾರಾ, ’ನಾನು ಅಲ್ಲಿ ಬಂದೇ ಇಲ್ಲ’ ಎಂದರು. ನನ್ನ ಅಜಾಗರೂಕತೆಯಿಂದ ನನಗೆ ನೋವಾಗಬಾರದೆಂದು ನಾನಲ್ಲಿಗೆ ಬಂದೇ ಇಲ್ಲವೆಂದು ವಾದಿಸಿದರು. ಅದು ಅವರ ಶ್ರೇಷ್ಠ ಗುಣ. ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ನಡೆದುಕೊಂಡು ಅದನ್ನು ತಮ್ಮ ಬದುಕಿನುದ್ದಕ್ಕೂ ವ್ರತದಂತೆ ಪಾಲಿಸಿದ ಸಾರಾ ಈ ನಾಡು ತಲುಪಿರುವ ಸ್ಥಿತಿ ನೆನಸಿಕೊಂಡು ಕೊರಗುವಂತಾಗಿದ್ದರು.

ಲಂಕೇಶ್ ಪತ್ರಿಕೆ ಮುಖಾಂತರ ಬರವಣಿಗೆಯ ಉತ್ತುಂಗಕ್ಕೇರಿದ ಒಂದು ಡಜನ್ ಮಹಿಳಾ ಲೇಖಕಿಯರ ಪೈಕಿ ಲಂಕೇಶರ ಮತ್ತು ಲಂಕೇಶ್ ಪತ್ರಿಕೆಯ ಸಿದ್ಧಾಂತಗಳಿಗೆ ಚ್ಯುತಿಬಾರದಂತೆ ಬದುಕಿದ ವಿರಳ ಮಹಿಳೆ ಸಾರಾ. ಕಳೆದ 8ನೇ ತಾರೀಕಿನಂದು ಬೆಂಗಳೂರಲ್ಲಿ ನಡೆದ ಜನಸಾಹಿತ್ಯ ಸಮಾವೇಶದ ಅಂಗಳದಲ್ಲಿ ಹಲವಾರು ಕಲಾವಿದರು ತಮ್ಮ ವ್ಯಂಗ್ಯಚಿತ್ರಗಳನ್ನು ಪ್ರದರ್ಶಿಸಿದ್ರು. ಒಬ್ಬ ಕಲಾವಿದರು (ಅವರ ಚಿತ್ರವನ್ನೇ ದಿಟ್ಟಿಸುತ್ತಾ ಕಲಾವಿದರ ಹೆಸರನ್ನು ಗಮನಿಸುವುದನ್ನೇ ಮರೆತೆ) ಅತ್ಯಂತ ಕಡಿಮೆ ಗೆರೆಯಲ್ಲಿ ಸಾರ ಅವರ ದುಂಡದ ಮುಖವನ್ನು ಚಿತ್ರಿಸಿದ್ದರು. ಅಲ್ಲೇ ಬೊಳುವಾರು ಚಿತ್ರವೂ ಇತ್ತು. ಅದು ಎಂದಿನಂತೆ ದಿಗ್ಭ್ರಮೆಯ ನೋಟದಲ್ಲಿತ್ತು. ಆದರೆ ಅತ್ಯಂತ ಕಡಿಮೆ ರೇಖೆಗಳಲ್ಲಿ ಸಾರಾ ಅವರ ಚಿತ್ರ ಬಿಡಿಸಿದ್ದ ಬಗೆಯನ್ನು ಮೆಚ್ಚಿಕೊಂಡ ನಾನು ನಟರಾಜ್ ಹುಳಿಯಾರ್‌ರನ್ನು ಕರೆದು ಆ ಚಿತ್ರ ತೋರಿಸಿದೆ. ಅವರೂ ಮೆಚ್ಚಿಕೊಂಡರು. ಮಹಿಳಾ ಲೋಕದ ಸಮಸ್ಯೆಗಳನ್ನ ತಮ್ಮ ಗಂಭೀರ ಮುಖದಲ್ಲಿ ಪ್ರತಿಬಿಂಬಿಸುತ್ತಿದ್ದ ಸಾರಾ ತುಂಬ ಆತಂಕದಿಂದಲೇ ನಿರ್ಗಮಿಸಿದ್ದಾರೆ. ಆದರೆ ಜನಸಾಹಿತ್ಯ ಸಮಾವೇಶದಲ್ಲಿ ಕಂಡ ಹಲವಾರು ಮುಸ್ಲಿಂ ತರುಣಿಯರು ಸಾರಾ ಅವರ ಸ್ಥಾನ ತುಂಬಲಿದ್ದಾರೆ. ಹಾಗಾಗಿ ನಿಮ್ಮ ಬದುಕು ಸಾರ್ಥಕವಾಗಿದೆ, ಹೋಗಿ ಬನ್ನಿ ಸಾರಾ ಅನ್ನಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...