Homeಕರ್ನಾಟಕಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

ಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

- Advertisement -
- Advertisement -

ಅಮಾಯಕ ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾವುಬದುಕಿನ ನಡುವೆ ಸಂತ್ರಸ್ತ ದಲಿತ ಹೋರಾಡುತ್ತಿದ್ದರೆ, ಆತನ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿದ್ದಾರೆಂಬ ಆರೋಪವೂ ಕೇಳಿಬಂದಿದೆ.

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ  ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

ಹಲ್ಲೆಗೊಳಗಾದ ಶೇಖರ್‌

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌…

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ಘಟನೆಯ ಕುರಿತು ಯಾವುದಾದರೂ ಕ್ರಮ ಜರುಗಿಸಿದ್ದಾರಾ ಎಂದು ತಿಳಿಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರನ್ನು ನಾಲ್ಕೈದು ಬಾರಿ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಹಾಸನದ ಸ್ಥಳೀಯ ಪತ್ರಿಕೆಯ ಭೀಮವಿಜಯಕ್ಕೆ ಎಸ್‌ಪಿ ಪ್ರತಿಕ್ರಿಯೆ ನೀಡಿರುವುದು ವರದಿಯಾಗಿದ್ದು, “ಇಲಾಖೆ ಸಿಬ್ಬಂದಿ ಕಾರಣವಿಲ್ಲದೆ ಯಾರ ಮೇಲೂ ಹಲ್ಲೆ ನಡೆಸುವುದಿಲ್ಲ. ಆದರೂ ಈ ರೀತಿ ಹಲ್ಲೆ ನಡೆಸಿರುವುದನ್ನು ನಾವು ಸಹಿಸುವುದಿಲ್ಲ. ಈ ಸಂಬಂಧ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...