Homeಕರ್ನಾಟಕಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

ಅಮಾಯಕ ದಲಿತನ ಮೇಲೆ ಹಾಸನ ಪೊಲೀಸರ ಅಟ್ಟಹಾಸ; ಜಡ್ಡುಗಟ್ಟಿನ ವ್ಯವಸ್ಥೆಯಲ್ಲಿ ನ್ಯಾಯ ಮರೀಚಿಕೆ

- Advertisement -
- Advertisement -

ಅಮಾಯಕ ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾವುಬದುಕಿನ ನಡುವೆ ಸಂತ್ರಸ್ತ ದಲಿತ ಹೋರಾಡುತ್ತಿದ್ದರೆ, ಆತನ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿದ್ದಾರೆಂಬ ಆರೋಪವೂ ಕೇಳಿಬಂದಿದೆ.

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ  ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

ಹಲ್ಲೆಗೊಳಗಾದ ಶೇಖರ್‌

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣದಲ್ಲಿ ನಾಲ್ವರ ಬಂಧನ

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌…

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ಘಟನೆಯ ಕುರಿತು ಯಾವುದಾದರೂ ಕ್ರಮ ಜರುಗಿಸಿದ್ದಾರಾ ಎಂದು ತಿಳಿಯಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರನ್ನು ನಾಲ್ಕೈದು ಬಾರಿ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ಹಾಸನದ ಸ್ಥಳೀಯ ಪತ್ರಿಕೆಯ ಭೀಮವಿಜಯಕ್ಕೆ ಎಸ್‌ಪಿ ಪ್ರತಿಕ್ರಿಯೆ ನೀಡಿರುವುದು ವರದಿಯಾಗಿದ್ದು, “ಇಲಾಖೆ ಸಿಬ್ಬಂದಿ ಕಾರಣವಿಲ್ಲದೆ ಯಾರ ಮೇಲೂ ಹಲ್ಲೆ ನಡೆಸುವುದಿಲ್ಲ. ಆದರೂ ಈ ರೀತಿ ಹಲ್ಲೆ ನಡೆಸಿರುವುದನ್ನು ನಾವು ಸಹಿಸುವುದಿಲ್ಲ. ಈ ಸಂಬಂಧ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...