Homeಮುಖಪುಟಜೋಶಿಮಠ ಕುಸಿತದ ವಿವರ ನೀಡದಂತೆ ಇಸ್ರೋಗೆ ತಾಕೀತು; ವೆಬ್‌ಸೈಟ್‌ನಿಂದ ವರದಿ ಕಾಣೆ!

ಜೋಶಿಮಠ ಕುಸಿತದ ವಿವರ ನೀಡದಂತೆ ಇಸ್ರೋಗೆ ತಾಕೀತು; ವೆಬ್‌ಸೈಟ್‌ನಿಂದ ವರದಿ ಕಾಣೆ!

- Advertisement -
- Advertisement -

ಜೋಶಿಮಠ ಕುಸಿದಿರುವ ಕುರಿತು ಮಾಧ್ಯಮದೊಂದಿಗೆ ಸಂವಹನ ನಡೆಸದಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅದರ ಬಗ್ಗೆ ದತ್ತಾಂಶ ಹಂಚಿಕೊಳ್ಳದಂತೆ ಇಸ್ರೋಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ತಾಕೀತು ಮಾಡಿದೆ.

ಉತ್ತರಾಖಂಡದ ಜೋಶಿಮಠ ಕೇವಲ 12 ದಿನಗಳಲ್ಲಿ 5.4 ಸೆಮೀ ಕುಸಿದಿದೆ ಎಂದು ಇಸ್ರೋದ ವರದಿ ಬಹಿರಂಗಗೊಳಿಸಿದ ದಿನದ ಬಳಿಕ ಎನ್‌ಡಿಎಂಎ ಈ ನಿಷೇಧ ವಿಧಿಸಿದೆ. ಮಾಧ್ಯಮ ಸಂಸ್ಥೆಗಳು ದತ್ತಾಂಶದ ಕುರಿತು ತನ್ನದೇ ವ್ಯಾಖ್ಯಾನ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿವೆ ಎಂದು ಪ್ರಾಧಿಕಾರ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘‘ಜೋಶಿಮಠ ಕುಸಿತಕ್ಕೆ ಸಂಬಂಧಿಸಿದ ದತ್ತಾಂಶವನ್ನು ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಬಿಡುಗಡೆ ಮಾಡಿರುವುದೇ ಅಲ್ಲದೆ, ಮಾಧ್ಯಮದೊಂದಿಗೆ ಸಂವಹನ ನಡೆಸಿ ತಮ್ಮದೇ ವ್ಯಾಖ್ಯಾನ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದಾಗಿ ಸಂತ್ರಸ್ತ ಜನರಲ್ಲಿ ಮಾತ್ರವಲ್ಲದೆ, ದೇಶದ ನಾಗರಿಕರಲ್ಲೂ ಗೊಂದಲ ಮೂಡಿಸುತ್ತದೆ’’ ಎಂದು ಪ್ರಾಧಿಕಾರ ಹೇಳಿದೆ.

ಜೋಶಿಮಠದಲ್ಲಿ ಭೂಕುಸಿತ ಅಂದಾಜಿಸಲು ತಜ್ಞರ ತಂಡವೊಂದನ್ನು ರೂಪಿಸಿರುವ ಬಗ್ಗೆ ಗಮನ ಸೆಳೆದಿರುವ ಎನ್‌ಡಿಎಂಎ, “ಈ ವಿಷಯದ ಕುರಿತು ತಮ್ಮ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಬೇಕು. ತಜ್ಞರ ಗುಂಪು ಅಂತಿಮ ವರದಿ ಬಿಡುಗಡೆ ಮಾಡುವವರೆಗೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದನ್ನೂ ಪೋಸ್ಟ್ ಮಾಡಬಾರದು” ಎಂದು ಇಸ್ರೋ ಸೇರಿದಂತೆ ಹಲವು ಸಂಸ್ಥೆಗಳಿಗೆ ಎನ್‌ಡಿಎಂಎ ಸೂಚಿಸಿದೆ.

ವೆಬ್‌ಸೈಟ್‌ನಿಂದ ಕಾಣೆಯಾದ ವರದಿ

ಉತ್ತರಾಖಂಡದ ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಇಸ್ರೋದ ವರದಿಯೊಂದು ಸರ್ಕಾರಿ ಒಡೆತನದ ವೆಬ್‌ಸೈಟ್‌ ಎನ್‌ಆರ್‌ಎಸಿಯಿಂದ ತೆಗೆಯಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರವಷ್ಟೇ ಬಿಡುಗಡೆಗೊಂಡಿದ್ದ ಈ ವರದಿ ಜೋಶಿಮಠದಲ್ಲಿ ಡಿಸೆಂಬರ್‌ 27 ಹಾಗೂ ಜನವರಿ 8ರ ನಡುವೆ ಭೂಮಿ 5.4 ಸೆಂಮೀಗಳಷ್ಟು ಕುಸಿದಿದೆ ಎಂದು ಹೇಳಿತ್ತು. ಅದೇ ಸಮಯ ಎಪ್ರಿಲ್- ನವೆಂಬರ್‌ 2022ರ ಅವಧಿಯಲ್ಲಿ ಇಲ್ಲಿ ಭೂಮಿ 8.9 ಸೆಂ.ಮೀಗಳಷ್ಟು ಕುಸಿದಿತ್ತು ಎಂದು ಕಾಟ್ರೊಸ್ಯಾಟ್- 2ಎಸ್‌ ಉಪಗ್ರಹದಿಂದ ತೆಗೆದ ಚಿತ್ರದ ಆಧಾರದಲ್ಲಿ ವರದಿ ಪ್ರಕಟಗೊಂಡಿತ್ತು.

ಕೆಲವೇ ದಿನಗಳ ಅವಧಿಯಲ್ಲಿ ಜೋಶಿಮಠದಲ್ಲಿ ಭೂಮಿ 5 ಸೆಂ.ಮೀಗಳಷ್ಟು ಕುಸಿದಿದೆ. ಆದರೆ ಈಗ ಅದು ಜೋಶಿಮಠದ ಕೇಂದ್ರ ಭಾಗಕ್ಕೆ ಸೀಮಿತವಾಗಿದೆ ಎಂದು ವರದಿ ಹೇಳಿರುವುದಲ್ಲದೆ, ಕುಸಿತದ ಕೇಂದ್ರಬಿಂದು ಜೋಶಿಮಠ- ಔಲಿ ರಸ್ತೆಯ ಸಮೀಪ 2,180 ಮೀಟರ್‌ ಎತ್ತರದಲ್ಲಿದೆ ಎಂದು ವರದಿ ತಿಳಿಸಿತ್ತು.

ಸೇನಾ ಹೆಲಿಪ್ಯಾಡ್‌ ಮತ್ತು ನರಸಿಂಗ ದೇವಳವು ಭೂಮಿ ಕುಸಿತ ವಲಯದಲ್ಲಿರುವ ಪ್ರಮುಖ ಸ್ಥಳಗಳು ಎಂದೂ ಉಪಗ್ರಹ ಚಿತ್ರಗಳಿಂದ ತಿಳಿದು ಬಂದಿದೆ.

ಈ ವರದಿ ಪರಿಸರದ ನಾಗರಿಕರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಇಲ್ಲಿ ಭೂಮಿ ಕುಸಿಯಲು ಜೋಶಿಮಠದ ಸಮೀಪದಲ್ಲಿ ಜಾರಿಯಾಗುತ್ತಿರುವ ಎನ್‌ಟಿಪಿಸಿಯ 520 ಮೆವಾ ತಪೋವನ್‌ ವಿಷ್ಣುಗಢ್‌ ಹೈಡ್ರೋಪವರ್‌ ಯೋಜನೆ ಕಾರಣ ಎಂದು ಸ್ಥಳೀಯರು, ಪರಿಸರವಾದಿಗಳು ಮತ್ತು ಭೂಗರ್ಭಶಾಸ್ತ್ರಜ್ಞರು ನಂಬಿದ್ದರೂ ಒಕ್ಕೂಟ ಸರ್ಕಾರ ಅದನ್ನು ಅಲ್ಲಗಳೆದಿದೆ.

ಜೋಶಿಮಠದ ಕುರಿತು ಹೇಳಿಕೆ ನೀಡುವಂತಿಲ್ಲ

ಉತ್ತರಾಖಂಡದ ಜೋಶಿಮಠ ಕೇವಲ 12 ದಿನಗಳಲ್ಲಿ 5.4 ಸೆಂಮೀಗಳಷ್ಟು ಕುಸಿದಿದೆ ಎಂಬ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಉಪಗ್ರಹ ಚಿತ್ರಗಳ ಜೊತೆಗೆ ಮಾಹಿತಿ ಬಿಡುಗಡೆ ಮಾಡಿದ ಬೆನ್ನಲ್ಲೇ ಒಕ್ಕೂಟ ಸರ್ಕಾರ ಈ ಕುರಿತು ಸರ್ಕಾರಿ ಸಂಸ್ಥೆಗಳು ಮಾಧ್ಯಮಗಳಿಗೆ ಮಾಹಿತಿ ನೀಡುವುದನ್ನು ನಿಷೇಧಿಸಿದೆ.

ಈ ಬಗ್ಗೆ ಸೂಚನೆ ನೀಡಿರುವ ಒಕ್ಕೂಟ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ, “ಜೋಶಿಮಠದ ಪರಿಸ್ಥಿತಿಯ ಕುರಿತು ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳಿಗೆ ತಮ್ಮದೇ ಆದ ಮಾಹಿತಿ ಬಿಡುಗಡೆ ಮಾಡುವುದು ಹಾಗೂ ಮಾಧ್ಯಮಗಳ ಜೊತೆ ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಜೋಶಿಮಠದ ಹಾಗೂ ದೇಶದ ಜನರಲ್ಲಿ ಗೊಂದಲಗಳನ್ನು ಹುಟ್ಟುಹಾಕುತ್ತಿದೆ. ಜೋಶಿಮಠದ ಪರಿಸ್ಥಿತಿಯ ಅಧ್ಯಯನಕ್ಕೆ ಈಗಾಗಲೇ ತಜ್ಞರ ಸಮಿತಿ ರಚಿಸಲಾಗಿದೆ. ಆ ವರದಿ ಸಿಗುವವರೆಗೆ ಇಸ್ರೋ ಸೇರಿದಂತೆ ಇನ್ನಿತರ ಸಂಸ್ಥೆಗಳು ತಮ್ಮ ಅಧಿಕಾರಿಗಳಿಗೆ ಸಂಯಮ ವಹಿಸಲು ಸೂಚಿಸಬೇಕು” ಎಂದು ತಾಕೀತು ಮಾಡಿದೆ.

ಜೋಶಿಮಠದ ಬಗ್ಗೆ ಇಸ್ರೋ ಕಂಡುಕೊಂಡಿರುವುದೇನು?

ಉತ್ತರಾಖಂಡದ ಪ್ರಸಿದ್ಧ ಪುಣ್ಯಕ್ಷೇತ್ರಗಳ ಹೆಬ್ಬಾಗಿಲಿನಂತಿರುವ ಮತ್ತು ಭೂಕುಸಿತದಿಂದ ಸುದ್ದಿಯಾಗುತ್ತಿರುವ ಉತ್ತರಾಖಂಡದ ಜೋಶಿಮಠ ನಗರ ಕೇವಲ 12 ದಿನಗಳಲ್ಲಿ ಬರೋಬ್ಬರಿ 5.4 ಸೆಂಟಿಮೀಟರ್‌ಗಳಷ್ಟು ಕುಸಿತ ಕಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಹೇಳಿದೆ. ಇದಲ್ಲದೇ ಮುಂದಿನ ದಿನಗಳಲ್ಲಿ ಇಡೀ ನಗರವೇ ಭೂ ಸಮಾಧಿಯಾಗುವ ಅಪಾಯವನ್ನೂ ಎದುರಿಸುತ್ತಿದೆ ಎಂದು ಎಚ್ಚರಿಸಿದೆ.

ಇಸ್ರೋ ನೀಡಿರುವ ಈ ಮಾಹಿತಿ, ಬಾರಿ ಭೂಕುಸಿತದ ಹೊರತಾಗಿಯೂ ನಗರವನ್ನು ತೊರೆಯಲು ನಿರಾಕರಿಸುತ್ತಿರುವವರ ಪಾಲಿಗೆ ಮತ್ತು ಸರ್ಕಾರದ ಪಾಲಿಗೆ ಹೊಸ ಎಚ್ಚರಿಕೆ ಗಂಟೆಯಾಗಿ ಹೊರಹೊಮ್ಮಿದೆ. ಅಲ್ಲದೆ ಮುಂದಿನ ಕೆಲ ದಿನಗಳಲ್ಲಿ ಜೋಶಿಮಠ ಸುತ್ತಮುತ್ತಲ ಪ್ರದೇಶವು ಮಳೆ ಮತ್ತು ಹಿಮಪಾತಕ್ಕೆ ಒಳಗಾಗುವ ಸಾಧ್ಯತೆ ಇರುವ ಕಾರಣ, ಯಾವುದೇ ಸಮಯದಲ್ಲಿ ದೊಡ್ಡ ಅನಾಹುತ ಎದುರಾಗುವ ಭೀತಿ ಕಾಣಿಸಿಕೊಂಡಿದೆ.

ಕಾರ್ಟೋಸ್ಯಾಟ್‌-2ಎಸ್‌ ಉಪಗ್ರಹ ಸೆರೆಹಿಡಿದಿರುವ ಚಿತ್ರಗಳ ಪ್ರಕಾರ 2022ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಜೋಶಿಮಠದಲ್ಲಿ ಭೂಮಿ 8.9 ಸೆಂಮೀ ಕುಸಿತವಾಗಿದೆ. ಆದರೆ 2022ರ ಡಿಸೆಂಬರ್ 27ರಿಂದ 2023ರ ಜನವರಿ 8ರವರೆಗಿನ ಕೇವಲ 12 ದಿನಗಳ ಅವಧಿಯಲ್ಲಿ 5.4 ಸೆಂಮೀಗಳಷ್ಟು ಜಾರಿದೆ.

ಈ ವಿವರ ಇಸ್ರೋದ ರಾಷ್ಟ್ರೀಯ ಸೂಕ್ಷ್ಮ ಸಂವೇದಿ ಕೇಂದ್ರದ ಪ್ರಾಥಮಿಕ ಅಧ್ಯಯನದಿಂದ ತಿಳಿದುಬಂದಿದೆ. ಭೂಕುಸಿತ ಹಿನ್ನೆಲೆಯಲ್ಲಿ ಜೋಶಿಮಠದಿಂದ ಈಗಾಗಲೇ 589 ಮಂದಿಯನ್ನೊಳಗೊಂಡ 169 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು. ಪರಿಹಾರಕ್ಕಾಗಿ ಶಿಬಿರಕ್ಕೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It looks funny that govt. putting restrictions on ISRO giving clear picture about the clear picture about the future situation from which we can avoid unnecessary lose of most valuable human lives. Is it necessary to keep the fact as a secret and playing with the lives of the common people.??

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...