Homeಕರ್ನಾಟಕದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

ದಲಿತ ಕಾರ್ಮಿಕನಿಗೆ ವಿನಾಕಾರಣ ಹಲ್ಲೆ: ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಸಸ್ಪೆಂಡ್‌

- Advertisement -
- Advertisement -

ದಲಿತ ಕಾರ್ಮಿಕನ ಮೇಲೆ ಪೊಲೀಸರು ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರ ಕುಟುಂಬಕ್ಕೆ ಪೊಲೀಸರು ಬೆದರಿಕೆ ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಹಾಸನ ಪೊಲೀಸ್ ಠಾಣೆಯ ಎಎಸ್‌ಐ ಹರೀಶ್‌ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಘಟನೆ ವಿವರ:

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ ಅವರು ಕೆಲಸ ಮುಗಿಸಿಕೊಂಡು ಜ.5ನೇ ತಾರೀಕು ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದಲ್ಲಿರುವ ತನ್ನ ಬಾಡಿಗೆ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಘಟನೆ ನಡೆದಿದೆ ಎಂದು ಶೇಖರ ಅವರ ಪತ್ನಿ ಸುಧಾ ದೂರು ನೀಡಿದ್ದಾರೆ.

“ನನ್ನ ಗಂಡ ಶೇಖರರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಎಸ್‌ಐ ಹರೀಶ್‌ ಹಾಗೂ ಇತರೆ ಮೂರು ಜನ ಪೊಲೀಸ್ ಪೇದೆಗಳ ಮೇಲೆ ದೂರು ದಾಖಲಿಸದೆ ವಿಳಂಬ ಮಾಡಲಾಗುತ್ತಿದೆ” ಎಂದು ಜಿಲ್ಲಾಧಿಕಾರಿಯವರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತರ ಆರೋಪವೇನು?

ಬೇಲೂರು ತಾಲೂಕಿನ ಅಪ್ಪಗೌಡನಹಳ್ಳಿ ಗ್ರಾಮದ ಶೇಖರ್ ರಾತ್ರಿ 10.30ರ ಸುಮಾರಿಗೆ ಬಸ್ಸಿನಿಂದ ಇಳಿದು ಹಾಸನದ ಹಳೇ ಮಾರ್ಕೆಟ್‌ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿರಬೇಕಾದರೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಹಾಸನ ನಗರ ಠಾಣೆಯ ಎಎಸ್‌ಐ ಹರೀಶ್ ಮತ್ತು ಸಿಬ್ಬಂದಿ ಏಕಾಏಕಿ ಶೇಖರ್‌ ಮೇಲೆ ಕಳ್ಳತನದ ಆರೋಪ ಹೊರಿಸಿ ಹೊಡೆದಿದ್ದಾರೆ. ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದೀಯ ಎಂದು ಗದರಿಸಿ ವಾಚಾಮ ಗೋಚರವಾಗಿ ನಿಂದಿಸಿ, ನೆಲದ ಮೇಲೆ ಬೀಳಿಸಿ ಬಟ್ಟೆಹರಿದು ಹಾಕಿದ್ದಾರೆ. ಬೂಟು ಕಾಲಿನಿಂದ ಒದ್ದಿದ್ದಾರೆ. ಕೈ ಮೂಳೆ ಮುರಿದು ಹೋಗುವ ಹಾಗೆ ಥಳಿಸಿದ್ದಾರೆ.

“ಇಲ್ಲ ಸ್ವಾಮಿ ನಾನು ಅಮಾಯಕ. ನಾನು ಹಳೇಬೀಡಿನಲ್ಲಿ ಕೆಲಸ ಮುಗಿಸಿಕೊಂಡು ಬರುತ್ತಿದ್ದೇನೆ. ಹಾಸನದ ಚನ್ನಪಟ್ಟಣದಲ್ಲಿರುವ ಬಾಡಿಗೆ ಮನೆಗೆ ಮಲಗಲು ಹೋಗುತ್ತಿದ್ದೇನೆ” ಎಂದು ಶೇಖರ್‌ ಅಂಗಲಾಚಿದರೂ ಕೇಳದೆ ಮನಸೋಇಚ್ಛೆ ಹೊಡೆದಿದ್ದಾರೆ. ಎಷ್ಟು ಕಾಡಿ ಬೇಡಿದರೂ ಕೈಕಾಲು ಹಿಡಿದರೂ ಶೇಖರ್‌ ಅವರನ್ನು ಪೊಲೀಸರು ಬಿಡಲಿಲ್ಲ.

“ಹೇಳು, ಏನು ಕದಿಯಲು ಬಂದಿದ್ದೆ? ಎಲ್ಲಿಟ್ಟಿದ್ದೀಯಾ? ಎಂದು ಏಕಪಕ್ಷೀಯವಾಗಿ ನನ್ನ ಮೇಲೆ ಹಲ್ಲೆ ಮಾಡಿದರು. ಮುಂದುವರಿದು ಪೊಲೀಸ್‌ ಭಾಷೆಯಲ್ಲಿ ಮಾತನಾಡುತ್ತಾ, ಯಾವುದೋ ನಿನ್ನ ಜಾತಿ ಎಂದು ಕೇಳಿದರು. ನಾನು ಪರಿಶಿಷ್ಟ ಜಾತಿಯಯವನು ಎಂದು ಹೇಳಿದಾಗ ಕೆರಳಿ ಕೆಂಡವಾದ ಇಡೀ ಸಿಬ್ಬಂದಿ ನನಗೆ ಮತ್ತೆ ಮನಬಂದಂತೆ ಥಳಿಸಿದರು. ಜಾತಿ ನಿಂದನೆ ಮಾಡಿದರು. ಮಗನೇ ಈ ವಿಚಾರವನ್ನು ಎಲ್ಲಿಯಾದರೂ ಹೇಳಿದರೆ ಅಥವಾ ದೂರು ಕೊಟ್ಟರೆ ನಿನ್ನ ಕಥೆ ಮುಗಿಸುತ್ತೇವೆ ಎಂದು ಹೆದರಿಸಿ ಬೆದರಿಸಿ ಹೋದರು” ಎಂದು ಶೇಖರ್‌ ಘಟನೆಯನ್ನು ವಿವರಿಸಿರುವುದಾಗಿ ಆತನ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ನನ್ನ ಗಂಡನ ಮೊಬೈಲ್ ಹಾಗೂ ಹಣವನ್ನು ಕಿತ್ತುಕೊಂಡು ಪೊಲೀಸರು ಹೋಗಿದ್ದಾರೆ. ನನ್ನ ಗಂಡನ ಮೊಬೈಲ್‌ನಿಂದಲೇ ನನಗೆ ಕರೆ ಮಾಡಿ ಅಮಾಯಕನಿಗೆ ಹೊಡೆದಿರುವುದಾಗಿ ತಿಳಿಸಿದ್ದಾರೆ. ನನ್ನ ಗಂಡ ಬಸ್‌ಸ್ಟಾಂಡ್‌ನಲ್ಲಿಯೇ ಇದ್ದು ಬೆಳಿಗ್ಗೆ ಬಂದಿದ್ದಾರೆ. ಬೇಲೂರಿಗೆ ಹೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಎಕ್ಸ್‌ರೇ ಮಾಡಿಸಿದಾಗ ಕೈ ಮೂಳೆ ಮುರಿದಿರುವುದು ನಮಗೆ ಕಂಡು ಬಂದಿದೆ. ಆಪರೇಷನ್ ಸಹ ಮಾಡಿಸಿರುತ್ತೇವೆ. ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ತಿರುಮಲನಹಳ್ಳಿ ಶಿವಕುಮಾರ್ ಮಾತನಾಡಿ, “ಅಮಾಯಕ ದಲಿತ ಶೇಖರ್ ರವರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ. ಕುಟುಂಬದ ಆಶ್ರಯದಾತನಾಗಿದ್ದ ಈತ ಈಗ ತೀವ್ರತರಾದ ಅನಾರೋಗ್ಯದಿಂದ ಬಳಲುವಂತಾಗಿದೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಾಸನ ನಗರ ಠಾಣೆಯ ಎಎಸ್ಐ ಹರೀಶ್ ಮತ್ತು ತಂಡದವರಿಂದ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಹಾಸನ ಸಿಟಿ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ತನಿಖೆ ನಡೆಸಬೇಕು. ಕೆಲಸದಿಂದಲೇ ವಜಾ ಮಾಡಬೇಕು ಹಾಗೂ ಕಾನೂನನ್ನು ಪರಿಪಾಲುಸುವವರೇ ಕಾನೂನನ್ನು ಕೈಗೆ ತೆಗೆದುಕೊಂಡರೆ ಈ ಜನಸಾಮಾನ್ಯರ ಪಾಡೇನು?” ಎಂದು ಪ್ರಶ್ನಿಸಿದ್ದಾರೆ.

ತಬಲ ನುಡಿಸಿ ಜೀವನ ನಡೆಸುತ್ತಿದ್ದರು ಶೇಖರ್‌

ದಲಿತ ಸಮುದಾಯದ ಶೇಖರ್‌ ಕೂಲಿ ಮಾಡಿಕೊಂಡು, ಕೆಲವು ಸಂದರ್ಭಗಳಲ್ಲಿ ತಬಲ ನುಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈಗ ಕೈ ಬೆರಳುಗಳಿಗೆ ಹಾನಿ ಮಾಡಿರುವುದರಿಂದ ಬದುಕು ಅತಂತ್ರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...