Homeಕರ್ನಾಟಕಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

ಬಿ.ಎಸ್.ಪಿ ಯ ಎನ್ ಮಹೇಶ್ ಹೀಗೇಕೆ ಮಾಡಿದರು?

- Advertisement -
- Advertisement -

ಕುಮಾರಸ್ವಾಮಿ ಸರ್ಕಾರದ ವಿಶ್ವಾಸಮತ ಯಾಚನೆಯಲ್ಲಿ ಎನ್.ಮಹೇಶ್ ರವರಿಗೆ ಜೆಡಿಎಸ್-ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕೆಂದು ಬಿಎಸ್‍ಪಿಯ ನಾಯಕರು ಆದೇಶಿಸಿದ್ದರು. ಆದರೆ ಬಿಜೆಪಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಎನ್ ಮಹೇಶ್‍ರವರು ಸದನಕ್ಕೆ ಹಾಜರಾಗದೆ ಪಕ್ಷದಿಂದಲೇ ಈಗ ಅಮಾನತಾಗಿದ್ದಾರೆ. ದಲಿತ ವಲಯದಲ್ಲಿ ಭರವಸೆ ಮೂಡಿಸಿದ್ದ ಎನ್.ಮಹೇಶ್ ಹೀಗೇಕೆ ಮಾಡಿದರು? ಅನ್ನೋದು ಈಗ ಟಾಕ್ ಆಫ್ ದಿ ಟೌನ್ ಆಗಿಬಿಟ್ಟಿದೆ.

ಕೊಳ್ಳೇಗಾಲದ ಎನ್.ಮಹೇಶ್‍ರವರು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಯಾಗಿದ್ದವರು. ಬಹುಜನ ಸಿದ್ದಾಂತಕ್ಕೆ ಮಾರುಹೋಗಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಚಳವಳಿಗೆ ಧುಮುಕಿದವರು. ತನ್ನ ಸ್ನೇಹಿತ ಗೋಪಿನಾಥ್ ಜೊತೆ ಸೇರಿ ರಾಜ್ಯದಲ್ಲಿ ಬಿಎಸ್‍ಪಿ ಮತ್ತು ಬಿವಿಎಸ್ ಕಟ್ಟುವುದರಲ್ಲಿ ಮಹತ್ವದ ಮುಖ್ಯ ಪಾತ್ರ ಇವರದು. ಕರ್ನಾಟಕದಲ್ಲಿ ಅಕ್ಷರಶಃ ಸಾವಿರಾರು ಜನ ಇವರನ್ನು ಇಂದಿಗೂ ತಮ್ಮ ಗುರುಗಳೆಂದು ಭಾವಿಸಿದ್ದಾರೆ. ಅಷ್ಟರಮಟ್ಟಿಗೆ ‘ಮಹೇಶಣ್ಣ’ ಆಗಿ ಅವರು ಬಿಎಸ್‍ಪಿಯಲ್ಲಿ ತೊಡಗಿಸಿಕೊಂಡಿದ್ದರು.

ಅಂತ ಎನ್.ಮಹೇಶ್‍ರವರು ಸತತ ಮೂರು ಸಲ ಕೊಳ್ಳೆಗಾಲದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋಲುಂಡವರು. ಗೆಲ್ಲಲೇಬೇಕೆಂಬ ಶತಾಯಗತಾಯ ಪ್ರಯತ್ನದಿಂದ, ಎಲ್ಲಕ್ಕಿಂತ ಹೆಚ್ಚು ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕೊನೆಗೂ ಈ ಬಾರಿ ಗೆದ್ದರು ಮಾತ್ರವಲ್ಲ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸಹ ಆದರು. ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳನ್ನು ತರುತ್ತಾರೆ ಎಂದು ಹಲವಾರು ಜನ ನಂಬಿದ್ದರು. ಆದರೆ ಆದುದ್ದೇ ಬೇರೆ.

ಇದ್ದಕ್ಕಿದ್ದಂತೆ ಎನ್.ಮಹೇಶ್‍ರವರು ತಮ್ಮ ಅಮೂಲ್ಯ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾರಣ ಹುಡುಕುತ್ತಾ ಹೋದಾಗ ಗೊತ್ತಾಗಿದ್ದು ಬಿಎಸ್‍ಪಿಯ ನಾಯಕಿ ಮಾಯವತಿಯವರ ಗಮನಕ್ಕೆ ತಾರದೇ ರಾಜ್ಯದಲ್ಲಿ ದಶಕಗಳಿಗೂ ಹೆಚ್ಚು ಕಾಲ ಬಿವಿಎಸ್ ಎಂಬ ವಿದ್ಯಾರ್ಥಿ ಸಂಘಟನೆಯನ್ನು ಕಟ್ಟಿದ್ದರು ಮಾತ್ರವಲ್ಲ ಅದನ್ನು ಬಿಎಸ್‍ಪಿಯ ಚುನಾವಣಾ ರಾಜಕಾರಣಕ್ಕೂ ಬಳಸಿಕೊಂಡಿದ್ದರು. ಆ ತಪ್ಪಿಗೆ ಎನ್.ಮಹೇಶ್ ತಮ್ಮ ಸಚಿವ ಸ್ಥಾನವನ್ನೇ ಬಲಿಕೊಡಬೇಕಾಯಿತು. ಅಷ್ಟು ಮಾತ್ರವಲ್ಲ ಅಂದು ಮಾಯಾವತಿಯವರು “ಪ್ರೆಸ್ ಮೀಟ್ ಮಾಡಿ, ಬಹಿರಂಗವಾಗಿ ಕ್ಷಮೆ ಕೇಳಬೇಕು” ಎಂದು ಸಹ ಆದೇಶಿಸಿದ್ದರು. ಆದರೆ ಎನ್.ಮಹೇಶ್ ಹೇಗೊ ಮಾಡಿ ಅದರಿಂದ ನುಣಚಿಕೊಂಡಿದ್ದರು.

ಅಂತಹ ಎನ್.ಮಹೇಶ್‍ರವರು ರಾಜ್ಯ ರಾಜಕೀಯ ಅತ್ಯಂತ ಬಿಕ್ಕಟ್ಟಿನ ಸಂದರ್ಭದಲ್ಲಿದ್ದಾಗ ಸದನಕ್ಕೆ ಹಾಜರಾಗದೇ ದೊಡ್ಡ ಪ್ರಮಾದ ಮಾಡಿದರು. ಬಿಎಸ್‍ಪಿ ಪಕ್ಷ ಮೈತ್ರಿ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಆದೇಶಿಸಿದ್ದನ್ನು ಬೇಕಂತಲೇ ಉಲ್ಲಂಘಿಸಿದರು. ಬಿಜೆಪಿಯ ಕುದುರೆ ವ್ಯಾಪಾರ, ಅಪಾಯದಲ್ಲಿರುವ ಪ್ರಜಾತಂತ್ರ ಇತ್ಯಾದಿಗಳ ಕುರಿತು ಅತ್ಯಂತ ಮಹತ್ವದ ಮೌಲ್ಯಯುತ ಚರ್ಚೆ ನಡೆಯುತ್ತಿರಬೇಕಾದರೆ ಎನ್.ಮಹೇಶ್‍ರವರು ಸದನದಿಂದ ದೂರ ಉಳಿದುದ್ದನ್ನು ಬಹಳಷ್ಟು ಪ್ರಜ್ಞಾವಂತರು ಟೀಕಿಸಿದರು.

ಸದನದಲ್ಲಿ ಅವರು ಯಾವೊಂದು ಪಕ್ಷದ ಪರವಹಿಸಬೇಕಾದ ಅಗತ್ಯವೇನಿರಲಿಲ್ಲ. ಬದಲಿಗೆ ಪ್ರಜಾತಂತ್ರ, ಅಂಬೇಡ್ಕರ್‍ರವರು ರಚಿಸಿದ ಸಂವಿಧಾನ, ದೇಶದ ಇಂದಿನ ಸ್ಥಿತಿ, ದಲಿತರ ಪರಿಸ್ಥಿತಿಯ ಕುರಿತಾಗಿ ಅದ್ಭುತವಾಗಿ ಮಾತನಾಡಿ ಇಡೀ ದೇಶದ ಗಮನ ಸೆಳೆಯಬಹುದಿತ್ತು. ಮಾಧ್ಯಮಗಳ ಮೂಲಕ ಕರ್ನಾಟಕದ ಮೂರು ರಾಜಕೀಯ ಪಕ್ಷಗಳಿಗೂ ಅವರ ತಪ್ಪುಗಳನ್ನು ಮುಖಕ್ಕೆ ಹೊಡೆದಂತೆ ಹೇಳಬಹುದಿತ್ತು. ಸದನದ ಘನತೆ, ಜನರಿಗಾಗಿ ಶಾಸಕರು ಮಾಡಬೇಕಾದುದ್ದೇನು ಎಂಬುದರ ಕುರಿತು ಇಡೀ ರಾಷ್ಟ್ರಕ್ಕೆ ಮನವರಿಕೆ ಮಾಡಿಕೊಡಬಹುದಿತ್ತು. ಅಂತಹ ವಿಫುಲ ಅವಕಾಶವನ್ನು ಎನ್.ಮಹೇಶ್ ಹಾಳು ಮಾಡಿಕೊಂಡರು.

ಎನ್ ಮಹೇಶ್ ಹೀಗೇಕೆ ಮಾಡಿದರು?
ಅವಕಾಶವಾದಿತನವೇ ಮಹೇಶ್‍ರವರು ಹೀಗೆ ಮಾಡಲು ಪ್ರಮುಖ ಕಾರಣವಾಗಿದೆ. ಇದು ಈಗ ಮಾತ್ರ ಗೋಚರಿಸುತ್ತಿರುವುದಲ್ಲ ಬದಲಿಗೆ ಇದರ ಲಕ್ಷಣಗಳು ಈ ಹಿಂದೆಯೇ ಕಾಣಿಸಿಕೊಂಡಿದ್ದವು. ಹಲವು ವರ್ಷಗಳ ಹಿಂದೆಯೇ ಎನ್.ಮಹೇಶ್‍ರವರು ಬಿಜೆಪಿ ಬಿ.ಶ್ರೀರಾಮುಲು ಜೊತೆ ಸಖ್ಯ ಹೊಂದಿದ್ದರು ಮಾತ್ರವಲ್ಲದೇ ಅವರೊಡನೆ ಕೂಡಿ ರೆಸಾರ್ಟ್‍ನಲ್ಲಿ ಹಲವು ಯೋಜನೆಗಳನ್ನು ಸಹ ರೂಪಿಸಿದ್ದರು ಎಂದು ಅವರ ಸಮೀಪವರ್ತಿಗಳೇ ಹೇಳುತ್ತಾರೆ.

ಮಾಯಾವತಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಯಾವಾಗ ಆದೇಶಿಸಿದ್ದರೋ ಅಂದಿನಿಂದಲೂ ಅವರ ವಿರುದ್ಧ ಎನ್.ಮಹೇಶ್ ತಿರುಗಿ ಬಿದ್ದಿದ್ದಾರೆ. ಅವಕಾಶ ಕಾಯುತ್ತಿದ್ದ ಅವರು ಈಗ ಬೇಕಂತಲೇ ಸದನಕ್ಕೆ ಹಾಜರಾಗಿಲ್ಲ. ಪಕ್ಷದಿಂದ ಉಚ್ಚಾಟಿಸುವುದು ಅವರು ಸಹ ಬೇಕಿದ್ದಂತೆ ತೋರುತ್ತದೆ. ಇದರಿಂದ ಅವರ ಶಾಸಕ ಸ್ಥಾನಕ್ಕೇನೂ ಚ್ಯುತಿಯಾಗುವುದಿಲ್ಲ. ಇನ್ನು ಮುಂದೆ ಅವರು ಬಿಜೆಪಿ ಜೊತೆ ಸೇರಿಯೂ ಸಚಿವರಾಗುವ ಅವಕಾಶವಿದೆ. ಅದನ್ನು ಅವರು ನಿರಾಕರಿಸುವುದಿಲ್ಲ ಎಂಬುದು ಸಹ ಸತ್ಯವೆ.

ಅತ್ಯಂತ ಘನತೆಯಿಂದ ಚಳವಳಿ ಆರಂಭಿಸಿದ್ದ ಅವರು ಇಂದು ಈ ಸ್ಥಿತಿ ತಲುಪಿರುವುದು ದುರಂತ ಮಾತ್ರವಲ್ಲ ದಲಿತ ರಾಜಕಾರಣಕ್ಕಾದ ನಷ್ಟವೂ ಹೌದು. ಅವರನ್ನೇ ನಂಬಿದ್ದ ಅವರ ಅನುಯಾಯಿಗಳಿಗೆ ಮಾಡಿದ ದ್ರೋಹವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮ್ ವಿಲಾಸ್ ಪಾಸ್ವಾನ್, ರಾಮದಾಸ್ ಅಠಾವಳೆ, ಉದಿತ್ ರಾಜ್ ಮತ್ತು ಈಗ ಎನ್.ಮಹೇಶ್ ಎಲ್ಲರೂ ಅಂಬೇಡ್ಕರ್ ಸಿದ್ದಾಂತಕ್ಕೆ ಹಾಡುಹಗಲೇ ಚೂರಿ ಹಾಕಿದವರು. ಇವರ ರಾಜಕೀಯ ಗುಲಾಮಗಿರಿಗೆ ದಿಕ್ಕಾರವಿರಲಿ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...