Homeಮುಖಪುಟವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಟೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಟೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ಘಟನೆ ವೇಳೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೂಡಾ ಇದ್ದರು ಎಂದು ವರದಿ ಉಲ್ಲೇಖಿಸಿದೆ

- Advertisement -
- Advertisement -

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ಅನುಮತಿಯಿಲ್ಲದೆ ತೆರೆದು ವಿಮಾನಯಾನ ನಿಮಯಗಳ ಗಂಭೀರ ಉಲ್ಲಂಘನೆ ಮಾಡಿರುವ ಬಗ್ಗೆ ವರದಿಯಾಗಿದೆ. ಶಿಕ್ಷಾರ್ಹ ಅಪರಾಧ ಎನಿಸಿಕೊಂಡ ಈ ಘಟನೆ ನಡೆದು ಒಂದು ತಿಂಗಳು ಕಳೆದ ನಂತರ ಇಂಡಿಗೋ ಏರ್‌ಲೈನ್ಸ್‌ ಇದೀಗ ಹೇಳಿಕೆ ಬಿಡುಗಡೆ ಮಾಡಿದೆ. ಘಟನೆಯನ್ನು ‘ಆಕಸ್ಮಿಕ’ ಎಂದು ಇಂಡಿಗೋ ಹೇಳಿದೆಯಾದರೂ, ಆರೋಪಿಯ ಹೆಸರನ್ನು ಉಲ್ಲೇಖಿಸಿಲ್ಲ.

ಡಿಸೆಂಬರ್ 10 ರಂದು ಚೆನ್ನೈಯಿಂದ ತಿರುಚ್ಚಿಗೆ ಹೊರಟಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ತೇಜಸ್ವಿ ಸೂರ್ಯ ‘ಏರ್‌ಕ್ರಾಫ್ಟ್ ನಿಯಮ ಕಾಯ್ದೆ-1937’ ಅನ್ನು ಉಲ್ಲಂಘಿಸಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಡಿಗೋ ನೀಡಿರುವ ಹೇಳಿಕೆಯಲ್ಲಿ,“ಡಿಸೆಂಬರ್ 10 ರಂದು ಚೆನ್ನೈನಿಂದ ತಿರುಚಿರಾಪಳ್ಳಿಗೆ 6E 7339 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು, ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಆಕಸ್ಮಿಕವಾಗಿ ತುರ್ತು ನಿರ್ಗಮನವನ್ನು ತೆರೆದರು. ಈ ಪ್ರಯಾಣಿಕ ತನ್ನ ನಡೆಗಾಗಿ ಕ್ಷಮೆಯಾಚಿಸಿದ್ದಾರೆ. ಹೀಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್‌ ಪ್ರಕಾರ, ವಿಮಾನವು ಕಡ್ಡಾಯ ಎಂಜಿನಿಯರಿಂಗ್ ತಪಾಸಣೆಗೆ ಒಳಗಾಯಿತು. ಇದು ನಿರ್ಗಮನ ವಿಳಂಬಕ್ಕೆ ಕಾರಣವಾಯಿತು” ಎಂದು ಹೇಳಿದೆ.

ತಮಿಳುನಾಡು ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರು ಡಿಸೆಂಬರ್ 29, 2022 ರಂದು ಚೆನ್ನೈ-ತಿರುಚಿನಾಪಳ್ಳಿ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆಗೆದ ಬಗ್ಗೆ ಟ್ವೀಟ್ ಮಾಡಿ, ತೇಜಸ್ವಿ ಸೂರ್ಯ ಮತ್ತು ಬಿಜೆಪಿಯ ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಸುಳಿವು ನೀಡಿದ್ದರು. ಈ ವೇಳೆ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆಯನ್ನು ಎಎನ್‌ಐ ವರದಿ ಮಾಡಿತ್ತಾದರೂ, ಅದು ತನ್ನ ವರದಿಯಲ್ಲಿ ತಪ್ಪೆಸಗಿದ ಪ್ರಯಾಣಿಕನ ಹೆಸರನ್ನು ಬಹಿರಂಗಪಡಿಸಿರಲಿಲ್ಲ.

ಇದರ ನಂತರ ಇಂಗ್ಲಿಷ್‌ನ ಖ್ಯಾತ ಸುದ್ದಿ ಮಾಧ್ಯಮ ದಿ ನ್ಯೂಸ್‌ ಮಿನಿಟ್‌ ಈ ಬಗ್ಗೆ ಜನವರಿ 17ರ ಮಂಗಳವಾರ ಸುಧೀರ್ಘ ವರದಿಯನ್ನು ಪ್ರಕಟಿಸಿದೆ. ಸುದ್ದಿಯೂ ವೈರಲ್ ಆಗುತ್ತಿದ್ದಂತೆ, ಆರಂಭದಲ್ಲಿ ಈ ಬಗ್ಗೆ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದ ಇಂಡಿಗೋ ಏರ್‌ಲೈನ್ಸ್‌ ಇದೀಗ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದೆ.

ತುರ್ತು ಬಾಗಿಲು ತೆರೆದ ಕಾರಣಕ್ಕೆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ, ನಂತರ ಸಂಪೂರ್ಣ ತಪಾಸಣೆಗೆ ಒಳಗಾಗಬೇಕಾಗಿತ್ತು. ಹೀಗಾಗಿ ವಿಮಾನವೂ ಪ್ರಯಾಣವೂ ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಏರ್‌ಕ್ರಾಫ್ಟ್ ನಿಯಮ, 1937 ರ ಷರತ್ತು 22 (ಬಿ) ಪ್ರಕಾರ, ವಿಮಾನದ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಹಾಗೂ ವಿಮಾನದಲ್ಲಿ ಉತ್ತಮ ಕ್ರಮ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ವಿಮಾನದಲ್ಲಿ ಪ್ರಯಾಣಿಸುವ ಯಾವುದೇ ವ್ಯಕ್ತಿ, ಪೈಲಟ್-ಇನ್-ಕಮಾಂಡ್ ಪರವಾಗಿ ಸಿಬ್ಬಂದಿ ನೀಡಿದ ಕಾನೂನುಬದ್ಧ ಸೂಚನೆಯನ್ನು ಅನುಸರಿಸಲು ನಿರಾಕರಿಸಬಾರದು.

ಷರತ್ತು 23(1)(ಬಿ), ಯಾವುದೇ ಆಸ್ತಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಅಥವಾ ನಾಶಪಡಿಸುವ ಮೂಲಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಉತ್ತಮ ಸುವ್ಯವಸ್ಥೆ – ಶಿಸ್ತಿಗೆ ಅಪಾಯವನ್ನುಂಟುಮಾಡುವ ಆಕ್ರಮಣ ಮತ್ತು ಇತರ ಕೃತ್ಯಗಳ ಕುರಿತು ಮಾತನಾಡುತ್ತದೆ.

ಸಂಸದರು ತುರ್ತು ನಿರ್ಗಮನದ ಬಾಗಿಲು ತೆರೆದಾಗ ಪ್ರಯಾಣಿಕರು ಭಯಭೀತರಾಗಿದ್ದರು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. “ಅದೃಷ್ಟವಶಾತ್ ವಿಮಾನವು ನೆಲದ ಮೇಲೆ ಇದ್ದಾಗ ಇದು ಸಂಭವಿಸಿದೆ. ಈ ರೀತಿಯ ಘಟನೆ ವಿಮಾನ ಹಾರಾಡುತ್ತಾ ಇರಬೇಕಾದರೆ ಏನಾದರೂ ಸಂಭವಿಸಿದ್ದರೆ, ಪರಿಸ್ಥಿತಿ ನಿಜವಾಗಿಯೂ ಕೆಟ್ಟದಾಗಿರುತ್ತಿತ್ತು” ಎಂದು ವಿಮಾನಯಾನ ಸಿಬ್ಬಂದಿ ನಮಗೆ ಹೇಳಿದರು ಎಂದು ಪ್ರಯಾಣಿಕ ಹೇಳಿದ್ದಾರೆ. “ವಿಮಾನದಲ್ಲಿ ಗಾಲಿಕುರ್ಚಿಯ ಸಹಾಯದಿಂದ ಓಡಾಡುವ ಸಾಕಷ್ಟು ವಯಸ್ಸಾದ ಪ್ರಯಾಣಿಕರು ಇದ್ದರು” ಎಂದು ಅವರು ಹೇಳಿದ್ದಾರೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನ ಬಾಗಿಲನ್ನು ತೆರೆದ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿದ ಉದಾಹರಣೆಗಳಿವೆ. ಏಪ್ರಿಲ್ 2019 ರಲ್ಲಿ, ಬೆಂಗಳೂರು-ಲಕ್ನೋ ವಿಮಾನದಲ್ಲಿ ತುರ್ತು ನಿರ್ಗಮನದ ಬಳಿ ಕುಳಿತಿದ್ದ ಮೊದಲ ಬಾರಿಗೆ ವಿಮಾನಯಾನ ಮಾಡುವ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲನ್ನು ಕಿಟಕಿ ಎಂದು ತಪ್ಪಾಗಿ ಗ್ರಹಿಸಿ ಅದನ್ನು ತೆರೆದಿದ್ದರು. ನಂತರ ಅವರನ್ನು ಕೆಳಗಿಳಿಸಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಫೆಬ್ರವರಿ 2017 ರಲ್ಲಿ, ಮುಂಬೈನಿಂದ ಚಂಡೀಗಢಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ವಿಮಾನ ಟೇಕ್-ಆಫ್ ಮಾಡುವ ಮೊದಲು ತೆರೆದಿದ್ದರು. ಘಟನೆಯ ಹಿನ್ನಲೆ ಇಂಡಿಗೋ ಏರ್‌ಲೈನ್ಸ್ ನೀಡಿದ ದೂರಿನ ಆಧಾರದ ಮೇಲೆ ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು.

“ವಿಮಾನದ ತುರ್ತು ನಿರ್ಗಮನವನ್ನು ತೆರೆಯುವುದು ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಪ್ರಕರಣ ದಾಖಲಿಸಬಹುದಾದ ಘಟನೆಯಾಗಿದೆ” ಎಂದು ವಾಯುಯಾನ ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಹೇಳಿದ್ದಾರೆ.

“ತುರ್ತು ನಿರ್ಗಮನ ಬಾಗಿಲನ್ನು ಮತ್ತೆ ಹೊಂದಿಸಬೇಕಾಗಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು ಮತ್ತು ದೂರು ಸಲ್ಲಿಸಬೇಕು. ಈ ಬಗ್ಗೆ ಡಿಜಿಸಿಎಗೆ ವರದಿ ಸಲ್ಲಿಸಬೇಕಿತ್ತು. ಪ್ರಯಾಣಿಕ ಕ್ಷಮೆಯಾಚಿಸಿದ ಕಾರಣ ಅಥವಾ ಅವರು ವಿಐಪಿ ಆಗಿರುವ ಕಾರಣ ಅದನ್ನು ಮುಚ್ಚಿಡಬಹುದಾದ ವಿಷಯವಲ್ಲ” ಎಂದು ಮೋಹನ್ ರಂಗನಾಥನ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಕ್ಷಮೆ ಯಾಚಿಸಿದ ಸಂಸದ ತೇಜಸ್ವಿ ಸೂರ್ಯ; ಗಂಭೀರ ಉಲ್ಲಂಘನೆ ನಡೆದರೂ ದಾಖಲಾಗದ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...