Homeಮುಖಪುಟಕೇಜ್ರಿವಾಲ್ ಕೈಯಲ್ಲಿ ರಿಮೋಟ್ ಕಂಟ್ರೋಲ್ ಆಗಬೇಡಿ: ಪಂಜಾಬ್ ಸಿಎಂಗೆ ರಾಹುಲ್ ಗಾಂಧಿ ಸಲಹೆ

ಕೇಜ್ರಿವಾಲ್ ಕೈಯಲ್ಲಿ ರಿಮೋಟ್ ಕಂಟ್ರೋಲ್ ಆಗಬೇಡಿ: ಪಂಜಾಬ್ ಸಿಎಂಗೆ ರಾಹುಲ್ ಗಾಂಧಿ ಸಲಹೆ

- Advertisement -
- Advertisement -

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಇದೀಗ ಪಂಜಾಬ್‌ನ ಹೋಶಿಯಾರ್‌ಪುರ ತಲುಪಿದೆ. ಈ ವೇಳೆ ರಾಹುಲ್ ಗಾಂಧಿ, “ಸಿಎಂ ಭಗವಂತ್ ಮಾನ್ ಅವರು, ಆಪ್ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಒತ್ತಡದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ದೆಹಲಿಯಿಂದ ಮಾನ್ ಅವರನ್ನು ರಿಮೋಟ್ ಕಂಟ್ರೋಲ್ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಆಡಲಿತವನ್ನು ಪಂಜಾಬ್‌ನಿಂದ ನಡೆಸಬೇಕು ಮತ್ತು ದೆಹಲಿಯಿಂದ ಅಲ್ಲ. ಪಂಜಾಬ್‌ನ ಸಿಎಂ ಭಗವಂತ್ ಮಾನ್ ಅವರು, ಒತ್ತಡಕ್ಕೆ ಒಳಗಾಗಬಾರದು. ದೆಹಲಿ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಸ್ವತಂತ್ರವಾಗಿ ಕೆಲಸ ಮಾಡಬೇಕು ಮತ್ತು ಯಾರೊಬ್ಬರ ರಿಮೋಟ್ ಕಂಟ್ರೋಲ್ ಆಗಬಾರದು” ಎಂದು ಹೇಳಿದರು.

ಶನಿವಾರ ಪಾದಯಾತ್ರೆ ವೇಳೆ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಆ ಹಿನ್ನೆಲೆಯಲ್ಲಿ ಯಾತ್ರೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಭಾರತ್ ಜೋಡೋ ಯಾತ್ರೆ ಪುನರಾರಂಭಗೊಳ್ಳುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಜಲಂಧರ್‌ನ ದೇವಿ ತಲಾಬ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಾಜ್ವಾ, ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಶಾಸಕ ಪರ್ಗತ್ ಸಿಂಗ್ ಮತ್ತು ಪಕ್ಷದ ಇತರ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಕಳೆದ ವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಶ್ರೀನಗರದಲ್ಲಿ ಜನವರಿ 30 ರಂದು ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ 21 ವಿರೋಧ ಪಕ್ಷಗಳಗಳಿಗೆ ಆಹ್ವಾನಿಸಿದ್ದಾರೆ. ಈ ಕ್ರಮವು ಈ ವ‍ರ್ಷ ದೇಶದಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಹಾಗೂ 2024 ರಲ್ಲಿ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಒಗ್ಗಟ್ಟಿನ ವಿರೋಧವನ್ನು ತೊರುವ ಪ್ರಯತ್ನವೆಂದು ಪರಿಗಣಿಸಲಾಗಿದೆ.

ತೃಣಮೂಲ ಕಾಂಗ್ರೆಸ್, ಜನತಾ ದಳ-ಯುನೈಟೆಡ್, ಶಿವಸೇನೆ-ಯುಬಿಟಿ, ತೆಲುಗು ದೇಶಂ ಪಕ್ಷ, ನ್ಯಾಷನಲ್ ಕಾನ್ಫರೆನ್ಸ್ (ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಇಬ್ಬರನ್ನೂ ಆಹ್ವಾನಿಸಿದ್ದರು), ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ಡಿಎಂಕೆ, ದಿ. CPI, CPI-M, ಜಾರ್ಖಂಡ್ ಮುಕ್ತಿ ಮೋರ್ಚಾ, RJD (ಲಾಲು ಪ್ರಸಾದ್ ಮತ್ತು ತೇಜಸ್ವಿ ಯಾದವ್ ಇಬ್ಬರೂ), RLD, ಹಿಂದೂಸ್ತಾನಿ ಅವಾಮ್ ಮೋರ್ಚಾ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ, MDMK, VCK, IUML, KSM ಮತ್ತು RSP ಪಕ್ಷಗಳಿಗೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...