Homeಕರ್ನಾಟಕಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

ಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

- Advertisement -
- Advertisement -

2018 ರಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿಗೆ ಪಕ್ಷಾಂತರಗೊಂಡ ಶಾಸಕರನ್ನು ವೇಶ್ಯೆಯರಿಗೆ ಹೋಲಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ವಿವಾದ ಹುಟ್ಟುಹಾಕಿದ್ದಾರೆ.

“ಜೀವನಕ್ಕಾಗಿ ವೇಶ್ಯಾವಾಟಿಕೆಗೆ ಪ್ರವೇಶಿಸುವ ಮಹಿಳೆಯನ್ನು ‘ವೇಶ್ಯೆ’ ಎಂದು ಕರೆಯಲಾಗುತ್ತದೆ. ತಮ್ಮನ್ನು ತಾವು ಮಾರಿಕೊಂಡ ಶಾಸಕರನ್ನು ಏನೆಂದು ಕರೆಯುತ್ತೀರಿ? ಬಿಸಿ ಪಾಟಿಲ್ ಪೊಲೀಸ್ ಅಧಿಕಾರಿ ಇದ್ದಾಗ ಯಶವಂತಪುರದಲ್ಲಿ ಚಪ್ಪಲಿ, ಪೊರಕೆ ಸೇವೆ ಮಾಡಿದ್ದು ಯಾಕೆ ಅಂತ ಹೇಳಲಿ. ಬೋರಿಂಗ್ ಇನ್ಸ್ಟಿಟ್ಯೂಟ್ ಅಲ್ಲಿ ಕಾಲಪತ್ಥರ್ ರೌಡಿಗೆ ಯಾವ ಸೇವೆ ಮಾಡಿದ್ದಾರೆ ಎನ್ನುವುದು ಗೊತ್ತಿದೆ” ಎಂದು ಬಿಸಿ ಪಾಟೀಲ್ ವಿರುದ್ಧ ಬಿಕೆ ಹರಿಪ್ರಸಾದ್  ವಾಗ್ಧಾಳಿ ನಡೆಸಿದರು.

ಬಿಜೆಪಿಯಲ್ಲಿ ಸ್ಯಾಂಟ್ರೊ ರವಿ, ಸಿಟಿ ರವಿ, ಪೈಟರ್ ರವಿ, ಪಿಂಪ್ ರವಿಗಳೇ ತುಂಬಿ ತುಳುಕುತ್ತಿದ್ದಾರೆ. ಇವರಿಂದ ಏನು ನಿರೀಕ್ಷೆ ಮಾಡೋದಕ್ಕೆ ಆಗೋದಿಲ್ಲ ಎಂದು ಸಿಟಿ ರವಿಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಸ್ಯಾಂಟ್ರೊ ರವಿಗೂ ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿಕೆ ನೀಡಿದ್ದ ಮುನಿರತ್ನಗೆ ತಿರುಗೇಟು ನೀಡಿದ ಹರಿಪ್ರಸಾದ್, “ಮುನಿರತ್ನ ನನ್ನ ಗರಡಿಯಲ್ಲಿ ಬೆಳೆದವನು, ಅವನು ಹೇಗೆ ಅಂತ ಗೊತ್ತಿದೆ. ಧೈರ್ಯ ಇದ್ದರೆ ಮಾತಾಡಲಿ, ನಾನು ಮಾತಾಡ್ತೀನಿ” ಎಂದರು.

“ಯತ್ನಾಳ್ ಅವರೇ ಖುದ್ದಾಗಿ ಹೇಳಿದ್ದಾರೆ. ಬಿಜೆಪಿ ಸರಕಾರದ ಮಂತ್ರಿಗಳು ಸಪ್ಲೈ ಮಾಡಿ ಮಂತ್ರಿಗಳಾಗಿದ್ದಾರೆ ಎಂದು, ಇನ್ನೊಬ್ಬ ಶಾಸಕರು ಹೇಳ್ತಾರೆ ಇವರು ಪಿಂಪ್ ಕೆಲಸ ಮಾಡಿ ಮಂತ್ರಿ ಆಗಿದ್ದಾರಂತೆ. ಇವರೆಲ್ಲಾ (ವಲಸೆ ಸಚಿವರು) ಮಂತ್ರಿಗಳು ನಮ್ಮ ಸರಕಾರದಲ್ಲಿ ಮಂತ್ರಿ ಆಗೋದಕ್ಕೆ ಏನು ಮಾಡಿದಾರೆ ಎನ್ನುವುದು ಗೊತ್ತಿದೆ. ಆದರೆ ಅದನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ” ಎಂದು ಹರಿಪ್ರಸಾದ್ ಅವರು ವಲಸೆ ಸಚಿವರ ಮೇಲೆ ಕಿಡಿಕಾರಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಹುಮತ ನೀಡದೇ ಅತಂತ್ರ ಫಲಿತಾಂಶ ನೀಡಿದ್ದರು. ಹಾಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಆದರೆ, ಸಮ್ಮಿಶ್ರ ಸರ್ಕಾರವನ್ನು ಕೆಳಗಿಳಿಸಲು ಕೆಲ ಶಾಸಕರು ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ, ಅವರನ್ನು ಏನೆಂದು ಕರೆಯುತ್ತೀರಿ? ಇದೀಗ ಮತ್ತೆ ಚುನಾವಣೆ ಬರುತ್ತಿದೆ. ಈ ವೇಳೆ ಸ್ಥಳೀಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಹೊಸಪೇಟೆಯಲ್ಲಿ ಮುಖಂಡರು ಮನವಿ ಮಾಡಿದರು.

ಹರಿಪ್ರಸಾದ್ ಅವರ ವೇಶ್ಯೆ ಪದ ಬಳಕೆಯು ರಾಜ್ಯರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ತನ್ನ ಮಾತುಗಳನ್ನು ತಿರುಚುತ್ತಿದೆ ಮತ್ತು ಲೈಂಗಿಕ ಕಾರ್ಯಕರ್ತರ ಬಗ್ಗೆ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

“ನಮಗೆ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಅಪಾರ ಗೌರವವಿದೆ. ಅವರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹರಿಪ್ರಸಾದ್ ಹೇಳಿದ್ದಾರೆ.

ಹರಿಪ್ರಸಾದ್‌ಗೆ ತಿರುಗೇಟುವ ನೀಡುವ ಭರದಲ್ಲಿ ಬಿಸಿ ಪಾಟೀಲ್ ಕೂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷ ದ್ರೋಹ ಮಾಡಿದ್ದಕ್ಕೆ ನಾವು ರಾಜೀನಾಮೆ ಕೊಟ್ಟು ಹೊರಗಡೆ ಬಂದೆವು. ಆ ಬಳಿಕ ಬಿಜೆಪಿ ಸೇರಿ, ಜನಾದೇಶದ ಮೇಲೆ ಮರು ಆಯ್ಕೆಯಾಗಿದ್ದೇವೆ. ಆಮೇಲೆ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ.
ಹರಿಪ್ರಸಾದ್ ಯಾವ ಚುನಾವಣೆಯಲ್ಲಿ ಗೆದ್ದಿದ್ದಾರೆ? ನಾವು ಜನರಿಂದ ಆಯ್ಕೆಯಾಗಿದ್ದೇವೆ. ಹರಿಪ್ರಸಾದ್ ಯಾವ ಜನರಿಂದ ಆಯ್ಕೆಯಾಗಿದ್ದಾರೆ? ಅವರು ಹಿಂಬಾಗಿಲಿನಿಂದ ಬಂದು ಇವತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿಂಬದಿಯಿಂದ ಬಂದವರನ್ನ ‘ಪಿಂಪ್‌’ಗಳು ಅಂತ ಹೇಳಬೇಕಾಗತ್ತದೆ. ಆದರೆ ಆ ರೀತಿ ಹೇಳಲು ನಮ್ಮ ನಾಲಿಗೆ ಒಪ್ಪಲ್ಲ. ಏಕೆಂದರೆ ಅವರ ಸಂಸ್ಕೃತಿಯೆರ ಬೇರೆ ನಮ್ಮ ಸಂಸ್ಕೃತಿಯೇ ಬೇರೆ. ಹಾಗಾಗಿ ಇನ್ನಾದ್ರೂ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ಕಾಂಗ್ರೆಸ್ ನವರು ಹತಾಶೆಯಿಂದ ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ” ಎಂದರು.

“ಅವರು ಅಧಿಕಾರಕ್ಕೆ ಬರ್ತಾರೆ ಎಂದು ಕನಸ ಕಂಡಿದ್ದಾರೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ್ರು ಎನ್ನುವ ಹಾಗೆ ಈಗಲೇ ಸಿಎಂ ಗಾಗಿ ತಮ್ಮಲ್ಲೇ ಕಾದಾಡುತ್ತಿದ್ದಾರೆ” ಎಂದರು.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರ ನೀಡಿದ ಸಿಎಂ, “ಅಂತಹ ಕೀಳು, ಮಟ್ಟದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇಷ್ಟೇ ನನ್ನ ಪ್ರತಿಕ್ರಿಯೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...