Homeಕರ್ನಾಟಕಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

ಕಾವೇರಿದ ಚುನಾವಣಾ ಕದನ: ಅವಾಚ್ಯ ಪದಗಳಿಂದ ಪರಸ್ಪರ ನಿಂದಿಸಿಕೊಂಡ ಬಿಜೆಪಿ-ಕಾಂಗ್ರೆಸ್ ನಾಯಕರು

- Advertisement -
- Advertisement -

2018 ರಲ್ಲಿ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿಗೆ ಪಕ್ಷಾಂತರಗೊಂಡ ಶಾಸಕರನ್ನು ವೇಶ್ಯೆಯರಿಗೆ ಹೋಲಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ವಿವಾದ ಹುಟ್ಟುಹಾಕಿದ್ದಾರೆ.

“ಜೀವನಕ್ಕಾಗಿ ವೇಶ್ಯಾವಾಟಿಕೆಗೆ ಪ್ರವೇಶಿಸುವ ಮಹಿಳೆಯನ್ನು ‘ವೇಶ್ಯೆ’ ಎಂದು ಕರೆಯಲಾಗುತ್ತದೆ. ತಮ್ಮನ್ನು ತಾವು ಮಾರಿಕೊಂಡ ಶಾಸಕರನ್ನು ಏನೆಂದು ಕರೆಯುತ್ತೀರಿ? ಬಿಸಿ ಪಾಟಿಲ್ ಪೊಲೀಸ್ ಅಧಿಕಾರಿ ಇದ್ದಾಗ ಯಶವಂತಪುರದಲ್ಲಿ ಚಪ್ಪಲಿ, ಪೊರಕೆ ಸೇವೆ ಮಾಡಿದ್ದು ಯಾಕೆ ಅಂತ ಹೇಳಲಿ. ಬೋರಿಂಗ್ ಇನ್ಸ್ಟಿಟ್ಯೂಟ್ ಅಲ್ಲಿ ಕಾಲಪತ್ಥರ್ ರೌಡಿಗೆ ಯಾವ ಸೇವೆ ಮಾಡಿದ್ದಾರೆ ಎನ್ನುವುದು ಗೊತ್ತಿದೆ” ಎಂದು ಬಿಸಿ ಪಾಟೀಲ್ ವಿರುದ್ಧ ಬಿಕೆ ಹರಿಪ್ರಸಾದ್  ವಾಗ್ಧಾಳಿ ನಡೆಸಿದರು.

ಬಿಜೆಪಿಯಲ್ಲಿ ಸ್ಯಾಂಟ್ರೊ ರವಿ, ಸಿಟಿ ರವಿ, ಪೈಟರ್ ರವಿ, ಪಿಂಪ್ ರವಿಗಳೇ ತುಂಬಿ ತುಳುಕುತ್ತಿದ್ದಾರೆ. ಇವರಿಂದ ಏನು ನಿರೀಕ್ಷೆ ಮಾಡೋದಕ್ಕೆ ಆಗೋದಿಲ್ಲ ಎಂದು ಸಿಟಿ ರವಿಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿಯೊಳಗೆ ಯತ್ನಾಳ್- ನಿರಾಣಿ ಕುಸ್ತಿ: ಸಭ್ಯತೆ ಮೀರಿದ ಟೀಕಾಪ್ರಹಾರ

ಸ್ಯಾಂಟ್ರೊ ರವಿಗೂ ಕಾಂಗ್ರೆಸ್ ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿಕೆ ನೀಡಿದ್ದ ಮುನಿರತ್ನಗೆ ತಿರುಗೇಟು ನೀಡಿದ ಹರಿಪ್ರಸಾದ್, “ಮುನಿರತ್ನ ನನ್ನ ಗರಡಿಯಲ್ಲಿ ಬೆಳೆದವನು, ಅವನು ಹೇಗೆ ಅಂತ ಗೊತ್ತಿದೆ. ಧೈರ್ಯ ಇದ್ದರೆ ಮಾತಾಡಲಿ, ನಾನು ಮಾತಾಡ್ತೀನಿ” ಎಂದರು.

“ಯತ್ನಾಳ್ ಅವರೇ ಖುದ್ದಾಗಿ ಹೇಳಿದ್ದಾರೆ. ಬಿಜೆಪಿ ಸರಕಾರದ ಮಂತ್ರಿಗಳು ಸಪ್ಲೈ ಮಾಡಿ ಮಂತ್ರಿಗಳಾಗಿದ್ದಾರೆ ಎಂದು, ಇನ್ನೊಬ್ಬ ಶಾಸಕರು ಹೇಳ್ತಾರೆ ಇವರು ಪಿಂಪ್ ಕೆಲಸ ಮಾಡಿ ಮಂತ್ರಿ ಆಗಿದ್ದಾರಂತೆ. ಇವರೆಲ್ಲಾ (ವಲಸೆ ಸಚಿವರು) ಮಂತ್ರಿಗಳು ನಮ್ಮ ಸರಕಾರದಲ್ಲಿ ಮಂತ್ರಿ ಆಗೋದಕ್ಕೆ ಏನು ಮಾಡಿದಾರೆ ಎನ್ನುವುದು ಗೊತ್ತಿದೆ. ಆದರೆ ಅದನ್ನು ಹೇಳಿ ನನ್ನ ಬಾಯಿ ಹೊಲಸು ಮಾಡಿಕೊಳ್ಳುವುದಿಲ್ಲ” ಎಂದು ಹರಿಪ್ರಸಾದ್ ಅವರು ವಲಸೆ ಸಚಿವರ ಮೇಲೆ ಕಿಡಿಕಾರಿದ್ದಾರೆ.

“ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಹುಮತ ನೀಡದೇ ಅತಂತ್ರ ಫಲಿತಾಂಶ ನೀಡಿದ್ದರು. ಹಾಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಂದಾಗಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಆದರೆ, ಸಮ್ಮಿಶ್ರ ಸರ್ಕಾರವನ್ನು ಕೆಳಗಿಳಿಸಲು ಕೆಲ ಶಾಸಕರು ತಮ್ಮನ್ನೇ ತಾವು ಮಾರಿಕೊಂಡಿದ್ದಾರೆ, ಅವರನ್ನು ಏನೆಂದು ಕರೆಯುತ್ತೀರಿ? ಇದೀಗ ಮತ್ತೆ ಚುನಾವಣೆ ಬರುತ್ತಿದೆ. ಈ ವೇಳೆ ಸ್ಥಳೀಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಹೊಸಪೇಟೆಯಲ್ಲಿ ಮುಖಂಡರು ಮನವಿ ಮಾಡಿದರು.

ಹರಿಪ್ರಸಾದ್ ಅವರ ವೇಶ್ಯೆ ಪದ ಬಳಕೆಯು ರಾಜ್ಯರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ತನ್ನ ಮಾತುಗಳನ್ನು ತಿರುಚುತ್ತಿದೆ ಮತ್ತು ಲೈಂಗಿಕ ಕಾರ್ಯಕರ್ತರ ಬಗ್ಗೆ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

“ನಮಗೆ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಅಪಾರ ಗೌರವವಿದೆ. ಅವರಿಗೆ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹರಿಪ್ರಸಾದ್ ಹೇಳಿದ್ದಾರೆ.

ಹರಿಪ್ರಸಾದ್‌ಗೆ ತಿರುಗೇಟುವ ನೀಡುವ ಭರದಲ್ಲಿ ಬಿಸಿ ಪಾಟೀಲ್ ಕೂಡ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಕಾಂಗ್ರೆಸ್ ಪಕ್ಷ ದ್ರೋಹ ಮಾಡಿದ್ದಕ್ಕೆ ನಾವು ರಾಜೀನಾಮೆ ಕೊಟ್ಟು ಹೊರಗಡೆ ಬಂದೆವು. ಆ ಬಳಿಕ ಬಿಜೆಪಿ ಸೇರಿ, ಜನಾದೇಶದ ಮೇಲೆ ಮರು ಆಯ್ಕೆಯಾಗಿದ್ದೇವೆ. ಆಮೇಲೆ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ.
ಹರಿಪ್ರಸಾದ್ ಯಾವ ಚುನಾವಣೆಯಲ್ಲಿ ಗೆದ್ದಿದ್ದಾರೆ? ನಾವು ಜನರಿಂದ ಆಯ್ಕೆಯಾಗಿದ್ದೇವೆ. ಹರಿಪ್ರಸಾದ್ ಯಾವ ಜನರಿಂದ ಆಯ್ಕೆಯಾಗಿದ್ದಾರೆ? ಅವರು ಹಿಂಬಾಗಿಲಿನಿಂದ ಬಂದು ಇವತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿಂಬದಿಯಿಂದ ಬಂದವರನ್ನ ‘ಪಿಂಪ್‌’ಗಳು ಅಂತ ಹೇಳಬೇಕಾಗತ್ತದೆ. ಆದರೆ ಆ ರೀತಿ ಹೇಳಲು ನಮ್ಮ ನಾಲಿಗೆ ಒಪ್ಪಲ್ಲ. ಏಕೆಂದರೆ ಅವರ ಸಂಸ್ಕೃತಿಯೆರ ಬೇರೆ ನಮ್ಮ ಸಂಸ್ಕೃತಿಯೇ ಬೇರೆ. ಹಾಗಾಗಿ ಇನ್ನಾದ್ರೂ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ಕಾಂಗ್ರೆಸ್ ನವರು ಹತಾಶೆಯಿಂದ ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ” ಎಂದರು.

“ಅವರು ಅಧಿಕಾರಕ್ಕೆ ಬರ್ತಾರೆ ಎಂದು ಕನಸ ಕಂಡಿದ್ದಾರೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ್ರು ಎನ್ನುವ ಹಾಗೆ ಈಗಲೇ ಸಿಎಂ ಗಾಗಿ ತಮ್ಮಲ್ಲೇ ಕಾದಾಡುತ್ತಿದ್ದಾರೆ” ಎಂದರು.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಕ್ರಿಯೆ ಕೇಳಿದ ಮಾಧ್ಯಮಗಳಿಗೆ ಉತ್ತರ ನೀಡಿದ ಸಿಎಂ, “ಅಂತಹ ಕೀಳು, ಮಟ್ಟದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಇಷ್ಟೇ ನನ್ನ ಪ್ರತಿಕ್ರಿಯೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...