Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...