Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...