Homeಅಂಕಣಗಳುಎರಡು ದುಃಖದ ಸಂಗತಿ ಎದುರಾದವಲ್ಲಾ

ಎರಡು ದುಃಖದ ಸಂಗತಿ ಎದುರಾದವಲ್ಲಾ

- Advertisement -
- Advertisement -

ಈವಾರ ಎರಡು ದುಃಖಕರ ಸಂಗತಿಗಳು ಹೊರಬಿದ್ದಿವೆಯಲ್ಲಾ. ಮೊದಲನೆಯದಾಗಿ ನಮ್ಮ ಸಭ್ಯರಾಜಕಾರಣಿ ಎಸ್.ಎಂ ಕೃಷ್ಣ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ನಿರ್ಧಾರಕ್ಕೆ ಬಿಜೆಪಿಗಳು ಕಿವಿ ಕೇಳದಂತಿರುವುದು ಸಹಜ. ಕೃಷ್ಣ ತಮ್ಮ ರಾಜಕಾರಣದ ಇತಿಹಾಸದಲ್ಲಿ ಎಂದೂ ಅಸಭ್ಯವಾಗಿ ನಡೆದುಕೊಂಡವರಲ್ಲ. ಅಸಂಬದ್ಧ ಮಾತನಾಡಿದವರಲ್ಲಾ. ಯಾರನ್ನೂ ಕಟುವಾಗಿ ಟೀಕಿಸಿದವರಲ್ಲ. ತಮ್ಮ ಕಾರಿನ ಡ್ರೈವರನ್ನು ಕೂಡ ಬಹುವಚನದಲ್ಲಿ ಮಾತನಾಡಿಸಿದ ವ್ಯಕ್ತಿ. ಎಲ್ಲಕ್ಕಿಂತ ಮುಖ್ಯವಾಗಿ ನರಹಂತಕ ವೀರಪ್ಪನ್‌ನನ್ನು, ’ವೀರಪ್ಪನ್‌ರವರೆ’ ಎಂದು ಸಂಭೋಧಿಸಿ “ಕಿಸ್ನ ನಲ್ಲ ಪೆರಿಯವರು” ಎಂಬ ಬಿರುದು ಪಡೆದವರು. ಕೃಷ್ಣರಲ್ಲಿರುವ ಈ ಗುಣಗಳಿಗಾಗಿ ಅವರು ಸುಮ್ಮನಾಗಬಹುದಿತ್ತು. ಅದುಬಿಟ್ಟು, ತಮ್ಮ ನಡವಳಿಕೆ ಭಾಷೆ ಮತ್ತು ಬುದ್ಧಿಯ ಸಮೀಪಕ್ಕೂ ಬಾರದ ಬಿಜೆಪಿ ಸೇರಿದ್ದು ಈ ಶತಮಾನದ ರಾಜಕೀಯ ದ್ರೋಹವಾಗಿ ಕಂಡಿತಂತಲ್ಲಾ. ಯಾರೋ ರಾಹುಲ್‌ಗಾಂಧಿಯವರನ್ನು ಕೇಳಿದಾಗ, ಇದು ಕೃಷ್ಣರ ಸಮಸ್ಯೆ, ಕಾಂಗ್ರೆಸ್ ಮತ್ತು ಬಿಜೆಪಿ ಸಮಸ್ಯೆಯಲ್ಲ; ಅಲ್ಲಿ ಯಾರೂ ಇವರನ್ನು ಕರೆದಿಲ್ಲ ಎಂದುಬಿಟ್ಟಿದ್ದರಲ್ಲಾ. ಆದರೇನು ಕೃಷ್ಣ ಎಲ್ಲವನ್ನು ಬಿಟ್ಟು ಬಿಜೆಪಿಯ ಬಾಗಿಲಿಗೆ ಹೋದರು. ಖಾಲಿಯಿದ್ದ ಒಂದು ಆರಾಮ ಕುರ್ಚಿಯಲ್ಲಿ ಕುಳಿತರು. ಯಾರೂ ಕ್ಯಾರೆ ಅನ್ನಲಿಲ್ಲ. ನಿಧಾನವಾಗಿ ಎದ್ದು ಬರ್ತಿನಿ ಇವುರೆ, ಬಹಳ ಹೊತ್ತು ಕೂರಕ್ಕೆ ವಯಸ್ಸು ಪರ್ಮಿಟ್ ಮಾಡ್ತ ಇಲ್ಲ ಎಂದು ನಿಧಾನವಾಗಿ ಎದ್ದು ಹೊರಟಾಗಲೂ ಯಾವ ಬಿಜೆಪಿಗಳೂ ಕೂಡ ಆಯ್ತು ಸರ್ ಹೋಗಿ ಬನ್ನಿ ಅನ್ನಲಿಲ್ಲವಂತಲ್ಲಾ, ಥೂತ್ತೇರಿ.

*******

ಎರಡನೆ ದುಃಖಪೂರಿತ ಸಂಗತಿ ಯಾವುದೆಂದರೇ ಗೃಹಮಂತ್ರಿ ಆರಗ ಜ್ಞಾನೇಂದ್ರ ಆತ್ಮಹತ್ಯೆಯ ಮಾತನಾಡಿರುವುದು. ಕರ್ನಾಟಕದ ರಾಜಕೀಯದ ಆಗಸದಲ್ಲಿ ಎಂದೆಂದೂ ಮಿನುಗುವ ನಕ್ಷತ್ರವಾಗುಳಿದಿರುವ ಶಾಂತವೇರಿ ಗೋಪಾಲಗೌಡರು ಆರಿಸಿ ಬಂದಿದ್ದ ತೀರ್ಥಹಳ್ಳಿಯನ್ನು ಪ್ರತಿನಿಧಿಸುತ್ತಿರುವ ಜ್ಞಾನೇಂದ್ರ ಅವರು ರಾಷ್ಟ್ರಕವಿ ಕುವೆಂಪು ವಿಚಾರಧಾರೆಗಳ ವಾಹಕನಾಗಿ ಬದುಕಲಾಗದೆ ಬಲವಂತವಾಗಿ ಎಂಬಂತೆ ಗೋಳವಲಕರ, ಹೆಡಗೆವಾರ, ಸಾವರಕರ ಇತ್ಯಾದಿ ಭಯಂಕರ ಹಿಂದೂವಾದಿಗಳ ಹಿಂಬಾಲಕರಾಗಿ, ಅವರ ಸಿದ್ಧಾಂತಗಳ ಪ್ರತಿಪಾದಕರಾಗಿ ಬದುಕಿದವರು. ಸದಾ ಶ್ವೇತವಸ್ತ್ರಧಾರಿಯಾಗಿ ಶುಭ್ರವಾಗಿ ಬದುಕಿದ್ದ ಅರಗರ ಪಕ್ಕ ಸ್ಯಾಂಟ್ರೊ ರವಿ ಅದೇ ಡ್ರೆಸ್ಸಿನಲ್ಲಿ ಬಂದು ನಿಂತಿದ್ದೂ ಅಲ್ಲದೆ, ಅರಗರ ಅರಿವಿಗೂ ಬರದೆ ಜೇಬಿಗೆ ಏನೊ ಇಟ್ಟು ಹೋದದ್ದು ಗಮನಕ್ಕೇ ಬರಲಿಲ್ಲವಂತಲ್ಲಾ. ಈಗ ನೋಡಿದರೆ ಸ್ಯಾಂಟ್ರೊ ರವಿ ಪೊಲೀಸ್ ವರ್ಗಾವಣೆಯಲ್ಲಿ ಪಡೆದ ಕಾಸಿನ ಕವಡೆಯನ್ನು ಅರಗರ ಜೇಬಿಗೆ ಹಾ ಹೋಗಿದ್ದಾನೆಂಬ ಸುದ್ದಿ ಹಬ್ಬಿದೆಯಲ್ಲಾ. ಇಂತಹ ಸುದ್ದಿಗಳ ಶೋಧನೆ ಮತ್ತು ಅನಾವರಣದಲ್ಲಿ ಎತ್ತಿದ ಕೈಯಾದ ಕುಮಾರಣ್ಣನವರು, ಆತ್ಮಹತ್ಯೆ ಬೇಡ ಆತ್ಮಸಾಕ್ಷಿಯಿದ್ದರೆ ಸಾಕು; ಆತ್ಮಹತ್ಯೆಯ ಹೆಸರೆತ್ತುವುದೂ ಅಪರಾಧವೇ, ಹಾಗೆ ರಾಜಕಾರಣಿಗಳು ಆತ್ಮಹತ್ಯೆ ಮಾಡಿಕೊಂಡರೆ ಇಡೀ ದೇಶದಲ್ಲಿ ರಾಜಕಾರಣಿಗಳೇ ಇಲ್ಲದಂತಾಗಿ ದೇಶವೇ ಅರಾಜಕ ಸ್ಥಿತಿಗೆ ಹೋಗುತ್ತದೆ ಎಂದಿಲ್ಲವಲ್ಲಾ, ಥೂತ್ತೇರಿ.

******

ಹಾವೇರಿ ಸಾಹಿತ್ಯ ಸಮ್ಮೇಳನ ಮುಗಿದಿದೆ. ಜೋಶಿಯ ಲೆಕ್ಕಾಚಾರಗಳು ಸಾಂಗವಾಗಿ ನಡೆದಿವೆ. ಈ ನಡುವೆ ಹಾವೇರಿಯ ಸಣ್ಣವೇದಿಕೆಯಿಂದ ದೊಡ್ಡ ಗಂಟಲಲ್ಲಿ ಅಬ್ಬರಿಸಿದ ದೊಡ್ಡರಂಗೇಗೌಡರ ದನಿ ನಾಡಿನ ಮೂಲೆಮೂಲೆಗೆ ತಲುಪಿ ತುಸು ಗೊಂದಲ ಮೂಡಿಸಿದೆಯಂತಲ್ಲಾ. ಕಳೆದ ಶತಮಾನದಲ್ಲಿ ಕುವೆಂಪು ಹೊಸ ತರುಣ ಜನಾಂಗಕ್ಕೆ ಆತ್ಮಶ್ರೀಗಾಗಿ ನಿರಂಕುಶ ಮತಿಗಳಾಗಿ ಎಂದರು. ಆ ಕೂಡಲೇ ಹಲವು ತರುಣರು ದೇವರು ದಿಂಡಿರನ್ನು ಮತ್ತು ಜ್ಯೋತಿಷಿಗಳನ್ನು ಬಿಟ್ಟು ಮಂತ್ರ ಮಾಂಗಲ್ಯದ ಮದುವೆಯಾದರು, ಉರಿಯುವ ಪಂಜುಗಳಾದರು. ಆದರೀಗ ದೊಡ್ಡರಂಗೇಗೌಡರ ದನಿಗೆ ಕಿವಿಯಾದ ಹುಡುಗರು ಯಾವ ರೂಪದ ಕ್ರಾಂತಿ ಮಾಡಬೇಕೆಂದು ಯೋಚಿಸುತ್ತಿದ್ದಾರಂತಲ್ಲಾ. ಏಕೆಂದರೆ ಗೌಡರು ಮಠೋಪಜೀವಿಯಂತಹ ಕವಿ. ಆದಿಚುಂಚನಗಿರಿ ಬೆಟ್ಟದ ಮೇಲೆ ನಿಂತು ಸೂರ್ಯೋದಯ ನೋಡಿದ ಫಲವಾಗಿ “ತೇರಾಏರಿ ಅಂಬರದಾಗ ನೇಸರು ನಗತಾನೆ ಮರಗಿಡ ಕೂಗ್ಯಾವೇ ಹಕ್ಕಿ ಹಾಡ್ಯಾವೇ” ಎಂದು ಬೇಂದ್ರೆ ತೋರಿದ ಬೆಳಗಿನ ಪ್ರತಿಯಾಗಿ ನೇಸರ ತೋರಿದ ಕವಿ. ಆದರೇನು ಶೂದ್ರ ಸಮೂಹದ ಬೆಟ್ಟಸಾಲಲ್ಲಿ ನಿಂತು ಅದ್ಯಾವಾಗ ಬಿಜೆಪಿ ಗುಡಾರಕ್ಕೆ ನೆಗೆದರೊ ಸ್ಥಾನ ಮಾನಗಳು ಹಿಂಬಾಲಿಸಿ ಬಂದವು. ಕೂಡಲೇ ಮೋದಿ ಬಗ್ಗೆ ಎಡೂರಪ್ಪನ ಬಗ್ಗೆಯೂ ಕವನ ಬರೆದು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆದರು. ಮುಂದೆ ಜೋಶಿಗೆ ತೋರುವ ಕೃತಜ್ಞತೆಯ ಫಲವಾಗಿ ಯಾವ ಕವನ ಉದ್ಭವವಾಗುತ್ತದೊ ಎಂಬ ಆತಂಕದ ನಡುವೆ ಇತ್ತ ಚೆಡ್ಡಿಗಳು, ಅತ್ತ ಚುಂಚನಗಿರಿ ಪ್ರಾಂತ್ಯದ ಹುಡುಗರು ಗೌಡರ ಕ್ರಾಂತಿ ಮಾತಿನಿಂದ ಗೊಂದಲಗೊಂಡಿದ್ದಾರಂತಲ್ಲಾ, ಥೂತ್ತೇರಿ.

*****

ಈಚೆಗೆ ಕೆಲವು ಮಠಾಧೀಶರು ಸಂಘಟಿತರಾಗಿ ಸರಕಾರಕ್ಕೆ ಸಲಹೆ ಕೊಡುವುದು ಸಾಮಾನ್ಯವಾಗಿದೆಯಂತಲ್ಲಾ. ಈಗವರ ಕಣ್ಣುಬಿದ್ದಿರುವುದು ಶಾಲಾ ಮಕ್ಕಳ ಆಹಾರದ ಬಗ್ಗೆ. ಸಾಮಾನ್ಯವಾಗಿ ಮಠಾಧೀಶರು, ಧರ್ಮವಂತರು, ನೀತಿವಂತರು, ಸತ್ಯವಂತರು. ತಾವು ಪ್ರತಿನಿಧಿಸುವ ಜಾತಿಯ ತಲೆಯ ಮೇಲೂ ಕುಳಿತವರು. ಇಂತಹ ಸ್ಥಾನದಲ್ಲಿರುವವರಿಗೆ ಸಾಮಾನ್ಯವಾಗಿ ಯಾವ ಶ್ರಮವೂ ಇರುವುದಿಲ್ಲ. ವಿಕಲಚೇತನ ಮಗುವಿಗೆ ತಾಯಿ ತಾನೇ ಆಹಾರ ನೀಡಿ ಸಾಕಿ ಸಲಹುವಂತೆ ಜನಾಂಗ ಈ ಜಗದ್ಗುರುಗಳನ್ನ ಸಾಕುತ್ತಿದೆ. ಹೀಗೆ ಸಾಕಿಸಿಕೊಂಡವರೆಲ್ಲಾ ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಮಾತನಾಡುತ್ತಿದ್ದಾರೆ. ಗುರುಗಳ ಭೋಜನದ ಬಗ್ಗೆ ’ಗುರು ಶಿಷ್ಯರು’ ಎಂಬ ಚಿತ್ರದ ತುಣುಕು ಹೇಳಿದರೆ ಅಪ್ರಸ್ತುತವಾಗಲಾರದು. ಉಂಡಾಡಿ ಗುರುವೊಬ್ಬರು ಗುರುವರ್ಯರ ಮನೆಗೆ ಬರುತ್ತಾರೆ. ಆಗ ಆಚಾರ್ಯರು ಅವರ ಕಾರ್ಯಕ್ರಮ ಕೇಳುತ್ತಾರೆ. ಆಗ ಅತಿಥಿಗಳು ಮುಂಜಾನೆ ಸ್ನಾನ, ಸಂಧ್ಯಾವಂದನೆ ಮತ್ತೆ ಉಪಾಹಾರ ಮಧ್ಯಾಹ್ನ ಭೋಜನ, ಶಯನ ನಂತರ ವಾಯುವಿಹಾರ, ರಾತ್ರಿ ಭೋಜನ ಮತ್ತು ಒಂದು ತಂಬಿಗೆ ಕ್ಷೀರ ಇದೇ ನನ್ನ ದಿನಚರಿ ಎನ್ನುತ್ತಾನೆ. ಹೀಗೆ ಬದುಕಿರುವ ನಮ್ಮ ಕೆಲವು ಜಗತ್ ಗುರುಗಳು ಮಕ್ಕಳ ಸಾತ್ವಿಕ ಆಹಾರದ ಬಗ್ಗೆ ಎಗ್ಗಿಲ್ಲದೆ ಸಲಹೆ ಕೊಡತೊಡಗಿದ್ದಾರೆ. ಇಂತಹವರ ಅವಗಾಹನೆಗೆ ತರುವ ವಿಷಯ ಯಾವುದೆಂದರೆ ಶೃಂಗೇರಿ, ಚುಂಚನಗಿರಿ, ಸಿದ್ಧಗಂಗಾ ಮಠ ಮತ್ತು ಇನ್ನಿತರ ಪ್ರಗತಿಪರ ಚಿಂತಕರನ್ನ ಪಡೆದಿರುವ ಮಠಗಳು ಎಂದೂ ಮಕ್ಕಳ ಆಹಾರ ಪದ್ಧತಿ ಬಗ್ಗೆ ಮಾತನಾಡಿಲ್ಲ. ಆಹಾರ ಅವರವರ ಜನ್ಮಸಿದ್ಧ ಹಕ್ಕು. ಆದ್ದರಿಂದ ತಮಗೆ ಬಿಟ್ಟಿ ಸಿಗುವ ದ್ರಾಕ್ಷಿ, ಉತ್ತುತ್ತೆ, ಗೋಡಂಬಿ ತಿಂದುಕೊಂಡು ಟಿವಿ ನೋಡುತ್ತ ಕಾಲ ಹಾಕಲು ಸಮಸ್ಯೆ ಏನು ಎಂದು ಕೇಳುವಂತೆ ಮಾತನಾಡುತ್ತಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ನಿಜಕ್ಕೂ ಇಂತದ್ದೊಂದು ಪಾರ್ಟಿ ಬೇಕಿತ್ತು ಸಾರ್..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...