Homeಕರ್ನಾಟಕ‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

- Advertisement -
- Advertisement -

ರಾಜ್ಯದ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಎಲ್ಲಾ ಸರ್ಕಾರಿ ಗುತ್ತಿಗೆಗಳಿಗೆ 40% ಲಂಚವನ್ನು ಕೇಳುತ್ತಾರೆ ಎಂದು ಆರೋಪಿಸಿದ ಸುಮಾರು ತಿಂಗಳ ನಂತರ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ)ವು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ 15 ಶಾಸಕರು ಮತ್ತು ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ದಾಖಲೆಗಳು ತಮ್ಮ ಬಳಿ ಇದೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ಖ್ಯಾತ ಇಂಗ್ಲಿಷ್ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸದಿದ್ದರೆ, ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಚ ನೀಡಲಾಗುತ್ತಿದೆ ಎಂಬುವುದನ್ನು ನಿರೂಪಿಸಲು ನಮ್ಮ ಬಳಿ ದಾಖಲೆಗಳಿವೆ. ಆದರೆ ಸಂತೋಷ್ ಪಾಟೀಲ್ ನಿಧನದ ನಂತರ ಭ್ರಷ್ಟಾಚಾರದ ದಾಖಲೆಗಳನ್ನು ಬಹಿರಂಗಪಡಿಸಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ಈ ವಿವಾದದ ಬಿಂದುವಾಗಿದ್ದ ಸಚಿವರನ್ನೂ ಬಂಧಿಸಿರಲಿಲ್ಲ. ಇದು ಏನು ತೋರಿಸುತ್ತದೆ ಎಂದು ಮಂಜುನಾಥ್ ಪ್ರಶ್ನಿಸಿದ್ದಾರೆ.

ಬಾಕಿ ಇರುವ ಬಿಲ್‌ಗಳನ್ನು ಕ್ಲಿಯರ್ ಮಾಡಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಗುತ್ತಿಗೆದಾದ ಸಂತೋಷ್ ಪಾಟೀಲ್ ಅವರು 2022ರ ಏಪ್ರಿಲ್‌ನಲ್ಲಿ ಉಡುಪಿಯ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮಂಜುನಾಥ್ ಅವರು ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಅನ್ನು ಪತ್ರಿಕಾಗೋಷ್ಠಿಯಲ್ಲಿ ಪ್ಲೇ ಮಾಡಿದ್ದರು. ಈ ಸಂಭಾಷಣೆಯಲ್ಲಿ, ಮಂಜುನಾಥ್ ಅವರ ಧ್ವನಿಯು ಕೇಳಿಸುತ್ತದೆ,“(ಗುತ್ತಿಗೆ ಕಾಮಗಾರಿ) ಬಿಲ್ ಮಾಡಬೇಡಿ ಎಂದು ನೀವು ಹೇಗೆ ಹೇಳುತ್ತೀರಿ? ಅದು ತಪ್ಪಲ್ಲವೆ.(ಉಳಿದ ಲಂಚದ ಮೊತ್ತ) ನಾನು ನಿಮಗೆ ನೀಡುತ್ತೇನೆ… 5 ರಿಂದ 6 ಕೋಟಿ ರೂ. ಬಾಕಿ ಇವೆ. ನಾನು ಹೇಗೆ ಜೀವನ ನಡೆಸುವುದು?” ಎಂದು ಕೇಳಿದ್ದರು.

“ಶಾಸಕ ಲಂಚ ಕೇಳಿದ್ದಕ್ಕೆ ನನ್ನ ಬಳಿ ಆಡಿಯೋ ಕ್ಲಿಪ್‌ಗಳು, ವಾಟ್ಸ್‌ಆ್ಯಪ್ ಚಾಟ್‌ಗಳು ಮತ್ತು ಇತರ ದಾಖಲೆಗಳಿವೆ. ಹಾಗಾಗಿ ಇದನ್ನು ಮಾಧ್ಯಮಗಳ ಮುಂದೆ ಇಡಲು ಬಯಸಿದ್ದೇನೆ. ಇತರ ಗುತ್ತಿಗೆದಾರರಿಗೆ ಮಾದರಿಯಾಗಲು ಬೇಕಾಗಿ ನಾನು ಮುಂದೆ ನಿಂತಿದ್ದೇನೆ. 2019 ರಿಂದ ಹಿರಿಯ ಶಾಸಕರೊಬ್ಬರಿಗೆ ನಾನು ಹಣ ಕೊಡಬೇಕಾಗಿತ್ತು” ಎಂದು ಮಂಜುನಾಥ್ ತಿಳಿಸಿದ್ದಾರೆ.

“2019 ರಲ್ಲಿ ನಾನು PWD ಕಚೇರಿಯನ್ನು ನಿರ್ಮಿಸಿದೆ. ಆದರೆ ಅದರ ಬಿಲ್ ಇನ್ನೂ ಕ್ಲಿಯರ್ ಆಗಿಲ್ಲ. ನಾನು ಚಿತ್ರದುರ್ಗದಲ್ಲಿ ವಿಭಾಗ ಕಚೇರಿಯನ್ನು ನಿರ್ಮಿಸಿದ್ದೇನೆ, ಅದಕ್ಕೂ 5% ಕ್ಕಿಂತ ಹೆಚ್ಚು ಲಂಚ ನೀಡಬೇಕಾಗಿತ್ತು. ಮೊದಲ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ, ನಾನು 250 ಹಾಸಿಗೆಗಳ ಆಸ್ಪತ್ರೆಗಾಗಿ ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ (MGS) ವ್ಯವಸ್ಥೆಯನ್ನು ನಿರ್ಮಿಸಿದೆ. ಇದು 12 ಕೋಟಿ ರೂಪಾಯಿ ಮೌಲ್ಯದ ಯೋಜನೆಯಾಗಿದ್ದು, ಇದಕ್ಕಾಗಿ ನಾನು 12.5 ಲಕ್ಷ ರೂಪಾಯಿ ಲಂಚ ನೀಡಬೇಕಾಯಿತು” ಎಂದು ಅವರು ಹೇಳಿದ್ದಾರೆ.

ಸುಮಾರು 25,000 ಕೋಟಿ ಮೌಲ್ಯದ ಬಿಲ್‌ಗಳು ಸರ್ಕಾರದ ಬಳಿ ಬಾಕಿ ಇವೆ ಎಂದು ಸಂಘದ ಸದಸ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...