Homeಕರ್ನಾಟಕಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್...

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್ ಸೇನ್

- Advertisement -
- Advertisement -

ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ಜನಗಳು ದಿವಾಳಿ ಆಗುತ್ತಿದ್ದು, ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗವೂ ಇದಕ್ಕೆ ಬೆಂಬಲ ನೀಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್’ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ತಮನ್ ಸೇನ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸಿಐಟಿಯು ಅಖಿಲ ಭಾರತ ಸಮ್ಮೇಳನ ಬೆಂಗಳೂರಿನ ಅರಮನೆ ಮೈದಾನದ, ‘ರಂಜನ ನಿರುಲಾ ಮತ್ತು ರಘುನಾಥ್ ಸಿಂಗ್’ ವೇದಿಕೆಯಲ್ಲಿ ನಡೆಯುತ್ತಿದ್ದು, ಸಮ್ಮೇಳನದ ಮೊದಲ ದಿನದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನೆರವೇರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ತಪನ್ ಸೇನ್, “ದೇಶದ ಆಳುವ ಸರಕಾರಗಳು ನವ ಉದಾರವಾದಿ ನೀತಿಗಳ ಏಜೆಂಟರಂತೆ ವರ್ತಿಸುತ್ತಾ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಇದರಿಂದಾಗಿ ಜನರು ದಿವಾಳಿಯಾಗುತ್ತಿದ್ದಾರೆ. ಸರ್ಕಾರದ ಈ ನಡೆಗೆ ದೇಶದ ಮುಖ್ಯ ವಾಹಿನಿ ಮಾಧ್ಯಮಗಳ ದೊಡ್ಡ ವಿಭಾಗ ಕೂಡಾ ಬೆಂಬಲ ನೀಡುತ್ತಿದೆ” ಎಂದು ಅವರು ಹೇಳಿದರು.

ಸರ್ವಾಧಿಕಾರಿ ರೀತಿಯಲ್ಲಿ ನಡೆದುಕೊಳ್ಳುತ್ತಾ, ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವ ಸರಕಾರದ ವಿಷಕಾರಿ ನೀತಿಗಳ ಪರಿಣಾಮಗಳ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ ಎಂದು ಅವರು ಹೇಳಿದರು.

“ಆಳುವ ಸರ್ಕಾರವು ಜನರ ಒಗ್ಗಟ್ಟನ್ನು ಮುರಿಯುವ ವಿಭಜನಕಾರಿ ನೀತಿಗಳನ್ನು ಹೇರುತ್ತಾ ಸಮಾಜದ ಸಾಮಾಜಿಕ ಸಾಮರಸ್ಯವನ್ನು ಹಾಳುಗೆಡಹುತ್ತಿದೆ. ದೇಶದ ಹಿತಾಸಕ್ತಿಗೆ ಮತ್ತು ದುಡಿಯುವ ವರ್ಗದ ಹಿತಗಳಿಗೆ ವಿರುದ್ಧವಾಗಿ ಇಂತಹ ಕ್ರಿಮಿನಲ್ ದಾಳಿಗಳನ್ನು ನಡೆಸುತ್ತಿರುವ ಸರಕಾರವನ್ನು ರೈತ-ಕಾರ್ಮಿಕ ಐಕ್ಯ ಚಳುವಳಿಯ ಮೂಲಕ ಅಧಿಕಾರದಿಂದ ಕಿತ್ತೆಸೆಯಲಾಗುವುದು” ಎಂದು ತಿಳಿಸಿದ ತಪನ್ ಸೇನ್ ಪ್ರತಿಜ್ಞೆ ಮಾಡಿದರು.

ಸರ್ಕಾರ ಕಾರ್ಪೋರೇಟ್ ಕಂಪನಿ ಪರ ಕೆಲಸ ಮಾಡುತ್ತಿದೆ, ಮಾಧ್ಯಮ ಬೆಂಬಲಿಸುತ್ತಿದೆ: ಸಿಐಟಿಯು

“ಈ ನಿಟ್ಟಿನಲ್ಲಿ ಕಾರ್ಮಿಕ ಹೋರಾಟಗಳನ್ನು ಬಲಪಡಿಸುವ ಕುರಿತು ಸಿಐಟಿಯು ಸಂಘಟನೆಯ 17 ನೇ ಅಖಿಲ ಭಾರತ ಸಮ್ಮೇಳನವು ಗಂಭೀರವಾಗಿ ಚರ್ಚಿಸಲಿದೆ. ದೇಶದ ಹತ್ತು ಪ್ರಮುಖ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಒಂದುಗೂಡಿ ಕಾರ್ಮಿಕರ ಹಕ್ಕುಗಳು, ರೈತರ ಹಕ್ಕುಗಳು ಮಾತ್ರವಲ್ಲ. ದೇಶದ ರಕ್ಷಣೆಗಾಗಿ ದೇಶವಿರೋಧಿ ಕುತಂತ್ರಗಳ ವಿರುದ್ಧ ಹೋರಾಟ ರೂಪಿಸಲಿವೆ” ಎಂದು ಅವರು ಹೇಳಿದರು.

“ಇತ್ತೀಚಿನ ಎರಡು ದಿನಗಳ ದೇಶವ್ಯಾಪಿ ಯಶಸ್ವಿ ಮುಷ್ಕರ ಈ ಹೋರಾಟದ ಭಾಗವಾಗಿದೆ. ನಾಲ್ಕು ವರ್ಷಗಳ ಹೋರಾಟದ ಅನುಭವವು, ವಿದ್ಯುತ್, ಕಲ್ಲಿದ್ದಲು ಸೇರಿದಂತೆ ಹಲವು ಕ್ಷೇತ್ರದಲ್ಲಿ ಸರಕಾರದ ಧೋರಣೆಗಳನ್ನು ಹಿಮ್ಮೆಟ್ಟಿಸಲು ಸಾಧ್ಯ ಎಂದು ತೋರಿಸಿಕೊಟ್ಟಿದೆ. ನವ ಉದಾರೀಕರಣ ನೀತಿಗಳ ಸವಾಲು ಕೇವಲ ಕಾರ್ಮಿಕ ವರ್ಗಕ್ಕೆ ಮಾತ್ರ ಸೀಮಿತವಲ್ಲ. ಇದು ಇಡೀ ಮನುಕುಲದ ಮುಂದಿನ ಸವಾಲಾಗಿದ್ದು, ಪ್ರಜಾಸತ್ತಾತ್ಮಕ ಸಮಾಜಕ್ಕೆ ಮಾರಕ” ಎಂದು ಅವರು ಪ್ರತಿಪಾದಿಸಿದರು.

“ಕೆಲವು ಸ್ವದೇಶಿ ಮತ್ತು ವಿದೇಶಿ ಕಾರ್ಪೋರೇಟ್ ಹಿತರಕ್ಷಣೆಗಾಗಿ, ವಿಶಾಲ ಜನ ಸಮುದಾಯಗಳ ಜನರ ಹಿತ ಬಲಿ ಕೊಡಲಾಗುತ್ತಿದೆ. ದೇಶದ ಕಾರ್ಮಿಕ ಚಳುವಳಿಯ ಸರಕಾರವು ದೇಶವನ್ನು ಮಾರಲು ಅವಕಾಶ ನೀಡಲಾಗದು” ಎಂದು ತಪನ್ ಸೇನ್ ಹೇಳಿದರು.

ಉದ್ಘಾಟನಾ ಸಮಾರಂಭದ ಸಭೆಯಲ್ಲಿ ಮಾತನಾಡಿದ ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಡಾ. ಕೆ. ಹೇಮಲತಾ,“ಭಾರತದಲ್ಲಿ ಹೆಚ್ಚುತ್ತಿರುವ ಅಸಮಾನತೆ, ಸಂಪತ್ತಿನ ಕೇಂದ್ರೀಕರಣ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ವರ್ಗದ ಐಕ್ಯ ಹೋರಾಟವನ್ನು ಬಲಗೊಳಿಸಲಾಗುವುದು” ಎಂದು ಹೇಳಿದರು.

ಕೇಂದ್ರ ಸರ್ಕಾರ ಅರ್ಥ ವ್ಯವಸ್ಥೆಯನ್ನು ಹಾಳು ಮಾಡುತ್ತಿವೆ: ಐಎನ್‌ಟಿಯುಸಿ

ಐಎನ್‌ಟಿಯುಸಿ ಮುಖಂಡ ಚಂದ್ರಶೇಖರನ್ ಮಾತನಾಡಿ, “ಕೇಂದ್ರ ಸರ್ಕಾರ ದೇಶದ ಅರ್ಥ ವ್ಯವಸ್ಥೆಗೆ ಭಾರಿ ಹಾನಿಯುಂಟು ಮಾಡಿದ್ದು, ಪ್ರತಿಯೊಂದು ಸಮುದಾಯವನ್ನು ವಿಭಜಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಮಾಡಿದ ಯೋಜನೆಗಳನ್ನು ಸ್ಥಗಿತಗೊಳಿಸಿದೆ” ಎಂದು ಹೇಳಿದರು.

ಜಾಗತೀಕರಣ ಮತ್ತು ಖಾಸಗೀಕರಣ ನೀತಿಗಳಿಂದ ಕಾರ್ಮಿಕ ವರ್ಗ ಇಂದು ಅತ್ಯಂತ ಹೀನಾಯ ಸ್ಥಿತಿಯಲ್ಲಿದೆ. ದೇಶವನ್ನು ಕೋಮುವಾದ ಆವರಿಸಿದೆ. ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ ಇದ್ದ 26 ಕಾನೂನುಗಳನ್ನು ಬದಲಾವಣೆ ಮಾಡಿ ನಾಲ್ಕು ನೀತಿ ಸಂಹಿತೆಗಳನ್ನಾಗಿ ಮಾಡಲಾಗಿದೆ. ಇದರಿಂದ ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ದೇಶವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಟೀಕಿಸಿದರು.

ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ: ಎಐಟಿಯುಸಿ 

ಎಐಟಿಯುಸಿಯ ಅಮರ್ಜಿತ್ ಕೌರ್ ಮಾತನಾಡಿ, ದೇಶದಲ್ಲಿ ಇಂದಿನ ಪರಿಸ್ಥಿತಿ ತುಂಬಾ ವಿಷಮವಾಗಿದ್ದು, ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ದಿನಗೂಲಿ ನೌಕರರು ಉದ್ಯೋಗ ಸಿಗದೆ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ನಿರುದ್ಯೋಗದ ಪ್ರಮಾಣ ದಿನೇದಿನೇ ಏರಿಕೆ ಕಂಡಿದೆ. ಹಾಗಿದ್ದರೂ ಕೇಂದ್ರ ಸರ್ಕಾರ ಖಾಸಗೀಕರಣದ ಹಾದಿಯನ್ನು ಕೈಬಿಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...