Homeಮುಖಪುಟಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

ಆದಿತ್ಯನಾಥ್ ವಿರುದ್ಧ ಅಂತಾರಾಷ್ಟ್ರೀಯ ವಕೀಲರಿಂದ ಕ್ರಿಮಿನಲ್ ದೂರು ದಾಖಲು

- Advertisement -
- Advertisement -

2019ರ ಡಿಸೆಂಬರ್‌‌ನಿಂದ 2020ರ ಜನವರಿ ನಡುವೆ ಉತ್ತರ ಪ್ರದೇಶ ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗಳನ್ನು ಹತ್ತಿಕ್ಕಿ, ಮಾನವೀಯತೆಯ ವಿರುದ್ಧ ಅಪರಾಧ ಎಸಗಿರುವ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ ಸ್ವಿಟ್ಜರ್ಲೆಂಡ್‌ನಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಜನವರಿ 16 ಮತ್ತು 20 ರ ನಡುವೆ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಲು ಸಿಎಂ ಯೋಗಿ ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸ್ವಿಸ್ ಫೆಡರಲ್ ಪ್ರಾಸಿಕ್ಯೂಟರ್ ಕಚೇರಿಗೆ ಜನವರಿ 17ರ ಮಂಗಳವಾರದಂದು ‘ಗುರ್ನಿಕಾ 37 ಚೇಂಬರ್ಸ್’ ಮೂಲಕ ದೂರು ಸಲ್ಲಿಸಲಾಗಿದೆ. ‘ಗುರ್ನಿಕಾ 37 ಚೇಂಬರ್ಸ್’ ಎಂಬುವುದು ಅಂತರಾಷ್ಟ್ರೀಯ ಕ್ರಿಮಿನಲ್ ಮತ್ತು ಮಾನವ ಹಕ್ಕುಗಳ ವಕೀಲರ ವಿಶೇಷ ಗುಂಪಾಗಿದೆ. ಸ್ವಿಸ್ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 264 ರಲ್ಲಿ ಒದಗಿಸಿದಂತೆ ಸಾರ್ವತ್ರಿಕ ನ್ಯಾಯವ್ಯಾಪ್ತಿಯ ತತ್ವದ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರ್ಟಿಕಲ್ 264 ‘ಜನಾಂಗೀಯ ಹತ್ಯೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ’ಗಳ ಕುರಿತು ಮಾತನಾಡುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ರಿಮಿನಲ್ ವರದಿಯ ವಿಷಯಗಳು ಮತ್ತು ಬಲಿಪಶುಗಳು, ದೂರುದಾರರು ಮತ್ತು ಅರ್ಜಿದಾರರ ವಿವರಗಳನ್ನು ಅವರ ಜೀವ ಸುರಕ್ಷತೆಗಾಗಿ ಗೌಪ್ಯವಾಗಿಡಲಾಗಿದೆ ಎಂದು ಗುರ್ನಿಕಾ 37 ಗ್ರೂಪ್‌ನ ಸಂಸ್ಥಾಪಕ ಹಾಗೂ G37 ಚೇಂಬರ್ಸ್‌ನ ಜಂಟಿ ಮುಖ್ಯಸ್ಥರಾಗಿರುವ ಟೋಬಿ ಕ್ಯಾಡ್‌ಮ್ಯಾನ್ ಅವರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್‌ನಿಂದ ಮತ್ತು 2020ರ ಜನವರಿಯ ನಡುವೆ ನಾಗರಿಕರನ್ನು ಸುಳ್ಳಿನ ಮೂಲಕ ಸೆರೆವಾಸ, ಚಿತ್ರಹಿಂಸೆ ಮತ್ತು ಹತ್ಯೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಕ್ರಿಮಿನಲ್ ವರದಿಯಲ್ಲಿ ಸೂಚಿಸಿದಂತೆ, ಈ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ. ಏಕೆಂದರೆ ಅವು ನಾಗರಿಕರ ವಿರುದ್ಧ ವ್ಯಾಪಕ ಅಥವಾ ವ್ಯವಸ್ಥಿತ ದಾಳಿಯ ಭಾಗವಾಗಿ ನಡೆದಿದ್ದು, ಅದರಲ್ಲೂ ಹೆಚ್ಚಾಗಿ ದೇಶದ ಮುಸ್ಲಿಂ ಜನಸಂಖ್ಯೆ ವಿರುದ್ಧ ಇದು ನಡೆದಿದೆ ಎಂದು ಆರೋಪಿಸಲಾಗಿದೆ” ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿಕೆ ತಿಳಿಸಿದೆ.

ಯುಪಿ ಪೊಲೀಸರಿಗೆ ನೀಡಿದ ಆದೇಶದ ಜವಾಬ್ದಾರಿ ಮುಖ್ಯಮಂತ್ರಿ ಆದಿತ್ಯನಾಥ್‌‌ ಸೇರಿದಂತೆ ಯುಪಿ ಸರ್ಕಾರದ ಹಿರಿಯ ಸದಸ್ಯರಾಗಿದ್ದು, ಇದಕ್ಕೆ ಸಾಕಷ್ಟು ಆಧಾರ ಇದೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ. “ಪೊಲೀಸ್ ಹಿಂಸಾಚಾರದ ಉಲ್ಬಣವು ಡಿಸೆಂಬರ್ 19, 2019 ರಂದು ಮುಖ್ಯಮಂತ್ರಿ ನೀಡಿದ ಭಾಷಣದ ವಹಿಸಿದ ಪಾತ್ರ ಸ್ಪಷ್ಟವಾಗಿ ಕಂಡುಬರುತ್ತದೆ. ಅದರಲ್ಲಿ ಅವರು ಪ್ರತಿಭಟನಾಕಾರರ ವಿರುದ್ಧ ‘ಸೇಡು ತೀರಿಸಿಕೊಳ್ಳಲು’ ಪೊಲೀಸರಿಗೆ ಕರೆ ನೀಡಿದರು. ಭಾರತೀಯ ರಾಜ್ಯದ ಅಧಿಕಾರಿಯಾಗಿದ್ದರೂ ಮುಖ್ಯಮಂತ್ರಿ ಈ ಅಪರಾಧಗಳಿಗೆ ರಾಜತಾಂತ್ರಿಕ ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ” ಹೇಳಿಕೆ ತಿಳಿಸಿದೆ.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸಿದ ನಂತರ, ಅನೇಕ ವ್ಯಕ್ತಿಗಳು, ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಬೀದಿಗಿಳಿದು ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದರು. ಅವರಲ್ಲಿ ಹಲವರನ್ನು ಪೊಲೀಸರು ಬಂಧಿಸಿ ದಾಳಿ ನಡೆಸಿದ್ದಾರೆ ಎಂದು ಗುರ್ನಿಕಾ 37 ಚೇಂಬರ್ಸ್ ಹೇಳಿದೆ.

“ಯುಪಿ ಪೊಲೀಸರು 22 ಪ್ರತಿಭಟನಾಕಾರರನ್ನು ಕೊಂದಿದ್ದಾರೆ ಎಂದು ವರದಿಯಾಗಿದೆ. ಕನಿಷ್ಠ 117 ಮಂದಿಗೆ ಚಿತ್ರಹಿಂಸೆ ನೀಡಲಾಯಿತು ಮತ್ತು 307 ಮಂದಿಯನ್ನು ನಿರಂಕುಶವಾಗಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಆದಿತ್ಯನಾಥ್ ಅವರು ವಿಫಲರಾಗಿದ್ದಾರೆ” ಎಂದು ಕ್ರಿಮಿನಲ್ ದೂರಿನಲ್ಲಿ ಹೇಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...