Homeಮುಖಪುಟಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಪತಕರ್ತರಿಗೆ ವಿನಾಯಿತಿ ಇಲ್ಲ: ಸಿಬಿಐ ಕೋರ್ಟ್‌

- Advertisement -
- Advertisement -

ದೆಹಲಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು, ಬುಧವಾರ ಸಂಸ್ಥೆಯ “ಮುಚ್ಚಳಿಕೆಯ ವರದಿಯನ್ನು” ತಿರಸ್ಕರಿಸಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದರಲ್ಲಿ ಭಾರತದಲ್ಲಿ ಯಾವುದೇ ಶಾಸನಬದ್ಧ ವಿನಾಯಿತಿ ಇಲ್ಲ ಎಂದು ಹೇಳಿದೆ.

“ಮುಚ್ಚಳಿಕೆಯ ವರದಿ”ಯನ್ನು ತಿರಸ್ಕರಿಸಿದ ಸಿಬಿಐ ನ್ಯಾಯಾಲಯವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆಗೆ ನಿರ್ದೇಶಿಸಿದೆ.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಯಾವುದೇ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಸಂಬಂಧಿತ ಪತ್ರಕರ್ತರ ಗಮನಕ್ಕೆ ತರಬಹುದು. ಆ ಬಗ್ಗೆ ಪತ್ರಕರ್ತರು ತಮ್ಮ ಸುದ್ದಿ ಮೂಲಗಳನ್ನು ಬಹಿರಂಗಪಡಿಸುವುದು ತನಿಖಾ ಪ್ರಕ್ರಿಯೆಗಳಿಗೆ ಅತ್ಯಗತ್ಯ ಮತ್ತು ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ತನಿಖಾ ಸಂಸ್ಥೆಯು ಭಾರತೀಯ ದಂಡ ಸಂಹಿತೆ (IPC) ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (CrPC) ಯ ವಿಭಾಗಗಳ ಅಡಿಯಲ್ಲಿ ಬರುತ್ತದೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಯಲ್ಲಿ ಕಡ್ಡಾಯವಾಗಿ ಸೇರಿಕೊಳ್ಳಬೇಕೆಂದು ತನಿಖಾ ಸಂಸ್ಥೆಯು ಅಭಿಪ್ರಾಯಪಟ್ಟರೆ ಅಂತಹ ಸಾರ್ವಜನಿಕ ವ್ಯಕ್ತಿಗಳು ಗೌಪ್ಯವಾಗಿರುತ್ತಾರೆ. ಸಾರ್ವಜನಿಕ ವ್ಯಕ್ತಿಗಳು ತನಿಖೆಗೆ ಸೇರಲು ಕಾನೂನುಬದ್ಧ ಕರ್ತವ್ಯದಲ್ಲಿರುತ್ತಾರೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (CMM) ಅಂಜನಿ ಮಹಾಜನ್ ಅವರು, ದಾಖಲೆಗಳ ನಕಲಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅವಲೋಕನ ಮಾಡಿ, ಸಿಬಿಐ ಸಲ್ಲಿಸಿದ “ಮುಚ್ಚುಳಿಕೆ ವರದಿ”ಯನ್ನು ತಿರಸ್ಕರಿಸಿದರು.

ಆಪಾದಿತ ನಕಲಿ ದಾಖಲೆಗಳನ್ನು ಪ್ರಕಟಿಸಿದ ಮತ್ತು ಪ್ರಸಾರ ಮಾಡಿದ ಪತ್ರಕರ್ತರು ತಮ್ಮ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಹೇಳಿದೆ.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಪಾದಿತ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಪತ್ರಿಕೆಯೊಂದು ಪ್ರಕಟಿಸಿತು. ಬಳಿಕ ಕೆಲವು ಚಾನೆಲ್‌ಗಳು ಫೆಬ್ರವರಿ 9, 2009 ರಂದು ನಡೆದ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಂದು ದಿನ ಮೊದಲೇ ಪ್ರಸಾರ ಮಾಡಿದ್ದವು. ಇದು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಏಜೆನ್ಸಿಯ ಪ್ರತಿಷ್ಠೆಗೆ ಕಳಂಕ ತರಲು ನಕಲಿ ಮತ್ತು ಕಪೋಲಕಲ್ಪಿತ ವರದಿಯನ್ನು ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ತನಿಖೆಯ ನಂತರ, ಸಿಬಿಐ ಈ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿತು. ಆದರೆ ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಲಾಗಿಲ್ಲ ಹಾಗಾಗಿ ಪತ್ರಕರ್ತರನ್ನು ಪ್ರಶ್ನಿಸಲು ಏಜೆನ್ಸಿಗೆ ನಿರ್ದೇಶಿಸಿದೆ.

ತನಿಖೆಯ ಸಂದರ್ಭದಲ್ಲಿ ಸಂಬಂಧಪಟ್ಟ ಮಾಧ್ಯಮ ಸಂಸ್ಥೆಗಳಿಂದ ಸೂಕ್ತ ದಾಖಲೆಗಳನ್ನು ಕೇಳಲಾಗಿದೆ ಆದರೆ ಅವರು ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.

ವರದಿಯನ್ನು ತಿರಸ್ಕರಿಸಿದ ನ್ಯಾಯಾಲಯವು, “ಅಗತ್ಯವಾದ ಮಾಹಿತಿಯನ್ನು ಒದಗಿಸಲು ಮತ್ತು ಅವರ ಗಮನಕ್ಕೆ ತರಲು ಸಂಬಂಧಪಟ್ಟ ಪತ್ರಕರ್ತರು/ಸುದ್ದಿ ಸಂಸ್ಥೆಗಳಿಗೆ 91 Cr.P.C. ಇತ್ಯಾದಿಗಳ ಮೂಲಕ ನೋಟಿಸ್‌ಗಳನ್ನು ನೀಡಬೇಕು. ಈಸಂದರ್ಭದಲ್ಲಿ ಸಿಬಿಐ ತನ್ನ ಅಧಿಕಾರ ಚಲಾಯಿಸಬೇಕು” ಎಂದು ಹೇಳಿದೆ.

ಉದ್ದೇಶಪೂರ್ವಕ ನಕಲಿ ದಾಖಲೆಗಳ ಆಧಾರದಲ್ಲಿ ಪತ್ರಕರ್ತರು ಸುದ್ಧಿಯನ್ನು ಬಿತ್ತರಿಸಿದ್ದಾರೆ. ಇದೀಗ ಸಂಬಂಧಪಟ್ಟ ಪತ್ರಕರ್ತರಿಂದ ಮೂಲಗಳ ಅಂಶದ ಕುರಿತು ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.

“ಅಂತಿಮ ವರದಿಯು ತನಿಖೆಯ ಅಂಶದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ, ಯಾವುದಾದರೂ ತನಿಖೆ ನಡೆಸಿದರೆ, ಅಧಿಕೃತ ದಾಖಲೆ ಅಂದರೆ ವರದಿಯು ಸೀಲ್ಡ್ ಕವರ್‌ನಲ್ಲಿ ಇರಿಸಲಾಗಿದ್ದರೂ ಒಂದು ದಿನದ ಮೊದಲು ಹೇಗೆ ಸೋರಿಕೆಯಾಯಿತು? ಇದನ್ನು ಸಿಬಿಐ ಕಚೇರಿಯಿಂದ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕಾಗಿತ್ತು,  ಆದರೆ ಅಂತಿಮವಾಗಿ ಮಾಧ್ಯಮಗಳಿಗೆ ತಲುಪಿತು.

“ಆಪಾದಿತ ಕೃತ್ಯಗಳಲ್ಲಿ ಒಳಗಿನವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವುದು ಮತ್ತು 17 ಪುಟಗಳ ನಕಲಿ ಪರಿಶೀಲನೆ ಟಿಪ್ಪಣಿಯನ್ನು ಸಿದ್ಧಪಡಿಸಿರುವುದನ್ನು ಸೇರಿದಂತೆ, ಅಪರಾಧಿಗಳು ಅಧಿಕೃತ ದಾಖಲೆಗಳನ್ನು ಪಡೆಯಲು ಯಾವ ವಿಧಾನ ಅನುಸರಿಸಿದರು ಎನ್ನುವುದರ ಮೇಲೆ ಸಿಬಿಐ ತನಿಖೆ ನಡೆಸಬೇಕು” ಎಂದು ನ್ಯಾಯಾಲಯವು ಹೇಳಿದೆ.

“ಪೂರ್ಣಗೊಳ್ಳದ ಈ ವರದಿಯನ್ನು ತಿರಸ್ಕರಿಸಲಾಗಿದೆ ಮತ್ತು ಪ್ರಸ್ತುತ ಪ್ರಕರಣದಲ್ಲಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ನಿರ್ದೇಶಿಸಿದೆ. ಮಾರ್ಚ್ 24 ರೊಳಗೆ ವರದಿಯನ್ನು ಸಲ್ಲಿಸಬೇಕು” ಎಂದು ಸಂಸ್ಥೆಗೆ ನ್ಯಾಯಾಲಯವು ಸೂಚಿಸಿತು.

ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 2007 ರಲ್ಲಿ ಸಿಬಿಐಗೆ ಸೂಚಿಸಿತ್ತು. ಅದರ ಅನುಸರಣೆಯಲ್ಲಿ, ಮಾರ್ಚ್ 5, 2007 ರಂದು ಪ್ರಾಥಮಿಕ ವಿಚಾರಣೆಯನ್ನು ನೋಂದಾಯಿಸಲಾಯಿತು ಮತ್ತು ಅಕ್ಟೋಬರ್ 26, 2007 ರಂದು ಮುಕ್ತಾಯಗೊಳಿಸಲಾಯಿತು.

ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಲಾಯಿತು ಮತ್ತು ಸುಪ್ರೀಂ ಕೋರ್ಟ್ ಮುಂದೆ ಎರಡು ಮುಚ್ಚಿದ ಕವರ್ ಲಕೋಟೆಗಳಲ್ಲಿ ಇರಿಸಲಾಗಿದೆ.

ಫೆಬ್ರವರಿ 9, 2009 ರಂದು, ಅಂದರೆ ನಿಗದಿತ ವಿಚಾರಣೆಯ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ, ಮಾಧ್ಯಮ ಸಂಸ್ಥೆಗಳು ನಕಲಿ ದಾಖಲೆಗಳ ಆಧಾರದ ಮೇಲೆ ಸುದ್ದಿಯನ್ನು ಪ್ರಕಟಿಸಿ ಮತ್ತು ಪ್ರಸಾರ ಮಾಡಿವೆ. ಹಾಗಾಗಿ ಅಪೆಕ್ಸ್ ಕೋರ್ಟ್‌ನಲ್ಲಿ ಅಂತಿಮ ತೀರ್ಪಿಗಾಗಿ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ವಾದಿಸಲಾಗಿದೆ.

ಅಪರಿಚಿತ ವ್ಯಕ್ತಿಗಳು 2008-2009ರ ಅವಧಿಯಲ್ಲಿ ಸಿಬಿಐ ಮತ್ತು ಸಿಬಿಐ ಅಧಿಕಾರಿಗಳ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ ಅಸಲಿ, ನಕಲಿ ದಾಖಲೆ ಮುದ್ರಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆ ದಾಖಲೆಗಳ ಆಧಾರದ ಮೇಲೆ ಪತ್ರಿಕೆಗಳಲ್ಲಿ ಮತ್ತು ಟಿವಿಗಳಲ್ಲಿ ಸುಳ್ಳು ಮತ್ತು ಕಟ್ಟುಕಥೆ ಸುದ್ದಿಗಳನ್ನು ಪ್ರಸಾರ ಮಾಡಿತು.

ನ್ಯೂಸ್ ಚಾನೆಲ್ ಬಳಸಿದ ದಾಖಲೆಗಳು ನಕಲಿ ಎಂದು ಅಂತಿಮ ವರದಿಯಲ್ಲಿ ವಾದಿಸಲಾಗಿದೆ. ಆದರೆ ನಕಲಿ ದಾಖಲೆಗಳ ಮೂಲವನ್ನು ಪತ್ರಕರ್ತರು ಬಹಿರಂಗಪಡಿಸದ ಕಾರಣ ಯಾರು ನಕಲಿ ದಾಖಲೆಗಳನ್ನು ರಚಿಸಿದ್ದಾರೆ ಎಂಬುದು ತಿಳಿಯಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...