Homeಕರ್ನಾಟಕಮದ್ಯ ಖರೀದಿ ವಯಸ್ಸು ಇಳಿಕೆ ಪ್ರಸ್ತಾಪದ ವಿರುದ್ಧ ಜನಾಕ್ರೋಶ: ಅಧಿಸೂಚನೆ ಹಿಂಪಡೆದ ರಾಜ್ಯ ಬಿಜೆಪಿ ಸರ್ಕಾರ

ಮದ್ಯ ಖರೀದಿ ವಯಸ್ಸು ಇಳಿಕೆ ಪ್ರಸ್ತಾಪದ ವಿರುದ್ಧ ಜನಾಕ್ರೋಶ: ಅಧಿಸೂಚನೆ ಹಿಂಪಡೆದ ರಾಜ್ಯ ಬಿಜೆಪಿ ಸರ್ಕಾರ

- Advertisement -
- Advertisement -

ಮದ್ಯ ಖರೀದಿಸುವ ಕಾನೂನುಬದ್ಧ ವಯಸ್ಸನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ, ಪ್ರಸ್ತಾವನೆ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿತ್ತು. ಸರ್ಕಾರದ ನಿರ್ಧಾರದ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಅಧಿಸೂಚನೆ ಹೊರಡಿಸಿ ಹತ್ತು ದಿನಗಳ ನಂತರ ಅದನ್ನು ಹಿಂಪಡೆದಿದೆ.

ಜನವರಿ 18 ರ ಬುಧವಾರ ಬಿಡುಗಡೆ ಮಾಡಿದ ಪತ್ರಿಕಾ ಟಿಪ್ಪಣಿಯಲ್ಲಿ, ರಾಜ್ಯ ಅಬಕಾರಿ ಇಲಾಖೆಯು ಕರ್ನಾಟಕ ಅಬಕಾರಿ (ಪರವಾನಗಿಗಳ ಸಾಮಾನ್ಯ ನಿಯಮಗಳು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಕರಡು ಅಧಿಸೂಚನೆಯನ್ನು ಸಾರ್ವಜನಿಕರು, ಸಂಘಗಳು ಮತ್ತು ಮಾಧ್ಯಮಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹಿಂತೆಗೆದುಕೊಳ್ಳುವುದಾಗಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಅಬಕಾರಿ (ಪರವಾನಗಿಗಳ ಸಾಮಾನ್ಯ ಷರತ್ತುಗಳು) ನಿಯಮಗಳು – 1967 ರ ನಿಯಮ 10 (1) (ಇ) ಅನ್ನು ತಿದ್ದುಪಡಿ ಮಾಡಲು ಕರಡು ಅಧಿಸೂಚನೆಯನ್ನು ಜನವರಿ 9 ರಂದು ಪ್ರಕಟಿಸಿತ್ತು. ಈ ನಿಯಮವು 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಿಗೆ ಮದ್ಯ ಮಾರಾಟವನ್ನು ನಿಷೇಧಿಸುತ್ತದೆ. ಅಲ್ಲಿ ‘ಇಪ್ಪತ್ತೊಂದು ವರ್ಷ’ ಪದಗಳಿಗೆ ಬದಲಾಗಿ ‘ಹದಿನೆಂಟು ವರ್ಷ’ ಎಂದು ಸೇರಿಸುವ ಬಗ್ಗೆ ಅಧಿಸೂಚನೆ ಹೇಳಿತ್ತು.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚೆಗೆ ಹೊರಡಿಸಿದ ಕರಡು ಅಧಿಸೂಚನೆಯಾದ ‘ಕರ್ನಾಟಕ ಅಬಕಾರಿ ನಿಯಮಗಳು – 2023’ ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಈ ವೇಳೆ ಅಬಕಾರಿ ಇಲಾಖೆ ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ತಿಳಿಸಿತ್ತು.

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆದಿತ್ತು.

ಸರ್ಕಾರದ ಅಧಿಸೂಚನೆಯನ್ನು ವಿರೋಧಿಸಿದ್ದ ವಿದ್ಯಾರ್ಥಿ ಸಂಘಟನೆಗಳು, “ರಾಮ ರಾಜ್ಯದ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ, ನಾಡನ್ನು ಪಾನ ರಾಜ್ಯವನ್ನಾಗಿ ಮಾಡಲು ಹೊರಟಿದೆ’’ ಎಂದು ಆಕ್ರೋಶ ವ್ಯಕ್ತಪಡಿಸಿತ್ತು ಮತ್ತು ಅಧಿಸೂಚನೆಯನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸಿತ್ತು.

ಇದನ್ನೂ ಓದಿ: ‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...