Homeಅಂಕಣಗಳುಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

ಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಪರಿಸರ-ವಿಜ್ಞಾನದ ಸಂಗತಿಗಳನ್ನು ಬೆರೆಸಿ ಕಥೆಗಳನ್ನು ಬರೆಯುವ ಜನಪ್ರಿಯ ಕಾದಂಬರಿಕಾರ ಗಣೇಶಯ್ಯನವರ ಪುಸ್ತಕಗಳ ಬಿಡುಗಡೆಯಲ್ಲಿ ಮತ್ತೋರ್ವ ಜನಪ್ರಿಯ ಕಥೆಗಾರ ಜೋಗಿ (ಗಿರೀಶ್ ರಾವ್) ಆಡಿದ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ’ಸಾಹಿತ್ಯ ಸಮ್ಮೇಳನದಂತಹ ವೇದಿಕೆಗಳಲ್ಲಿ ಜಾತಿ ಪ್ರಾತಿನಿಧ್ಯದ ಪ್ರಶ್ನೆ ವ್ಯರ್ಥ ವಾಗ್ವಾದ. ಸಾಹಿತ್ಯದಲ್ಲಿ ನಮ್ಮ ಜಾತಿಯವರು ಎಷ್ಟಿದ್ದೀವಿ ಅಂತ ನೋಡ್ತೀವಿ; ಜ್ಞಾನ ನೋಡಲ್ಲ. ಮೊದಲಿದು ರಾಜಕಾರಣದಲ್ಲಿತ್ತು. ಅಲ್ಲಿದ್ದ ಜಾತಿವಾರು ವಿಂಗಡಣೆ ಈಗ ರಾಜಕೀಯಕ್ಕೆ ಬಂದುಬಿಟ್ಟಿದೆ. ಜಾತಿ ನೆಲೆಯಿಂದ ನೋಡುವುದು ಸುಳ್ಳು ವಾಗ್ವಾದಗಳನ್ನು ಹುಟ್ಟುಹಾಕುತ್ತೆ. ಈ ವಾಗ್ವಾದಗಳಲ್ಲಿ ಹುರುಳಿರುವುದಿಲ್ಲ. ಅದರಿಂದ ನಮಗೇನೂ ಸಿಕ್ಕುವುದಿಲ್ಲ. ಕೃತಿಯ ಕಾರಣಕ್ಕೆ ಯೋಗ್ಯತೆಯನ್ನು ಅಳೆದು ನ್ಯಾಯ ಸಲ್ಲಿಸಬೇಕು. ಆಗ ಯೋಚಿಸುವವನ ಬುದ್ಧಿಶಕ್ತಿಗೆ ಕೆಲಸ ಕೊಟ್ಟಂತೆ ಆಗುತ್ತದೆ’ ಹೀಗೆಲ್ಲಾ ಮಾತಾಡ್ತಾ ಪ್ರಾತಿನಿಧ್ಯದ ಪ್ರಶ್ನೆಗಳು ಆಳದ ಚಿಂತನೆಗಳಲ್ಲ ಬದಲಾಗಿ ಮೇಲ್ಮಟ್ಟದ ಚಿಂತನೆಗಳು ಎಂದು ಹೀಗಳೆದಿದ್ದಾರೆ. ಇಡೀ ವಿಶ್ವ ಪ್ರಾತಿನಿಧ್ಯದ ಪ್ರಶ್ನೆಗಳನ್ನು ಎತ್ತಿಕೊಂಡು ಚರ್ಚಿಸುತ್ತಿರುವಾಗ, ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಪ್ರಾತಿನಿಧ್ಯದ ಸಮಸ್ಯೆಗಳನ್ನು ಸರಿಪಡಿಸಲು ಅಧ್ಯಯನಗಳನ್ನು ನಡೆಸುತ್ತಿರುವಾಗ, ಕರ್ನಾಟಕದಲ್ಲಿ ಜೋಗಿಯಂತಹ ಜನಪ್ರಿಯ ಲೇಖಕ-ಪತ್ರಕರ್ತರಿಗೆ ಇದು ವ್ಯರ್ಥ ವಾಗ್ವಾದದಂತೆ ಕಾಣುವುದು ಏಕೆ? ಪ್ರಿವಿಲೆಜ್ ಸಮುದಾಯದಿಂದ ಬಂದಂತಹ ಇಂತಹ ಬರಹಗಾರರು ಸಮಾಜದ ಸಮಸ್ಯೆಗಳಿಗೆ ಬೆನ್ನುತಿರುಗಿಸಿ ತಮ್ಮದೇ ಲೋಕದಲ್ಲಿ ಮುಳುಗಿರುವ ಸಂಗತಿ ಮಾತ್ರವೇ ಇದು?

ವಿಜ್ಞಾನ ಮತ್ತು ತಂತ್ರಜ್ಞಾನದ ಅಧ್ಯಯನ ಮತ್ತು ವರದಿಗಳನ್ನು ಪ್ರಕಟಿಸುವ ಬ್ರಿಟಿಷ್ ಮೂಲದ ’ನೇಚರ್’ ಜರ್ನಲ್ ಇತ್ತೀಚೆಗೆ “ಹೇಗೆ ಭಾರತೀಯ ಜಾತಿ ವ್ಯವಸ್ಥೆ ವಿಜ್ಞಾನದಲ್ಲಿ ವೈವಿಧ್ಯತೆಯನ್ನು ನಿರ್ಬಂಧಿಸುತ್ತದೆ- ಆರು ಚಾರ್ಟ್‌ಗಳಲ್ಲಿ” ಎಂಬ ಅಧ್ಯಯನಪೂರ್ಣ ಬರಹವನ್ನು ಪ್ರಕಟಿಸಿತು. ಭಾರತದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಪ್ರಾತಿನಿಧ್ಯದಲ್ಲಿ ಇರುವ ಕೊರತೆಯನ್ನು ಅಂಕಿಅಂಶಗಳ ಮೂಲಕ ಬಿಚ್ಚಿಟ್ಟಿತು. ಪ್ರೊಫೆಸರ್‌ಗಳು ಮತ್ತು ವಿಜ್ಞಾನಿಗಳ ಹುದ್ದೆಗಳಲ್ಲಂತೂ ದಲಿತ, ಆದಿವಾಸಿ ಮತ್ತು ಹಿಂದುಳಿದವರ ಸಂಖ್ಯೆ 2%-5% ಮಾತ್ರ. ಈ ಪ್ರಾತಿನಿಧ್ಯದ ಕೊರತೆಯಿಂದ ಈ ದೇಶದ ವಿಜ್ಞಾನ ಕ್ಷೇತ್ರದಲ್ಲಿ ಏನಾಗಿದೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ. ವಿಜ್ಞಾನ ಅಥವಾ ತಂತ್ರಜ್ಞಾನ ಕ್ಷೇತ್ರದಲ್ಲಿ ಯಾವುದೇ ದೊಡ್ಡದಾದ ಅಥವಾ ಮನುಕುಲವನ್ನು ಬದಲಾಯಿಸಿದ ಬೆಳವಣಿಗೆ ಈ ದೇಶದ ವಿಜ್ಞಾನ ಸಂಸ್ಥೆಗಳಿಂದ ಹೊರಬಂದಿದ್ದು ಇಲ್ಲವೇಇಲ್ಲವೆನ್ನುವಷ್ಟು ವಿರಳ. ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ಶಾಸ್ತ್ರ ವಿಭಾಗದಲ್ಲಿ ಆಯಾ ವರ್ಷ ನಡೆಯುವ ಬಹುಮುಖ್ಯ ಸಂಶೋಧನೆಗಳಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಭಾರತೀಯ ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆಗೈದವರಿಗೆ ಈ ಕ್ಷೇತ್ರಗಳಲ್ಲಿ ನೊಬೆಲ್ ಪ್ರಶಸ್ತಿ ದೊರಕಿರುವುದನ್ನು ಎಣಿಸಲು ಬೆರೆಳೆಣಿಕೆಯ ಅಗತ್ಯವೂ ಇಲ್ಲ. ವಿವಿಧ ಜ್ಞಾನಕ್ಷೇತ್ರಗಳಲ್ಲಿ ಪರಿಣಿತರಾಗಿದ್ದ ಸಮುದಾಯಗಳನ್ನು ಕಡೆಗಣಿಸಿ ಮುಂದುವರಿದ ವಿಜ್ಞಾನ ಕ್ಷೇತ್ರದ ಬಾಳು ಇದು. ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಪಶ್ಚಿಮ ದೇಶಗಳಿಂದ ಸಿಕ್ಕುವ ಕೆಲಸಗಳಿಗೆ ಬಾಡಿಶಾಪಿಂಗ್ ಮಾಡುವ ಸಂಸ್ಥೆಗಳನ್ನು ಇಲ್ಲಿ ಕಟ್ಟಲಾಗಿದೆಯೇ ಹೊರತು, ಇಂಡಿಜೀನಸ್ ಎನ್ನುವ ತಂತ್ರಜ್ಞಾನ ಭಾರತದಿಂದ ಬೆಳೆದುಬಂದಿದೆಯೇ? ಇಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ವಿಜ್ಞಾನ ಕ್ಷೇತ್ರದಲ್ಲಿಯೂ ಜಾತಿ ಸಮುದಾಯಗಳ ಪ್ರಾತಿನಿಧ್ಯ ಏಕೆ ಬೇಕು? ಜ್ಞಾನವನ್ನು ಹುಡುಕೋಣ ಬನ್ನಿ ಎಂದು ಬೋಧನೆ ನೀಡುವ ಜೋಗಿಗಳ ಸಂಖ್ಯೆ ಇಲ್ಲಿಯೂ ಕಡಿಮೆಯೇನಿಲ್ಲ!

ಭಾರತದ ಮತ್ತು ಕರ್ನಾಟಕದ ಪತ್ರಿಕೋದ್ಯಮ ಕೂಡ ಇದಕ್ಕೆ ಹೊರತಾಗಿಲ್ಲ. ಮಾಧ್ಯಮ ಕ್ಷೇತ್ರಗಳಲ್ಲಿ ಸಂಪಾದಕರು ಯಾವ ಸಮುದಾಯದಿಂದ ಬಂದವರು ಎಂದು ಹುಡುಕುತ್ತಾ ಹೋದರೆ 90%ಗಿಂತಲೂ ಹೆಚ್ಚು ಜನ 3% ಜನಸಂಖ್ಯೆಯ ಸಮುದಾಯಕ್ಕೆ ಸೇರಿದವರು ಎಂಬುದು ಅಚ್ಚರಿಯಾಗೇನೂ ಉಳಿದಿಲ್ಲ. ಸಾಹಿತ್ಯ ಮತ್ತು ಮಾಧ್ಯಮ ಕ್ಷೇತ್ರಗಳು ಒಂದಕ್ಕೊಂದು ಬೆಸೆದುಕೊಂಡಿರುವಂತಹವು. ಮಾಧ್ಯಮ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಸಮುದಾಯದ ವ್ಯಕ್ತಿಗಳಿಂದ ಸಾಹಿತ್ಯ ಕ್ಷೇತ್ರದ ಅದೇ ಸಮುದಾಯದ ವ್ಯಕ್ತಿಗಳು ವಿಜೃಂಭಿಸುವುದು ಅಲಿಖಿತ ಒಪ್ಪಂದ. ಹೀಗೆ ಕರ್ನಾಟಕದಲ್ಲಿಯೂ ಒಂದೇ ಸಮುದಾಯದ ಹೆಚ್ಚು ಸಾಹಿತಿಗಳು ಪಾರಮ್ಯ ಗಳಿಸಿದರು. ದೇವರಾಜ ಅರಸರ ಕಾಲಘಟ್ಟದಲ್ಲಿ ಆದ ರಾಜಕೀಯ ಬೆಳವಣಿಗೆ ಮಾತ್ರ ಸಾಹಿತ್ಯದಲ್ಲಿ ದಲಿತ ಮತ್ತು ಶೂದ್ರ ಸಂವೇದನೆಗೆ ಸ್ವಲ್ಪ ಅವಕಾಶ ಕೊಟ್ಟಿತು. ಸಿದ್ದಲಿಂಗಯ್ಯ, ದೇವನೂರ ಮಹಾದೇವ, ಲಂಕೇಶ್, ತೇಜಸ್ವಿ, ಚಂಪಾ ಮುಂತಾದ ದಲಿತ ಹಾಗೂ ಶೂದ್ರ ಸಾಹಿತಿಗಳಿಂದ (ಕುವೆಂಪು ಇವರೆಲ್ಲರಿಗೂ ಪೂರ್ವದಲ್ಲಿ ಇಂತಹ ಸಂವೇದನೆಗೆ ಕಾರಣರಾಗಿದ್ದರು) ಕನ್ನಡ ಸಾಹಿತ್ಯ ವೈವಿಧ್ಯಮಯವೂ, ಜನಪರವೂ ಆಗಿದ್ದು ಇತಿಹಾಸ. ಈ ಇತಿಹಾಸದ ಬಳವಳಿ ಎಂಬಂತೆ ಇಂದಿನ ಯುವಜನತೆ ಎಲ್ಲ ಕ್ಷೇತ್ರದಲ್ಲಿಯೂ ಎಲ್ಲ ಸಮುದಾಯಗಳಿಗೂ ಸರಿಯಾದ ಪ್ರಾತಿನಿಧ್ಯದ ಬೇಡಿಕೆಯಿಡುತ್ತಿದೆ. ಇದು ಹಲವರಿಗೆ ನುಂಗಲಾರದ ತುತ್ತಾಗಿದೆ.

ಇಂದು ರಾಜಕೀಯವೂ ಬಹುಸಂಖ್ಯಾತ ಪ್ರಭುತ್ವದ ಸುಪರ್ದಿಗೆ ಹೊರಳಿರುವಾಗ, ಪ್ರತಿಗಾಮಿ ಸಾಹಿತಿಗಳು ಮತ್ತೆ ತಮ್ಮ ದನಿಯನ್ನು ಜೋರುಮಾಡುತ್ತಿದ್ದಾರೆ. ಇದು ಈ ಸಾಹಿತಿಗಳ ಅಜ್ಞಾನದ ಪ್ರದರ್ಶನ ಮಾತ್ರವಾಗಿರದೆ, ಇಲ್ಲಿಯವರೆಗೆ ಸಾಧಿಸಲಾಗಿರುವ ತುಸು ಪ್ರಗತಿಗೂ ಗೆದ್ದಲು ಹಿಡಿಸುವ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಬ್ರಾಹ್ಮಣ್ಯ ಮತ್ತು ಪ್ರಾತಿನಿಧ್ಯ ಎಂಬ ಐಡಿಯಾಗಳ ನಡುವಿನ ಸಂಘರ್ಷ ದಿನೇದಿನೇ ತೀವ್ರವಾಗುತ್ತಿದೆ. ಪ್ರಗತಿಪರವಾದ ಪ್ರಾತಿನಿಧ್ಯದ ಐಡಿಯಾದ ಕೂಗು ಬ್ರಾಹ್ಮಣ್ಯದ ಪ್ರತಿಗಾಮಿಗಳಿಗೆ ಕೇಳಿಸಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...