Homeಅಂಕಣಗಳುಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

ಸಾಹಿತ್ಯ ಪ್ರಾತಿನಿಧ್ಯವನ್ನು ಗೇಲಿ ಮಾಡುವ ಪ್ರತಿಗಾಮಿತನ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಪರಿಸರ-ವಿಜ್ಞಾನದ ಸಂಗತಿಗಳನ್ನು ಬೆರೆಸಿ ಕಥೆಗಳನ್ನು ಬರೆಯುವ ಜನಪ್ರಿಯ ಕಾದಂಬರಿಕಾರ ಗಣೇಶಯ್ಯನವರ ಪುಸ್ತಕಗಳ ಬಿಡುಗಡೆಯಲ್ಲಿ ಮತ್ತೋರ್ವ ಜನಪ್ರಿಯ ಕಥೆಗಾರ ಜೋಗಿ (ಗಿರೀಶ್ ರಾವ್) ಆಡಿದ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ. ’ಸಾಹಿತ್ಯ ಸಮ್ಮೇಳನದಂತಹ ವೇದಿಕೆಗಳಲ್ಲಿ ಜಾತಿ ಪ್ರಾತಿನಿಧ್ಯದ ಪ್ರಶ್ನೆ ವ್ಯರ್ಥ ವಾಗ್ವಾದ. ಸಾಹಿತ್ಯದಲ್ಲಿ ನಮ್ಮ ಜಾತಿಯವರು ಎಷ್ಟಿದ್ದೀವಿ ಅಂತ ನೋಡ್ತೀವಿ; ಜ್ಞಾನ ನೋಡಲ್ಲ. ಮೊದಲಿದು ರಾಜಕಾರಣದಲ್ಲಿತ್ತು. ಅಲ್ಲಿದ್ದ ಜಾತಿವಾರು ವಿಂಗಡಣೆ ಈಗ ರಾಜಕೀಯಕ್ಕೆ ಬಂದುಬಿಟ್ಟಿದೆ. ಜಾತಿ ನೆಲೆಯಿಂದ ನೋಡುವುದು ಸುಳ್ಳು ವಾಗ್ವಾದಗಳನ್ನು ಹುಟ್ಟುಹಾಕುತ್ತೆ. ಈ ವಾಗ್ವಾದಗಳಲ್ಲಿ ಹುರುಳಿರುವುದಿಲ್ಲ. ಅದರಿಂದ ನಮಗೇನೂ ಸಿಕ್ಕುವುದಿಲ್ಲ. ಕೃತಿಯ ಕಾರಣಕ್ಕೆ ಯೋಗ್ಯತೆಯನ್ನು ಅಳೆದು ನ್ಯಾಯ ಸಲ್ಲಿಸಬೇಕು. ಆಗ ಯೋಚಿಸುವವನ ಬುದ್ಧಿಶಕ್ತಿಗೆ ಕೆಲಸ ಕೊಟ್ಟಂತೆ ಆಗುತ್ತದೆ’ ಹೀಗೆಲ್ಲಾ ಮಾತಾಡ್ತಾ ಪ್ರಾತಿನಿಧ್ಯದ ಪ್ರಶ್ನೆಗಳು ಆಳದ ಚಿಂತನೆಗಳಲ್ಲ ಬದಲಾಗಿ ಮೇಲ್ಮಟ್ಟದ ಚಿಂತನೆಗಳು ಎಂದು ಹೀಗಳೆದಿದ್ದಾರೆ. ಇಡೀ ವಿಶ್ವ ಪ್ರಾತಿನಿಧ್ಯದ ಪ್ರಶ್ನೆಗಳನ್ನು ಎತ್ತಿಕೊಂಡು ಚರ್ಚಿಸುತ್ತಿರುವಾಗ, ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಪ್ರಾತಿನಿಧ್ಯದ ಸಮಸ್ಯೆಗಳನ್ನು ಸರಿಪಡಿಸಲು ಅಧ್ಯಯನಗಳನ್ನು ನಡೆಸುತ್ತಿರುವಾಗ, ಕರ್ನಾಟಕದಲ್ಲಿ ಜೋಗಿಯಂತಹ ಜನಪ್ರಿಯ ಲೇಖಕ-ಪತ್ರಕರ್ತರಿಗೆ ಇದು ವ್ಯರ್ಥ ವಾಗ್ವಾದದಂತೆ ಕಾಣುವುದು ಏಕೆ? ಪ್ರಿವಿಲೆಜ್ ಸಮುದಾಯದಿಂದ ಬಂದಂತಹ ಇಂತಹ ಬರಹಗಾರರು ಸಮಾಜದ ಸಮಸ್ಯೆಗಳಿಗೆ ಬೆನ್ನುತಿರುಗಿಸಿ ತಮ್ಮದೇ ಲೋಕದಲ್ಲಿ ಮುಳುಗಿರುವ ಸಂಗತಿ ಮಾತ್ರವೇ ಇದು?

ವಿಜ್ಞಾನ ಮತ್ತು ತಂತ್ರಜ್ಞಾನದ ಅಧ್ಯಯನ ಮತ್ತು ವರದಿಗಳನ್ನು ಪ್ರಕಟಿಸುವ ಬ್ರಿಟಿಷ್ ಮೂಲದ ’ನೇಚರ್’ ಜರ್ನಲ್ ಇತ್ತೀಚೆಗೆ “ಹೇಗೆ ಭಾರತೀಯ ಜಾತಿ ವ್ಯವಸ್ಥೆ ವಿಜ್ಞಾನದಲ್ಲಿ ವೈವಿಧ್ಯತೆಯನ್ನು ನಿರ್ಬಂಧಿಸುತ್ತದೆ- ಆರು ಚಾರ್ಟ್‌ಗಳಲ್ಲಿ” ಎಂಬ ಅಧ್ಯಯನಪೂರ್ಣ ಬರಹವನ್ನು ಪ್ರಕಟಿಸಿತು. ಭಾರತದ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ದಲಿತರು ಮತ್ತು ಆದಿವಾಸಿಗಳ ಪ್ರಾತಿನಿಧ್ಯದಲ್ಲಿ ಇರುವ ಕೊರತೆಯನ್ನು ಅಂಕಿಅಂಶಗಳ ಮೂಲಕ ಬಿಚ್ಚಿಟ್ಟಿತು. ಪ್ರೊಫೆಸರ್‌ಗಳು ಮತ್ತು ವಿಜ್ಞಾನಿಗಳ ಹುದ್ದೆಗಳಲ್ಲಂತೂ ದಲಿತ, ಆದಿವಾಸಿ ಮತ್ತು ಹಿಂದುಳಿದವರ ಸಂಖ್ಯೆ 2%-5% ಮಾತ್ರ. ಈ ಪ್ರಾತಿನಿಧ್ಯದ ಕೊರತೆಯಿಂದ ಈ ದೇಶದ ವಿಜ್ಞಾನ ಕ್ಷೇತ್ರದಲ್ಲಿ ಏನಾಗಿದೆ ಎಂಬುದನ್ನು ಊಹಿಸುವುದು ಕಷ್ಟವೇನಲ್ಲ. ವಿಜ್ಞಾನ ಅಥವಾ ತಂತ್ರಜ್ಞಾನ ಕ್ಷೇತ್ರದಲ್ಲಿ ಯಾವುದೇ ದೊಡ್ಡದಾದ ಅಥವಾ ಮನುಕುಲವನ್ನು ಬದಲಾಯಿಸಿದ ಬೆಳವಣಿಗೆ ಈ ದೇಶದ ವಿಜ್ಞಾನ ಸಂಸ್ಥೆಗಳಿಂದ ಹೊರಬಂದಿದ್ದು ಇಲ್ಲವೇಇಲ್ಲವೆನ್ನುವಷ್ಟು ವಿರಳ. ಭೌತಶಾಸ್ತ್ರ, ರಸಾಯನಶಾಸ್ತ್ರ, ವೈದ್ಯಕೀಯ ಶಾಸ್ತ್ರ ವಿಭಾಗದಲ್ಲಿ ಆಯಾ ವರ್ಷ ನಡೆಯುವ ಬಹುಮುಖ್ಯ ಸಂಶೋಧನೆಗಳಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಭಾರತೀಯ ವಿಜ್ಞಾನ ಸಂಸ್ಥೆಗಳಲ್ಲಿ ಸಂಶೋಧನೆಗೈದವರಿಗೆ ಈ ಕ್ಷೇತ್ರಗಳಲ್ಲಿ ನೊಬೆಲ್ ಪ್ರಶಸ್ತಿ ದೊರಕಿರುವುದನ್ನು ಎಣಿಸಲು ಬೆರೆಳೆಣಿಕೆಯ ಅಗತ್ಯವೂ ಇಲ್ಲ. ವಿವಿಧ ಜ್ಞಾನಕ್ಷೇತ್ರಗಳಲ್ಲಿ ಪರಿಣಿತರಾಗಿದ್ದ ಸಮುದಾಯಗಳನ್ನು ಕಡೆಗಣಿಸಿ ಮುಂದುವರಿದ ವಿಜ್ಞಾನ ಕ್ಷೇತ್ರದ ಬಾಳು ಇದು. ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಪಶ್ಚಿಮ ದೇಶಗಳಿಂದ ಸಿಕ್ಕುವ ಕೆಲಸಗಳಿಗೆ ಬಾಡಿಶಾಪಿಂಗ್ ಮಾಡುವ ಸಂಸ್ಥೆಗಳನ್ನು ಇಲ್ಲಿ ಕಟ್ಟಲಾಗಿದೆಯೇ ಹೊರತು, ಇಂಡಿಜೀನಸ್ ಎನ್ನುವ ತಂತ್ರಜ್ಞಾನ ಭಾರತದಿಂದ ಬೆಳೆದುಬಂದಿದೆಯೇ? ಇಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ವಿಜ್ಞಾನ ಕ್ಷೇತ್ರದಲ್ಲಿಯೂ ಜಾತಿ ಸಮುದಾಯಗಳ ಪ್ರಾತಿನಿಧ್ಯ ಏಕೆ ಬೇಕು? ಜ್ಞಾನವನ್ನು ಹುಡುಕೋಣ ಬನ್ನಿ ಎಂದು ಬೋಧನೆ ನೀಡುವ ಜೋಗಿಗಳ ಸಂಖ್ಯೆ ಇಲ್ಲಿಯೂ ಕಡಿಮೆಯೇನಿಲ್ಲ!

ಭಾರತದ ಮತ್ತು ಕರ್ನಾಟಕದ ಪತ್ರಿಕೋದ್ಯಮ ಕೂಡ ಇದಕ್ಕೆ ಹೊರತಾಗಿಲ್ಲ. ಮಾಧ್ಯಮ ಕ್ಷೇತ್ರಗಳಲ್ಲಿ ಸಂಪಾದಕರು ಯಾವ ಸಮುದಾಯದಿಂದ ಬಂದವರು ಎಂದು ಹುಡುಕುತ್ತಾ ಹೋದರೆ 90%ಗಿಂತಲೂ ಹೆಚ್ಚು ಜನ 3% ಜನಸಂಖ್ಯೆಯ ಸಮುದಾಯಕ್ಕೆ ಸೇರಿದವರು ಎಂಬುದು ಅಚ್ಚರಿಯಾಗೇನೂ ಉಳಿದಿಲ್ಲ. ಸಾಹಿತ್ಯ ಮತ್ತು ಮಾಧ್ಯಮ ಕ್ಷೇತ್ರಗಳು ಒಂದಕ್ಕೊಂದು ಬೆಸೆದುಕೊಂಡಿರುವಂತಹವು. ಮಾಧ್ಯಮ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ಸಮುದಾಯದ ವ್ಯಕ್ತಿಗಳಿಂದ ಸಾಹಿತ್ಯ ಕ್ಷೇತ್ರದ ಅದೇ ಸಮುದಾಯದ ವ್ಯಕ್ತಿಗಳು ವಿಜೃಂಭಿಸುವುದು ಅಲಿಖಿತ ಒಪ್ಪಂದ. ಹೀಗೆ ಕರ್ನಾಟಕದಲ್ಲಿಯೂ ಒಂದೇ ಸಮುದಾಯದ ಹೆಚ್ಚು ಸಾಹಿತಿಗಳು ಪಾರಮ್ಯ ಗಳಿಸಿದರು. ದೇವರಾಜ ಅರಸರ ಕಾಲಘಟ್ಟದಲ್ಲಿ ಆದ ರಾಜಕೀಯ ಬೆಳವಣಿಗೆ ಮಾತ್ರ ಸಾಹಿತ್ಯದಲ್ಲಿ ದಲಿತ ಮತ್ತು ಶೂದ್ರ ಸಂವೇದನೆಗೆ ಸ್ವಲ್ಪ ಅವಕಾಶ ಕೊಟ್ಟಿತು. ಸಿದ್ದಲಿಂಗಯ್ಯ, ದೇವನೂರ ಮಹಾದೇವ, ಲಂಕೇಶ್, ತೇಜಸ್ವಿ, ಚಂಪಾ ಮುಂತಾದ ದಲಿತ ಹಾಗೂ ಶೂದ್ರ ಸಾಹಿತಿಗಳಿಂದ (ಕುವೆಂಪು ಇವರೆಲ್ಲರಿಗೂ ಪೂರ್ವದಲ್ಲಿ ಇಂತಹ ಸಂವೇದನೆಗೆ ಕಾರಣರಾಗಿದ್ದರು) ಕನ್ನಡ ಸಾಹಿತ್ಯ ವೈವಿಧ್ಯಮಯವೂ, ಜನಪರವೂ ಆಗಿದ್ದು ಇತಿಹಾಸ. ಈ ಇತಿಹಾಸದ ಬಳವಳಿ ಎಂಬಂತೆ ಇಂದಿನ ಯುವಜನತೆ ಎಲ್ಲ ಕ್ಷೇತ್ರದಲ್ಲಿಯೂ ಎಲ್ಲ ಸಮುದಾಯಗಳಿಗೂ ಸರಿಯಾದ ಪ್ರಾತಿನಿಧ್ಯದ ಬೇಡಿಕೆಯಿಡುತ್ತಿದೆ. ಇದು ಹಲವರಿಗೆ ನುಂಗಲಾರದ ತುತ್ತಾಗಿದೆ.

ಇಂದು ರಾಜಕೀಯವೂ ಬಹುಸಂಖ್ಯಾತ ಪ್ರಭುತ್ವದ ಸುಪರ್ದಿಗೆ ಹೊರಳಿರುವಾಗ, ಪ್ರತಿಗಾಮಿ ಸಾಹಿತಿಗಳು ಮತ್ತೆ ತಮ್ಮ ದನಿಯನ್ನು ಜೋರುಮಾಡುತ್ತಿದ್ದಾರೆ. ಇದು ಈ ಸಾಹಿತಿಗಳ ಅಜ್ಞಾನದ ಪ್ರದರ್ಶನ ಮಾತ್ರವಾಗಿರದೆ, ಇಲ್ಲಿಯವರೆಗೆ ಸಾಧಿಸಲಾಗಿರುವ ತುಸು ಪ್ರಗತಿಗೂ ಗೆದ್ದಲು ಹಿಡಿಸುವ ಪ್ರಯತ್ನವಾಗಿದೆ. ಈ ನಿಟ್ಟಿನಲ್ಲಿ ಬ್ರಾಹ್ಮಣ್ಯ ಮತ್ತು ಪ್ರಾತಿನಿಧ್ಯ ಎಂಬ ಐಡಿಯಾಗಳ ನಡುವಿನ ಸಂಘರ್ಷ ದಿನೇದಿನೇ ತೀವ್ರವಾಗುತ್ತಿದೆ. ಪ್ರಗತಿಪರವಾದ ಪ್ರಾತಿನಿಧ್ಯದ ಐಡಿಯಾದ ಕೂಗು ಬ್ರಾಹ್ಮಣ್ಯದ ಪ್ರತಿಗಾಮಿಗಳಿಗೆ ಕೇಳಿಸಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...