Homeಮುಖಪುಟಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

- Advertisement -
- Advertisement -

ಪ್ಯಾನ್-ಇಂಡಿಯಾ ಪಾದಯಾತ್ರೆ ‘ಭಾರತ್ ಜೋಡೋ ಯಾತ್ರೆ’ಯು ಗುರುವಾರ ಪಂಜಾಬ್‌ನಿಂದ ಜಮ್ಮುವಿಗೆ ಪ್ರವೇಶಿಸಿದೆ. ಇದು ಯಾತ್ರೆಯ ಕೊನೆಯ ರಾಜ್ಯವಾಗಿರಲಿದೆ. ಇಂತಹ ಚಳಿಗಾಲದಲ್ಲೂ ಉತ್ತರ ಭಾರತದಾದ್ಯಂತ ಕೇವಲ ಟೀ ಶರ್ಟ್ ಧರಿಸಿಯೇ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೊದಲ ಬಾರಿಗೆ ಜಾಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಳಗ್ಗೆಯಿಂದ ಜಮ್ಮುವಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿರುವುದರಿಂದ ರಾಹುಲ್ ಗಾಂಧಿ ಜಾಕೇಟ್ ಧರಿಸಿದ್ದರು ಎಂದು ಹೇಳಲಾಗುತ್ತದೆ. ನಂತರ ಅವರು ಜಾಕೆಟ್ ತೆಗೆದು, ಎಮದಿನಂತೆ ಬಿಳಿ ಟೀ ಶರ್ಟ್‌ನಲ್ಲಿ ನಡೆಯುತ್ತಿರುವುದು ಕಂಡುಬಂದಿತು.

ಭಾರತ್ ಜೋಡೊ ಯಾತ್ರೆ ಇಂದು 125 ದಿನಗಳನ್ನು ಪೂರೈಸಿದ್ದು, ಒಟ್ಟು 3,400 ಕಿಲೋಮೀಟರ್‌ಗಳ ದೂರ 52ವರ್ಷದ ರಾಹುಲ್ ಗಾಂಧಿಯವರು ಯಾತ್ರೆಯನ್ನು ಮುನ್ನಡೆಸಿದ್ದಾರೆ. ಈ ಯಾತ್ರೆಯುದ್ದಕ್ಕೂ ಬಿಳಿ ಬಣ್ಣದ ಟಿಶರ್ಟ್ಸ್‌ಗಳಿಂದಲೇ ಎಲ್ಲರ ಗಮನ ಸೆಳೆದಿದ್ದ ರಾಹುಲ್ ಅನೇಕರ ಮೆಚ್ಚುಗೆ ಗಳಿಸಿದ್ದಾರೆ. ರಾಹುಲ್ ಗಾಂಧಿಯವರ ಆಕರ್ಷಕ ಉಡುಪು ವಿರೋಧ ಪಕ್ಷಗಳಿಗೆ ಕೆರಳಿಸಿದ್ದಂತು ಸುಳ್ಳಲ್ಲ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ ಮೇಲೆ FIR

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಜನವರಿ 25 ರಂದು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್‌ನಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಎರಡು ದಿನಗಳ ನಂತರ – ಜನವರಿ 27 ರಂದು ಅನಂತನಾಗ್ ಮೂಲಕ ಶ್ರೀನಗರವನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಸ್ವಾಗತಿಸುವ ಕಾರ್ಯಕ್ರಮದ ವೇಳೆ ವೇದಿಕೆಗೆ ಜೈರಾಮ್ ರಮೇಶ್, ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್, ಅಬ್ದುಲ್ಲಾ, ಶಿವಸೇನಾ ನಾಯಕ ಸಂಜಯ್ ರಾವುತ್, ಡೋಗ್ರಾ ಸ್ವಾಭಿಮಾನ್ ಸಂಘಟನೆ ಪಕ್ಷ ಮತ್ತು ಮಾಜಿ ಸಚಿವ ಲಾಲ್ ಸಿಂಗ್, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮುಜಾಫರ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಸ್ವಾಗತಿಸಲಾಯಿತು.

ಆದರೆ ಲಾಲ್ ಸಿಂಗ್ ಅವರು ತಡವಾಗಿ ಬಂದಿದ್ದರಿಂದ ವೇದಿಕೆಯಲ್ಲಿ ಹಾಜರಿರಲಿಲ್ಲ. ತಡವಾಗಿ ಬಂದ ಅವರು, ಸಮಾರಂಭ ಮುಗಿಯುವವರೆಗೂ ಜನರ ಗುಂಪಿನಲ್ಲಿಯೇ ನಿಂತಿರುವುದು ಕಂಡುಬಂದಿತು. ಕಾರ್ಯಕ್ರಮಕ್ಕೆ ಆಗಮಿಸಿದ ನಾಯಕರಿಗೆ ಕೃತಜ್ಞತೆ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಲಾಲ್ ಸಿಂಗ್ ಹೆಸರನ್ನು ಉಲ್ಲೇಖಿಸಲಿಲ್ಲ. ಹಾಗಾಗಿ ಮುಜುಗರಕ್ಕೀಡಾಗಿ ಅಲ್ಲಿಂದ ಅವರು ಹೊರಟುಹೋದರು.

ಇಂದು ಬೆಳಿಗ್ಗೆ ಕಥುವಾದ ಹಟ್ಲಿ ಮೋರ್ಹ್‌ನಿಂದ ಪುನರಾರಂಭಗೊಂಡ ಯಾತ್ರೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಗಾಂಧಿ ಕುಟುಂಬ ಮತ್ತು ಅವರ ಸಹ-ಹಿಂಬಾಲರನ್ನು ಸುತ್ತುವರಿದಿವೆ. ಕೆಲವೆಡೆ ಜಾಮರ್‌ಗಳನ್ನೂ ಹಾಕಲಾಗಿದೆ. ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೆಚ್ಚು ಜನ ಸೇರಿ ಪಾದಯಾತ್ರೆ ನಡೆಸದಂತೆ ಭದ್ರತಾ ಏಜೆನ್ಸಿಗಳು ರಾಹುಲ್ ಗಾಂಧಿಗೆ ಈ ಹಿಂದೆ ಸಲಹೆ ನೀಡಿದ್ದವು.

ರಾಹುಲ್ ಗಾಂಧಿಯವರು ಜಮ್ಮು ಪ್ರವೇಶಿಸಿದಾಗ ಕಾಶ್ಮೀರಿ ಪ್ರಮುಖ ನಾಯಕ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭವ್ಯ ಸ್ವಾಗತ ಕೋರಿದ್ದಾರೆ. ಲಖನ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ, ರಾಹುಲ್ ಗಾಂಧಿ ಅವರು ಜನರೊಂದಿಗೆ ಸ್ವರಮೇಳವನ್ನು ಭಾರಿಸಲು ತಮ್ಮ ಕಾಶ್ಮೀರಿ ಪೂರ್ವಜರನ್ನು ಕರೆದರು. ಈ ವೇಳೆ ಅಲ್ಲಿಯ ನಿವಾಸಿಗಳ ನೋವು ಮತ್ತು ಸಂಕಟಗಳ ಬಗ್ಗೆ ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಂಜಾಬ್‌ನ ಮಾಧೋಪುರದಲ್ಲಿ ರಾಹುಲ್ ಗಾಂಧಿಗೆ ಹಾಡು ಮತ್ತು ನೃತ್ಯದ ನಡುವೆ ಭವ್ಯವಾದ ಸ್ವಾಗತವನ್ನು ನೀಡಲಾಯಿತು. ಕೊನೆಯ ಹಂತಕ್ಕೆ ಪ್ರವೇಶಿಸುವ ಯಾತ್ರೆಯನ್ನು ನೂರಾರು ಜನರು ಸೇರಿ ಬರಮಾಡಿಕೊಂಡರು. ಜನವರಿ 30 ರಂದು ಶ್ರೀನಗರದಲ್ಲಿ ಸಮಾರೋಪ ಕಾರ್ಯಕ್ರಮದೊಂದಿಗೆ ಯಾತ್ರೆ ಮುಕ್ತಾಯಗೊಳ್ಳಲಿದೆ.

(ರಾತ್ರಿ ಚಡ್ವಾಲ್‌ನಲ್ಲಿ ಯಾತ್ರೆ ನಿಲ್ಲಲಿದೆ. ನಾಳೆ ಬೆಳಗ್ಗೆ ಹೀರಾನಗರದಿಂದ ದುಗ್ಗರ್ ಹವೇಲಿಗೆ ಹೊರಟು ಜನವರಿ 22ರಂದು ವಿಜಯಪುರದಿಂದ ಸತ್ವಾರಿಗೆ ತೆರಳಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...