Homeಮುಖಪುಟಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

- Advertisement -
- Advertisement -

ಪ್ಯಾನ್-ಇಂಡಿಯಾ ಪಾದಯಾತ್ರೆ ‘ಭಾರತ್ ಜೋಡೋ ಯಾತ್ರೆ’ಯು ಗುರುವಾರ ಪಂಜಾಬ್‌ನಿಂದ ಜಮ್ಮುವಿಗೆ ಪ್ರವೇಶಿಸಿದೆ. ಇದು ಯಾತ್ರೆಯ ಕೊನೆಯ ರಾಜ್ಯವಾಗಿರಲಿದೆ. ಇಂತಹ ಚಳಿಗಾಲದಲ್ಲೂ ಉತ್ತರ ಭಾರತದಾದ್ಯಂತ ಕೇವಲ ಟೀ ಶರ್ಟ್ ಧರಿಸಿಯೇ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೊದಲ ಬಾರಿಗೆ ಜಾಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಳಗ್ಗೆಯಿಂದ ಜಮ್ಮುವಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿರುವುದರಿಂದ ರಾಹುಲ್ ಗಾಂಧಿ ಜಾಕೇಟ್ ಧರಿಸಿದ್ದರು ಎಂದು ಹೇಳಲಾಗುತ್ತದೆ. ನಂತರ ಅವರು ಜಾಕೆಟ್ ತೆಗೆದು, ಎಮದಿನಂತೆ ಬಿಳಿ ಟೀ ಶರ್ಟ್‌ನಲ್ಲಿ ನಡೆಯುತ್ತಿರುವುದು ಕಂಡುಬಂದಿತು.

ಭಾರತ್ ಜೋಡೊ ಯಾತ್ರೆ ಇಂದು 125 ದಿನಗಳನ್ನು ಪೂರೈಸಿದ್ದು, ಒಟ್ಟು 3,400 ಕಿಲೋಮೀಟರ್‌ಗಳ ದೂರ 52ವರ್ಷದ ರಾಹುಲ್ ಗಾಂಧಿಯವರು ಯಾತ್ರೆಯನ್ನು ಮುನ್ನಡೆಸಿದ್ದಾರೆ. ಈ ಯಾತ್ರೆಯುದ್ದಕ್ಕೂ ಬಿಳಿ ಬಣ್ಣದ ಟಿಶರ್ಟ್ಸ್‌ಗಳಿಂದಲೇ ಎಲ್ಲರ ಗಮನ ಸೆಳೆದಿದ್ದ ರಾಹುಲ್ ಅನೇಕರ ಮೆಚ್ಚುಗೆ ಗಳಿಸಿದ್ದಾರೆ. ರಾಹುಲ್ ಗಾಂಧಿಯವರ ಆಕರ್ಷಕ ಉಡುಪು ವಿರೋಧ ಪಕ್ಷಗಳಿಗೆ ಕೆರಳಿಸಿದ್ದಂತು ಸುಳ್ಳಲ್ಲ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ ಎಂದು ತಿರುಚಿದ ವಿಡಿಯೋ ಪೋಸ್ಟ್: ಬಿಜೆಪಿ ಮುಖಂಡನ ಮೇಲೆ FIR

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಜನವರಿ 25 ರಂದು ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್‌ನಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಎರಡು ದಿನಗಳ ನಂತರ – ಜನವರಿ 27 ರಂದು ಅನಂತನಾಗ್ ಮೂಲಕ ಶ್ರೀನಗರವನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಸ್ವಾಗತಿಸುವ ಕಾರ್ಯಕ್ರಮದ ವೇಳೆ ವೇದಿಕೆಗೆ ಜೈರಾಮ್ ರಮೇಶ್, ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್, ಅಬ್ದುಲ್ಲಾ, ಶಿವಸೇನಾ ನಾಯಕ ಸಂಜಯ್ ರಾವುತ್, ಡೋಗ್ರಾ ಸ್ವಾಭಿಮಾನ್ ಸಂಘಟನೆ ಪಕ್ಷ ಮತ್ತು ಮಾಜಿ ಸಚಿವ ಲಾಲ್ ಸಿಂಗ್, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮುಜಾಫರ್ ಶಾ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಸ್ವಾಗತಿಸಲಾಯಿತು.

ಆದರೆ ಲಾಲ್ ಸಿಂಗ್ ಅವರು ತಡವಾಗಿ ಬಂದಿದ್ದರಿಂದ ವೇದಿಕೆಯಲ್ಲಿ ಹಾಜರಿರಲಿಲ್ಲ. ತಡವಾಗಿ ಬಂದ ಅವರು, ಸಮಾರಂಭ ಮುಗಿಯುವವರೆಗೂ ಜನರ ಗುಂಪಿನಲ್ಲಿಯೇ ನಿಂತಿರುವುದು ಕಂಡುಬಂದಿತು. ಕಾರ್ಯಕ್ರಮಕ್ಕೆ ಆಗಮಿಸಿದ ನಾಯಕರಿಗೆ ಕೃತಜ್ಞತೆ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಲಾಲ್ ಸಿಂಗ್ ಹೆಸರನ್ನು ಉಲ್ಲೇಖಿಸಲಿಲ್ಲ. ಹಾಗಾಗಿ ಮುಜುಗರಕ್ಕೀಡಾಗಿ ಅಲ್ಲಿಂದ ಅವರು ಹೊರಟುಹೋದರು.

ಇಂದು ಬೆಳಿಗ್ಗೆ ಕಥುವಾದ ಹಟ್ಲಿ ಮೋರ್ಹ್‌ನಿಂದ ಪುನರಾರಂಭಗೊಂಡ ಯಾತ್ರೆಗೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಗಾಂಧಿ ಕುಟುಂಬ ಮತ್ತು ಅವರ ಸಹ-ಹಿಂಬಾಲರನ್ನು ಸುತ್ತುವರಿದಿವೆ. ಕೆಲವೆಡೆ ಜಾಮರ್‌ಗಳನ್ನೂ ಹಾಕಲಾಗಿದೆ. ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹೆಚ್ಚು ಜನ ಸೇರಿ ಪಾದಯಾತ್ರೆ ನಡೆಸದಂತೆ ಭದ್ರತಾ ಏಜೆನ್ಸಿಗಳು ರಾಹುಲ್ ಗಾಂಧಿಗೆ ಈ ಹಿಂದೆ ಸಲಹೆ ನೀಡಿದ್ದವು.

ರಾಹುಲ್ ಗಾಂಧಿಯವರು ಜಮ್ಮು ಪ್ರವೇಶಿಸಿದಾಗ ಕಾಶ್ಮೀರಿ ಪ್ರಮುಖ ನಾಯಕ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭವ್ಯ ಸ್ವಾಗತ ಕೋರಿದ್ದಾರೆ. ಲಖನ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ, ರಾಹುಲ್ ಗಾಂಧಿ ಅವರು ಜನರೊಂದಿಗೆ ಸ್ವರಮೇಳವನ್ನು ಭಾರಿಸಲು ತಮ್ಮ ಕಾಶ್ಮೀರಿ ಪೂರ್ವಜರನ್ನು ಕರೆದರು. ಈ ವೇಳೆ ಅಲ್ಲಿಯ ನಿವಾಸಿಗಳ ನೋವು ಮತ್ತು ಸಂಕಟಗಳ ಬಗ್ಗೆ ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಂಜಾಬ್‌ನ ಮಾಧೋಪುರದಲ್ಲಿ ರಾಹುಲ್ ಗಾಂಧಿಗೆ ಹಾಡು ಮತ್ತು ನೃತ್ಯದ ನಡುವೆ ಭವ್ಯವಾದ ಸ್ವಾಗತವನ್ನು ನೀಡಲಾಯಿತು. ಕೊನೆಯ ಹಂತಕ್ಕೆ ಪ್ರವೇಶಿಸುವ ಯಾತ್ರೆಯನ್ನು ನೂರಾರು ಜನರು ಸೇರಿ ಬರಮಾಡಿಕೊಂಡರು. ಜನವರಿ 30 ರಂದು ಶ್ರೀನಗರದಲ್ಲಿ ಸಮಾರೋಪ ಕಾರ್ಯಕ್ರಮದೊಂದಿಗೆ ಯಾತ್ರೆ ಮುಕ್ತಾಯಗೊಳ್ಳಲಿದೆ.

(ರಾತ್ರಿ ಚಡ್ವಾಲ್‌ನಲ್ಲಿ ಯಾತ್ರೆ ನಿಲ್ಲಲಿದೆ. ನಾಳೆ ಬೆಳಗ್ಗೆ ಹೀರಾನಗರದಿಂದ ದುಗ್ಗರ್ ಹವೇಲಿಗೆ ಹೊರಟು ಜನವರಿ 22ರಂದು ವಿಜಯಪುರದಿಂದ ಸತ್ವಾರಿಗೆ ತೆರಳಲಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....