Homeಮುಖಪುಟಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ...

ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ ಬೆದರಿಕೆ

- Advertisement -
- Advertisement -

ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ ಎಂದು ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಬಹಿರಂಗ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಜನವರಿ 20 ರಂದು ನಡೆಯುತ್ತಿರುವ ರಾಘೋಘಡ್ ನಗರ ಸ್ಥಳೀಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸೇರುವಂತೆ ಅವರು ಧಮಕಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಗುಣ ಜಿಲ್ಲೆಯ ರುಥಿಯಾಯ್ ಪಟ್ಟಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಮಹೇಂದ್ರ ಸಿಂಗ್ ಸಿಸೋಡಿಯಾ “ಕಾಂಗ್ರೆಸ್ಸಿಗರೆ ನಮ್ಮ ಕಡೆಗೆ ಸೇರಿಕೊಳ್ಳಿ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ… ಮಾಮನ ಬುಲ್ಡೋಜರ್ ಸಿದ್ಧವಾಗಿದೆ” ಎಂದು ಬೆದರಿಕೆಯ ರೀತಿಯಲ್ಲಿ ಹೇಳಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗುಣ ಜಿಲ್ಲಾ ಕಾಂಗ್ರೆಸ್ ಮುಖ್ಯಸ್ಥ ಹರಿಶಂಕರ್ ವಿಜಯವರ್ಗಿಯಾ, “ಸಿಸೋಡಿಯಾ ಅವರು ಸ್ವಲ್ಪ ತಾಳ್ಮೆಯಿಂದ ನಡೆದುಕೊಳ್ಳಬೇಕು. ಏಕೆಂದರೆ ಜನವರಿ 20 ರಂದು ರಾಘೋಗಢ್ ನಗರ ಸ್ಥಳೀಯ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಉತ್ತರವನ್ನು ನೀಡಲಿದ್ದಾರೆ” ಎಂದಿದ್ದಾರೆ.

ತಮ್ಮ ವಿರೋಧಿಗಳ, ಅಲ್ಪಸಂಖ್ಯಾತರರ ಅಥವಾ ಆರೋಪಿಗಳ ಮನೆಗಳನ್ನು ಬುಲ್ಡೋಜರ್‌ಗಳ ಮೂಲಕ ಧ್ವಂಸಗೊಳಿಸುವ ಕ್ರಮದ ಮೂಲಕ ತಮ್ಮ ಬೆಂಬಲಿಗರಿಂದ ಮಧ್ಯಪ್ರದೇಶದ ಸಿಎಂ ಶಿವರಾಜ್‌ಸಿಂಗ್ ಚೌಹಾಣ್ ಬುಲ್ಡೋಜರ್ ಮಾಮಾ ಎಂದು ಕರೆಸಿಕೊಳ್ಳುತ್ತಿದ್ದಾರೆ. ಮಾಫಿಯಾಗಳನ್ನು ಮಟ್ಟ ಹಾಕಲು ಈ ಕ್ರಮ ಅನಿವಾರ್ಯ ಎಂದು ಅವರು ಆ ಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಯಾವ ಕಾನೂನಿನಲ್ಲಿಯೂ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಲು ಅವಕಾಶವಿಲ್ಲ.

ನಮ್ಮ ದೇಶದಲ್ಲಿ ಪ್ರಜೆಗಳಾದ ನಾವು ನಮಗೆ ಅರ್ಪಿಸಿಕೊಂಡು ಸಂವಿಧಾನವನ್ನು ಜಾರಿಗೆ ತಂದಿದ್ದೇವೆ. ಅದರ ಪ್ರಕಾರ ಕಾನೂನುಗಳಿದ್ದು, ಯಾವುದೇ ಜನರ ವಿರುದ್ಧ ಯಾವುದೇ ಆರೋಪ ಕೇಳಿಬಂದಾಗ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ಶಿಕ್ಷೆ ವಿಧಿಸುವ ಒಂದು ಸಾಂವಿಧಾನಿಕ ಪ್ರಕ್ರಿಯೆ ಇಲ್ಲಿದೆ. ಆದರೆ ಅದನ್ನು ಗಾಳಿಗೆ ತೂರುತ್ತಿರುವ ಬಿಜೆಪಿ ಸರ್ಕಾರ ಮುಸ್ಲಿಮರನ್ನು, ವಿರೋಧ ಪಕ್ಷದವರನ್ನು ಟಾರ್ಗೆಟ್ ಮಾಡಿ ಅವರ ಮನೆ ಉರುಳಿಸುತ್ತಿದೆ. Instant Justice (ತ್ವರಿತ ನ್ಯಾಯ) ಪರಿಕಲ್ಪನೆಯ ನಕಲಿ ಎನ್‌ಕೌಂಟರ್‌ಗಳಂತೆ, ನಕಲಿ ಡೆಮೊಲಿಶಗಳು ನಡೆಯುತ್ತಿವೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಒಂದು ಗುಂಪು ಮತ್ತು ಮಾಧ್ಯಮಗಳು ಅದನ್ನು ಸಂಭ್ರಮಿಸುವಂತೆ ನೋಡಿಕೊಳ್ಳುವ ಮೂಲಕ, ಒಪ್ಪಿಗೆಯ ಮುದ್ರೆಯೊತ್ತಲಾಗುತ್ತದೆ. ಆ ಮೂಲಕ ಬಿಜೆಪಿ ಬಹುಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟು ತನ್ನ ಅಧಿಕಾರ ಭದ್ರಗೊಳಿಸಿಕೊಳ್ಳುತ್ತಿದೆ. ಬಹುಸಂಖ್ಯಾತರ ಒಪ್ಪಿಗೆಯ ಮೇರೆಗೆ ಅಲ್ಪಸಂಖ್ಯಾತರನ್ನು ಮತ್ತು ದಮನಿತ ವರ್ಗವನ್ನು ಶೋಷಿಸುವ ಈ ಪ್ರಕ್ರಿಯೆಗೆ ಜಗತ್ತಿನಾದ್ಯಂತ ಫ್ಯಾಸಿಸಂ ಎಂದು ಕರೆಯಲಾಗುತ್ತದೆ. ಅದೀಗ ಭಾರತದಲ್ಲಿ ಬೇರು ಬಿಡುತ್ತಿದೆ.

ಇದನ್ನೂ ಓದಿ: ಹೋರಾಟಕ್ಕೆ ಪ್ರತೀಕಾರವಾಗಿ ಬುಲ್ಡೋಜರ್; ಬಿಜೆಪಿಯ ಕೀಳು ರಾಜಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...