Homeಮುಖಪುಟಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ...

ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ ಬೆದರಿಕೆ

- Advertisement -
- Advertisement -

ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ ಎಂದು ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಬಹಿರಂಗ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಜನವರಿ 20 ರಂದು ನಡೆಯುತ್ತಿರುವ ರಾಘೋಘಡ್ ನಗರ ಸ್ಥಳೀಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸೇರುವಂತೆ ಅವರು ಧಮಕಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಗುಣ ಜಿಲ್ಲೆಯ ರುಥಿಯಾಯ್ ಪಟ್ಟಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಮಹೇಂದ್ರ ಸಿಂಗ್ ಸಿಸೋಡಿಯಾ “ಕಾಂಗ್ರೆಸ್ಸಿಗರೆ ನಮ್ಮ ಕಡೆಗೆ ಸೇರಿಕೊಳ್ಳಿ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ… ಮಾಮನ ಬುಲ್ಡೋಜರ್ ಸಿದ್ಧವಾಗಿದೆ” ಎಂದು ಬೆದರಿಕೆಯ ರೀತಿಯಲ್ಲಿ ಹೇಳಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗುಣ ಜಿಲ್ಲಾ ಕಾಂಗ್ರೆಸ್ ಮುಖ್ಯಸ್ಥ ಹರಿಶಂಕರ್ ವಿಜಯವರ್ಗಿಯಾ, “ಸಿಸೋಡಿಯಾ ಅವರು ಸ್ವಲ್ಪ ತಾಳ್ಮೆಯಿಂದ ನಡೆದುಕೊಳ್ಳಬೇಕು. ಏಕೆಂದರೆ ಜನವರಿ 20 ರಂದು ರಾಘೋಗಢ್ ನಗರ ಸ್ಥಳೀಯ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಉತ್ತರವನ್ನು ನೀಡಲಿದ್ದಾರೆ” ಎಂದಿದ್ದಾರೆ.

ತಮ್ಮ ವಿರೋಧಿಗಳ, ಅಲ್ಪಸಂಖ್ಯಾತರರ ಅಥವಾ ಆರೋಪಿಗಳ ಮನೆಗಳನ್ನು ಬುಲ್ಡೋಜರ್‌ಗಳ ಮೂಲಕ ಧ್ವಂಸಗೊಳಿಸುವ ಕ್ರಮದ ಮೂಲಕ ತಮ್ಮ ಬೆಂಬಲಿಗರಿಂದ ಮಧ್ಯಪ್ರದೇಶದ ಸಿಎಂ ಶಿವರಾಜ್‌ಸಿಂಗ್ ಚೌಹಾಣ್ ಬುಲ್ಡೋಜರ್ ಮಾಮಾ ಎಂದು ಕರೆಸಿಕೊಳ್ಳುತ್ತಿದ್ದಾರೆ. ಮಾಫಿಯಾಗಳನ್ನು ಮಟ್ಟ ಹಾಕಲು ಈ ಕ್ರಮ ಅನಿವಾರ್ಯ ಎಂದು ಅವರು ಆ ಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ ಯಾವ ಕಾನೂನಿನಲ್ಲಿಯೂ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಲು ಅವಕಾಶವಿಲ್ಲ.

ನಮ್ಮ ದೇಶದಲ್ಲಿ ಪ್ರಜೆಗಳಾದ ನಾವು ನಮಗೆ ಅರ್ಪಿಸಿಕೊಂಡು ಸಂವಿಧಾನವನ್ನು ಜಾರಿಗೆ ತಂದಿದ್ದೇವೆ. ಅದರ ಪ್ರಕಾರ ಕಾನೂನುಗಳಿದ್ದು, ಯಾವುದೇ ಜನರ ವಿರುದ್ಧ ಯಾವುದೇ ಆರೋಪ ಕೇಳಿಬಂದಾಗ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ಶಿಕ್ಷೆ ವಿಧಿಸುವ ಒಂದು ಸಾಂವಿಧಾನಿಕ ಪ್ರಕ್ರಿಯೆ ಇಲ್ಲಿದೆ. ಆದರೆ ಅದನ್ನು ಗಾಳಿಗೆ ತೂರುತ್ತಿರುವ ಬಿಜೆಪಿ ಸರ್ಕಾರ ಮುಸ್ಲಿಮರನ್ನು, ವಿರೋಧ ಪಕ್ಷದವರನ್ನು ಟಾರ್ಗೆಟ್ ಮಾಡಿ ಅವರ ಮನೆ ಉರುಳಿಸುತ್ತಿದೆ. Instant Justice (ತ್ವರಿತ ನ್ಯಾಯ) ಪರಿಕಲ್ಪನೆಯ ನಕಲಿ ಎನ್‌ಕೌಂಟರ್‌ಗಳಂತೆ, ನಕಲಿ ಡೆಮೊಲಿಶಗಳು ನಡೆಯುತ್ತಿವೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಒಂದು ಗುಂಪು ಮತ್ತು ಮಾಧ್ಯಮಗಳು ಅದನ್ನು ಸಂಭ್ರಮಿಸುವಂತೆ ನೋಡಿಕೊಳ್ಳುವ ಮೂಲಕ, ಒಪ್ಪಿಗೆಯ ಮುದ್ರೆಯೊತ್ತಲಾಗುತ್ತದೆ. ಆ ಮೂಲಕ ಬಿಜೆಪಿ ಬಹುಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟು ತನ್ನ ಅಧಿಕಾರ ಭದ್ರಗೊಳಿಸಿಕೊಳ್ಳುತ್ತಿದೆ. ಬಹುಸಂಖ್ಯಾತರ ಒಪ್ಪಿಗೆಯ ಮೇರೆಗೆ ಅಲ್ಪಸಂಖ್ಯಾತರನ್ನು ಮತ್ತು ದಮನಿತ ವರ್ಗವನ್ನು ಶೋಷಿಸುವ ಈ ಪ್ರಕ್ರಿಯೆಗೆ ಜಗತ್ತಿನಾದ್ಯಂತ ಫ್ಯಾಸಿಸಂ ಎಂದು ಕರೆಯಲಾಗುತ್ತದೆ. ಅದೀಗ ಭಾರತದಲ್ಲಿ ಬೇರು ಬಿಡುತ್ತಿದೆ.

ಇದನ್ನೂ ಓದಿ: ಹೋರಾಟಕ್ಕೆ ಪ್ರತೀಕಾರವಾಗಿ ಬುಲ್ಡೋಜರ್; ಬಿಜೆಪಿಯ ಕೀಳು ರಾಜಕೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...