Homeಮುಖಪುಟಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ಸಲಿಂಗಾಸಕ್ತ ಕಿರ್ಪಾಲ್‌ರನ್ನು ನ್ಯಾಯಾಧೀಶರನ್ನಾಗಿಸಲು ಕೇಂದ್ರದಿಂದ ಮತ್ತೇ ಆಕ್ಷೇಪ; ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

- Advertisement -
- Advertisement -

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸಲಿಂಗಾಸಕ್ತ, ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಹೆಸರನ್ನು ಎರಡನೇ ಬಾರಿಗೆ ಪುನರುಚ್ಚರಿಸಲು ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, RAW “ಆಕ್ಷೇಪಣೆಗಳನ್ನು” ತಿರಸ್ಕರಿಸಿದೆ.

ಸ್ವಿಸ್ ಪ್ರಜೆ ನಿಕೋಲಸ್ ಜರ್ಮೈನ್ ಬ್ಯಾಚ್‌ಮನ್‌ನೊಂದಿಗಿನ ಕಿರ್ಪಾಲ್ ಅವರ ಜೊತೆ ಸಲಿಂಗಾಸಕ್ತಿ ಸಂಬಂಧ ಹೊಂದಿದ್ದಾರೆ. ಹಾಗಾಗಿ ಈ ಬಗ್ಗೆ RAW ಆತಂಕ ವ್ಯಕ್ತಪಡಿಸಿದೆ. ಮತ್ತೊಂದೆಡೆ ಕಾನೂನು ಸಚಿವಾಲಯವು ಕಿರ್ಪಾಲ್ ಅವರ ಸರ್ಕಾರದ ವಿರುದ್ಧದ ಹೋರಾಟ ಮತ್ತು ಸಲಿಂಗಾಸಕ್ತಿಯ ವಿಚಾರವನ್ನು ಇಟ್ಟುಕೊಂಡು ಆಕ್ಷೇಪಿಸಿದೆ. ಅಷ್ಟೇ ಅಲ್ಲದೇ ಸಲಿಂಗಿಯ ಜೊತೆಗಿರುವುದು ವಿವಾಹವಲ್ಲ ಎಂದು ಹೇಳಿದೆ. ಆದರೆ ಭಾರತದಲ್ಲಿ ಸಲಿಂಗಿಗಳು ಮದುವೆಯಾಗುವುದನ್ನು ಕಾನೂನು ಬದ್ಧಗೊಳಿಸಲಾಗಿದೆ.

“ಎರಡು ದೇಶದವರು ಮದುವೆಯಾದರೆ, ಅವರು ಭಾರತದ ವಿರುದ್ಧ ಕೆಲಸ ಮಾಡುತ್ತಾರೆ ಹಾಗಾಗಿ ಅದು ರಾಷ್ಟ್ರೀಯ ಭದ್ರತೆಯ ಧಕ್ಕೆಯಾಗುತ್ತದೆ ಎಂದು RAW ಊಹಿಸಿರುವುದು ಸರಿಯಲ್ಲ” ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವವರು ವಿದೇಶಿ ಪ್ರಜೆಗಳನ್ನು ಸಂಗಾತಿಗಳಾಗಿ ಹೊಂದಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಕೆಆರ್ ನಾರಾಯಣನ್ ಮತ್ತು ಪ್ರಸ್ತುತ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಹೆಸರನ್ನು ಉಲ್ಲೇಖಿಸಿದೆ. ತಾತ್ವಿಕವಾಗಿ, ಕಿರ್ಪಾಲ್ ಅವರ ಸಂಗಾತಿಯು ವಿದೇಶಿ ಪ್ರಜೆ ಎಂಬ ಕಾರಣದ ಉಮೇದುವಾರಿಕೆಗೆ ಯಾವುದೇ ಆಕ್ಷೇಪಣೆ ಇರುವಂತಿಲ್ಲ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರ ಸಲಿಂಗಾಸಕ್ತದ ಕಾರಣ ಹೇಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ನವತೇಜ್ ಜೋಹರ್ ಸಾಂವಿಧಾನಿಕ ಪೀಠದ ತೀರ್ಪಿನ ಬಗ್ಗೆ ನೆನಪಿಸಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಪ್ರತಿಯೊಬ್ಬ ವ್ಯಕ್ತಿಯು ತನ್ನದೇ ಆದ ಘನತೆ ಮತ್ತು ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳಲು ಅರ್ಹನಾಗಿದ್ದಾನೆ ಎಂದು ತೀರ್ಪು ನೀಡಿತು. ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ನ್ಯಾಯಾಧೀಶರಾಗಲು ಅವರ ಉಮೇದುವಾರಿಕೆಯನ್ನು ತಿರಸ್ಕರಿಸುವುದು” ಸುಪ್ರೀಂ ಕೋರ್ಟ್ ಸ್ಥಾಪಿಸಿದ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಕೇಂದ್ರ ಸರ್ಕಾರಕ್ಕೆ ಬುದ್ದಿ ಹೇಳಿದೆ.

ಇದನ್ನೂ ಓದಿ: ಸಲಿಂಗಾಸಕ್ತ ಸೌರಭ್‌ರನ್ನು ನ್ಯಾಯಾಧೀಶರನ್ನಾಗಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬೆಂಬಲ

“ಕಿರ್ಪಾಲ್ ಸಾಮರ್ಥ್ಯ, ಸಮಗ್ರತೆ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದಾರೆ. ಅವರ ನೇಮಕಾತಿಯು ದೆಹಲಿ ಹೈಕೋರ್ಟ್‌ನ ಪೀಠಕ್ಕೆ ಮೌಲ್ಯವನ್ನು ಸೇರಿಸುತ್ತದೆ ಮತ್ತು ವೈವಿಧ್ಯತೆಯನ್ನು ಒದಗಿಸುತ್ತದೆ. ಅವರ ನಡತೆ ಮತ್ತು ನಡವಳಿಕೆಯು ಮೇಲ್ಮಟ್ಟದಲ್ಲಿದೆ.” ಎಂದು ಕೊಲಿಜಿಯಂ ಹೇಳಿದೆ.

ಕಿರ್ಪಾಲ್ ಅವರು ತಮ್ಮ ಲೈಂಗಿಕ ದೃಷ್ಟಿಕೋನದ ಕಾರಣಕ್ಕಾಗಿ ಸರ್ಕಾರ ತನ್ನ ನೇಮಕಾತಿಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿ ಮಾಧ್ಯಮಗಳೊಂದಿಗೆ ಇನ್ನುಮುಂದೆ ಮಾತನಾಡದಿದ್ದರೆ ಉತ್ತಮ ಎಂದು ಅದು ಹೇಳಿದೆ. ಆದಾಗ್ಯೂ, ಐದು ವರ್ಷಗಳ ಕಾಲ ತನ್ನ ಹೆಸರನ್ನು ಸ್ಥಗಿತಗೊಳಿಸುವುದರಿಂದ ಕಿರ್ಪಾಲ್‌ ಅವರಿಗೆ ಸಾಕಷ್ಟು ನೋವು ಮತ್ತು ವೇದನೆ ಅನುಭವಿಸಿದ್ದಾರೆ ಎನ್ನುವುದನ್ನು ಕೊಲಿಜಿಯಂ ಅರ್ಥಮಾಡಿಕೊಂಡಿದೆ.

ಅಕ್ಟೋಬರ್ 13, 2017 ರಂದು ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ನ್ಯಾಯಾಧೀಶರಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ಗೆ ಕಳುಹಿಸಿದೆ. ಅದರಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ಹೆಸರನ್ನು ನಾಲ್ಕು ಸಂದರ್ಭಗಳಲ್ಲಿ ಪರಿಗಣಿಸಿದೆ – ಸೆಪ್ಟೆಂಬರ್ 4, 2018, ಜನವರಿ 16, 2019, ಏಪ್ರಿಲ್ 1, 2019 ಮತ್ತು ಮಾರ್ಚ್ 2 ರಂದು , 2021. ಪ್ರತಿ ಬಾರಿಯೂ, ಕಿರ್ಪಾಲ್ ಅವರ ವಿದೇಶಿ ಸಂಗಾತಿಯೊಂದಿಗಿನ ಸಂಬಂಧದಿಂದ ರಾಷ್ಟೀಯ ಭದ್ರತೆಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಊಹೆಯ ವರದಿಯನ್ನು ಕೇಂದ್ರ ಸರ್ಕಾರ ದಾಖಲಿಸಿ ವಿರೋಧಿಸಿತ್ತು ಹಾಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೂಡ ನಿರ್ಧಾರ ತೆಗೆದುಕೊಳ್ಳುವುದನ್ನು ಮುಂದೂಡಿತು.

ನವೆಂಬರ್ 11, 2021 ರಂದು, ಆಗಿನ ಸಿಜೆಐ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಕಿರ್ಪಾಲ್ ಅವರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತು. ಅದನ್ನು ಸರ್ಕಾರವು ನವೆಂಬರ್ 25, 2022 ರಂದು ಹಿಂದಿರುಗಿಸಿತು. ಜನವರಿ 18, 2023 ರಂದು, ಸುಪ್ರೀಂ ಕೋರ್ಟ್ ಅವರ ಹೆಸರನ್ನು ಪುನರುಚ್ಚರಿಸಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಏಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ. ಆದರೆ ಸರ್ಕಾರ ಮಾತ್ರ ಇವರ ನೇಮಕಕ್ಕೆ ಪ್ರತಿಬಾರಿಯೂ ಆಕ್ಷೇಪಗಳನ್ನು ಸಲ್ಲಿಸುತ್ತಲೇ ಇದೆ. ಆಕ್ಷೇಪಗಳನ್ನು ತಿರಸ್ಕರಿಸುವುದರ ಜೊತೆಗೆ ಸರ್ಕಾರಕ್ಕೆ ಸುಪ್ರೀ ಕೋರ್ಟ್ ಚಾಟಿ ಬೀಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....