Homeಮುಖಪುಟಪ್ರತಿಭಟನಾ ನಿರತ ಕುಸ್ತಿಪಟುಗಳಿಂದ ಕೇಂದ್ರ ಕ್ರೀಡಾ ಸಚಿವರ ಭೇಟಿ; ಸಭೆ ವಿಫಲ; ಪ್ರತಿಭಟನೆ ಹೆಚ್ಚಿಸುವುದಾಗಿ ಎಚ್ಚರಿಕೆ

ಪ್ರತಿಭಟನಾ ನಿರತ ಕುಸ್ತಿಪಟುಗಳಿಂದ ಕೇಂದ್ರ ಕ್ರೀಡಾ ಸಚಿವರ ಭೇಟಿ; ಸಭೆ ವಿಫಲ; ಪ್ರತಿಭಟನೆ ಹೆಚ್ಚಿಸುವುದಾಗಿ ಎಚ್ಚರಿಕೆ

ಕುಸ್ತಿಪಟುಗಳು ಕುಸ್ತಿ ಒಕ್ಕೂಟದ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ

- Advertisement -
- Advertisement -

ಕ್ರೀಡಾ ಆಡಳಿತ ಮಂಡಳಿಯ ಮುಖ್ಯಸ್ಥರು ಮತ್ತು ಅದರ ತರಬೇತುದಾರರು ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರ ಸಚಿವ ಅನುರಾಗ್ ಠಾಕೂರ್ ಗುರುವಾರ ಭಾರತದ ಖ್ಯಾತ ಕುಸ್ತಿಪಟುಗಳನ್ನು ಭೇಟಿಯಾಗಿದ್ದಾರೆ. ಆದರೆ ಸಭೆಯಲ್ಲಿ ಯಾವುದೆ ನಿರ್ಣಯವನ್ನು ತೆಗೆದುಕೊಳ್ಳದ ಕಾರಣ ಸಭೆಯು ವಿಫವಾಗಿದೆ.

ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತೀಯ ಕುಸ್ತಿ ಒಕ್ಕೂಟವನ್ನು ವಿಸರ್ಜಿಸುವ ಮತ್ತು ಸಂಸ್ಥೆಯ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತನಿಖೆ ನಡೆಸಬೇಕು ಎಂಬ ಆಟಗಾರರು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪ್ರತಿಭಟನೆಯನ್ನು ಹೆಚ್ಚಿಸುವುದಾಗಿ ಕುಸ್ತಿಪಟುಗಳು ಎಚ್ಚರಿಕೆ ನೀಡಿದ ಹಿನ್ನೆಲೆ ಗುರುವಾರ ಕ್ರೀಡಾ ಸಚಿವರೊಂದಿಗಿನ ಸಭೆ ನಡೆದಿದೆ ಎಂದು ವರದಿಯಾಗಿವೆ.

ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್‌ ಕುಸ್ತಿಪಟುಗಳು ಮಾಡಿರುವ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ ಕ್ರೀಡಾಪಟುಗಳು ಬ್ರಿಜ್‌‌ಭೂಷಣ್ ಅವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಕನಿಷ್ಠ 10-12 ಮಹಿಳೆಯರಿದ್ದಾರೆ ಎಂದು ಹೇಳಿದ್ದಾರೆ.

ಫೋಗಟ್ ಮತ್ತು ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಅನುರಾಗ್ ಅವರನ್ನು ಗುರುವಾರ ರಾತ್ರಿ ಅವರ ಮನೆಯಲ್ಲಿ ಭೇಟಿಯಾಗಿ ತ್ವರಿತ ಕ್ರಮಕ್ಕೆ ಕೋರಿದ್ದಾರೆ. ಕ್ರೀಡಾ ಸಚಿವಾಲಯವು ಭಾರತ ಕುಸ್ತಿ ಫೆಡರೇಶನ್‌‌ಗೆ ಆರೋಪಗಳಿಗೆ ಅಧಿಕೃತ ಪ್ರತಿಕ್ರಿಯೆ ನೀಡುವಂತೆ ಕೋರಿದ್ದು, ಅದಕ್ಕಾಗಿ ಕಾಯುವಂತೆ ಸಚಿವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಭೆಯ ಮೊದಲು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್, “ಸರ್ಕಾರವು ಕ್ರೀಡೆ ಮತ್ತು ಆಟಗಾರರ ಕಲ್ಯಾಣ ಮತ್ತು ಉನ್ನತಿಗಾಗಿ ಕೆಲಸ ಮಾಡಿದೆ. ಭಾರತವು ಸಾಕಷ್ಟು ಪದಕಗಳನ್ನು ಗೆದ್ದಿದೆ ಮತ್ತು ಜಾಗತಿಕ ಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದೆ. ಒಕ್ಕೂಟಗಳನ್ನು ಉತ್ತಮಗೊಳಿಸುವ ಕೆಲಸ ಮಾಡಲಾಗಿದೆ. ಕುಸ್ತಿಪಟುಗಳು ಮಾಡುವ ಆರೋಪಗಳು ಗಂಭೀರ ಸ್ವರೂಪದ್ದಾಗಿರುತ್ತವೆ” ಎಂದು ಹೇಳಿದ್ದಾರೆ.

ಸಚಿವರೊಂದಿಗಿನ ಭೇಟಿಗೂ ಮುನ್ನ ಗುರುವಾರ, ಕ್ರೀಡಾಪಟುಗಳು ಭಾರತೀಯ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕ ಸಂದೀಪ್ ಪ್ರಧಾನ್ ಮತ್ತು ಕ್ರೀಡಾ ಕಾರ್ಯದರ್ಶಿ ಸುಜಾತಾ ಚತುರ್ವೇದಿ ಅವರನ್ನು ಭೇಟಿಯಾಗಿದ್ದರು.

ಸರ್ಕಾರದಿಂದ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಬಂದಿಲ್ಲ ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕುಸ್ತಿಯಾಡುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದು, “ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಅವರನ್ನು ತೆಗೆದುಹಾಕಿ, ಅದರು ಜೈಲಿಗೆ ಹೋಗುವವರೆಗೂ ನಾವು ಬಿಡುವುದಿಲ್ಲ. ಒಂದು ವೇಳೆ ಸರಕಾರ ಕ್ರಮ ಕೈಗೊಳ್ಳದಿದ್ದರೆ ಪೊಲೀಸರ ಮೊರೆ ಹೋಗುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾಕಾರರು ಗುರುವಾರ ಕುಸ್ತಿಪಟು ಹಾಗೂ ಬಿಜೆಪಿ ನಾಯಕಿಯು ಆಗಿರುವ ಬಬಿತಾ ಫೋಗಟ್‌ ಅವರನ್ನು ಭೇಟಿಯಾಗಿದ್ದು ಅವರಿಂದಲೂ ಬೆಂಬಲ ಪಡೆದಿದ್ದಾರೆ. “ಕುಸ್ತಿಪಟುವಾಗಿ ನನ್ನ ವೃತ್ತಿಜೀವನದಲ್ಲಿ ನಿಂದನೆಯ ನಿದರ್ಶನಗಳನ್ನು ಅನುಭವಿಸಿದ್ದೇನೆ. ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ. ಈಗ ಎದ್ದಿರುವ ಧ್ವನಿಗಳು ಬಹಳ  ಮುಖ್ಯ” ಎಂದು ಫೋಗಟ್ ಹೇಳಿದ್ದಾರೆ

ಕುಸ್ತಿಪಟುಗಳು ತಮ್ಮ ಸ್ವಾಭಿಮಾನಕ್ಕಾಗಿ ಹೋರಾಡುತ್ತಿದ್ದಾರೆ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾದ ಕ್ರೀಡಾಪಟುಗಳೊಂದಿಗೆ ತಮ್ಮ ಗುರುತನ್ನು ಬಹಿರಂಗಪಡಿಸಲು ಒತ್ತಾಯಿಸಬೇಡಿ ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

“ನಾವು ಮುಂದೆ ಬಂದು ನಮಗೆ ಏನಾಯಿತು ಎಂದು ಹೇಳಲು ಬಯಸುವುದಿಲ್ಲ. ನಮ್ಮನ್ನು ಬಲವಂತಪಡಿಸಿದರೆ ನಮಗೆ ಹೀಗಾಯಿತು ಎಂದು ದೇಶದ ಹೆಣ್ಣುಮಕ್ಕಳು ಮಾಧ್ಯಮಗಳ ಮುಂದೆ ಪುರಾವೆಯೊಂದಿಗೆ ಬರಬೇಕಾಗಿರುವುದು ನಾಚಿಕೆಗೇಡಿನ ಸಂಗತಿ. ಆ ಕರಾಳ ದಿನವನ್ನು ನಾವು ನೋಡ ಬಯಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಹಿರಿಯ ಮಹಿಳಾ ಅಥ್ಲೆಟಿಕ್ಸ್ ತರಬೇತುದಾರರು ಹರಿಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ವಾರಗಳ ನಂತರ ಬ್ರಿಜ್‌ಭೂಷಣ್‌ ಸಿಂಗ್ ವಿರುದ್ಧ ಕುಸ್ತಿಪಟುಗಳು ಆರೋಪ ಮಾಡಿದ್ದಾರೆ. ಜನವರಿ 1 ರಂದು, ಚಂಡೀಗಢ ಪೊಲೀಸರು ಕುರುಕ್ಷೇತ್ರದ ಪೆಹೋವಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸಂದೀಪ್‌ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....