Homeಕರ್ನಾಟಕಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಚೆ’ ಎಲ್ಲಾ ಸಂಸ್ಕೃತಿಯವರನ್ನು ಸೆಳೆದ ಕ್ರಾಂತಿಕಾರಿಯಾಗಿದ್ದಾರೆ. ಬಹುತ್ವವನ್ನು ಪ್ರತಿಪಾದಿಸುವ ಈ ನೆಲದಲ್ಲಿ ಬಹುಸಂಸ್ಕೃತಿಯನ್ನು ನಾಶ ಮಾಡಲು ಹೊರಟ್ಟಿದ್ದಾರೆ. ಅಂತವರ ಅಟಾಟೋಪಕ್ಕೆ ‘ಚೆ’ ಅಭಿಮಾನಿಗಳು ಉತ್ತರ ಕೊಡುತ್ತೇವೆ ಎಂದು ಚಿಂತಕ ಮತ್ತು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸ್ಕೌಟ್ ಮತ್ತು ಗೈಡ್‌ ಸಭಾಂಗಣದಲ್ಲಿ ‘ಚೆ ಗೆವಾರ’ ಅವರ ಮಗಳು ಡಾ. ಅಲಿಡಾ ಗೆವಾರ ಮತ್ತು ಮೊಮ್ಮಗಳು ಎಸ್ತೆಫಾನಿಯಾ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚೇ ಗೆವೆರಾ ಅವರ ಮಗಳು ಮತ್ತು ಮೊಮ್ಮಗಳಿಗೆ ಕನ್ನಡದ ನೆಲದಲ್ಲಿ ನಾಗರಿಕ ಸನ್ಮಾನ ಮಾಡಿದ್ದು ಚಾರಿತ್ರಿಕ ಸಂದರ್ಭವಾಗಿದೆ. ಕರ್ನಾಟಕ ಹುಸಿ ಸಂಸ್ಕೃತಿಯ ಪರವಾಗಿಲ್ಲ, ಜನಸಂಸ್ಕೃತಿಯ ಪರವಾಗಿದೆ, ಸಂವೇದನೆಗೆ ಪೂರಕವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ” ಎಂದು ಬರಗೂರು ಹೇಳಿದರು.

ಹಿರಿಯ ವಿದ್ವಾಂಸರಾದ ಜಿ. ರಾಮಕೃಷ್ಣ ಅವರು ಮಾತನಾಡಿ, “ಯಾರದ್ದೊ ಶ್ರಮವನ್ನು ಇನ್ಯಾರೊ ಕಬಳಿಸುತ್ತಿದ್ದ ಸಂದರ್ಭದಲ್ಲಿ, ‘ಚೆ’ ತಲೆ ಮೇಲೆ ನಕ್ಷತ್ರ ಚಿಹ್ನೆಯ ಟೋಪಿ ಹಾಕಿದ ಭರವಸೆಯ ಆಶಾಕಿರಣವಾಗಿದ್ದ. ವಿಶ್ವದ ಯಾವುದೇ ಮೂಲೆಯಲ್ಲಿ ಅನ್ಯಾಯವಾಗುತ್ತಿದ್ದರೆ, ಅದರ ವಿರುದ್ಧ ದನಿ ಎತ್ತುವ ಮನುಜರು ನನ್ನ ಸಂಗಾತಿಗಳು ಎಂದು ಹೇಳಿದ್ದ” ಎಂದು ಹೇಳಿದರು.

‘‘ಇಂದು ‘ಚೆ’ ಎಂದರೇ ಇಡೀ ವಿಶ್ವ ಇವ ನಮ್ಮವ ಎನ್ನುತ್ತಿದೆ. ವಿಶ್ವಮಾನವ ಪರಿಕಲ್ಪನೆ ಹೊಂದಿದ್ದ ‘ಚೆ’ ಕ್ಯೂಬಾದ ಹವಾನದಲ್ಲಿ ‘ಪ್ರತಿಯೊಬ್ಬ ಕ್ರಾಂತಿಕಾರಿಯ ಕೆಲಸ ಕ್ರಾಂತಿ ಮಾಡುವುದೆ ಹೊರತು ಸಾಮ್ರಾಜ್ಯಶಾಹಿ ಎಂಬ ಹೆಣ ಬೀಳುತ್ತದೆ, ಅದನ್ನು ಹೊರೋಣ ಎಂದು ಕಾಯುವುದಲ್ಲ. ಗೆಲ್ಲುವವರೆಗೂ ಹೋರಾಡುತ್ತಿರಬೇಕು’ ಎಂಬ ಸಂದೇಶ ಕೊಟ್ಟಿದ್ದರು” ಎಂದು ಹೇಳಿದರು.

“ಅಮೆರಿಕದ ಸಿಎಎ ‘ಚೆ’ಯನ್ನು ಕೊಲೆ ಮಾಡಿದ್ದು ಇತಿಹಾಸದಲ್ಲಿ ಹಲವರು ರಂಜನೀಯವಾಗಿ ಚಿತ್ರಿಸಿದರೆ, ಕೆಲವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಭಾರತದಲ್ಲಿ ಮೂರನೇ ಬಾರಿಗೂ ಅಧಿಕಾರಕ್ಕೆ ಬರುತ್ತೇವೆ ಎಂದುಕೊಂಡಿರುವ ಮೋದಿಯನ್ನು ಮಹಾನಾಯಕ ಎಂದರೆ ಅಂತಹ ದೇಶ ಭ್ರಮಾತ್ಮಕವಾಗಿದೆ ಎಂದರ್ಥ. ಈ ವೇಳೆ ‘ಚೆ’ ಎಂಬ ಮಹಾನ್ ವ್ಯಕ್ತಿಯನ್ನು ಅನುಕರಿಸಲು ಎಲ್ಲರೂ ಸಾಮೂದಾಯಿಕವಾಗಿ ಪಾಲ್ಗೊಳ್ಳುವುದು ಒಂದೇ ದಾರಿ” ಎಂದು ವಿಧ್ವಾಂಸ ಜಿ. ರಾಮಕೃಷ್ಣ ಅವರು ಕರೆ ಕೊಟ್ಟಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ ಮಾತನಾಡಿ, “ಎಲ್ಲ ತಲೆಮಾರಿನ ಜನರು ‘ಚೆ’ಗೆ ಆಕರ್ಷಿತರಾಗಿದ್ದಾರೆ. ಭಾರತದ ಇಂದಿನ ಪರಿಸ್ಥಿತಿಯಲ್ಲಿ ‘ಚೆ’ ವ್ಯಕ್ತಿತ್ವ ಬಹುಮುಖ್ಯ. ಕಾವ್ಯ ಮತ್ತು ಕೋವಿಯನ್ನು ಪ್ರೀತಿಯಿಂದ ಜೊತೆಗಿರಿಸಿಕೊಂಡ ಚೇತನ ನಮ್ಮೊಳಗೂ ಮೂಡಲಿ” ಎಂದು ಆಶಿಸಿದರು.

ಅಪ್ಪನ ನೆನಪಿನ ಬುತ್ತಿ ತೆರೆದು ಹಾಡು ಹಾಡಿದ ಚೆ ಗೆವಾರ ಪುತ್ರಿ!

“ನನ್ನಪ್ಪ ತುಂಬಾ ಒಳ್ಳೆಯ ಕವಿಯಾಗಿದ್ದರು, ಹಲವು ಪುಸ್ತಕಗಳನ್ನು, ಕವಿತೆಗಳನ್ನು ಓದುತ್ತಿದ್ದರು. ಆದರೆ ಅವರು ತಮ್ಮ ಕವಿತೆಗಳನ್ನು ತಾವೆ ಓದುತ್ತಿರಲಿಲ್ಲ. ಯಾಕೆಂದರೆ ಅವರೊಳಗೊಬ್ಬ ವಿಮರ್ಶಕನಿದ್ದ” ಎಂದು 7ನೇ ವಯಸ್ಸಿಗೆ ಅಪ್ಪನನ್ನು ಕಳೆದುಕೊಂಡಿರುವ ಅಲಿಡಾ, ತಮ್ಮ ನೆನಪುಗಳ ಬುತ್ತಿಯನ್ನು ತೆರೆದಿಟ್ಟರು.

“ಅಸ್ತಮಾ ಇದ್ದ ಕಾರಣ ವೈದ್ಯರು ದಿನಕ್ಕೆ ಒಂದೇ ಸಿಗಾರ್ ಸೇದುವಂತೆ ಅಪ್ಪನಿಗೆ ಸೂಚಿಸಿದ್ದರು. ಆದರೆ, ಅಪ್ಪನಿಗೆ ತಂಬಾಕು ತೋಟದ ಕಾರ್ಮಿಕರು ದೊಡ್ಡ ಗಾತ್ರದ ಸಿಗಾರ್ ಮಾಡಿಕೊಟ್ಟಿದ್ದರು. ಅದನ್ನು ಸೇದಿ ವೈದ್ಯರಿಗೆ ಒಂದೇ ಸಿಗಾರ್ ಸೇದಿದೆ ಎಂದು ಫೋನ್ ಮಾಡಿ ಹೇಳುತ್ತಿದ್ದರು” ಎಂದು ಅಪ್ಪ ಅದೆಷ್ಟು ಉಡಾಫೆತನ ತೋರುತ್ತಿದ್ದರೆಂಬುದನ್ನು ಅವರು ವಿವರಿಸಿದರು.

“ಕೊರೋನಾ ಸೋಂಕು‌ ನಿಯಂತ್ರಿಸಲು ಕ್ಯೂಬಾ ತನ್ನದೆ ಆದ ವ್ಯಾಕ್ಸಿನ್ ಕಂಡು ಹಿಡಿದಿತ್ತು. ಆದರೆ ಅಮೇರಿಕಾ ಪೇಟೆಂಟ್ ಕಾರಣಕ್ಕೆ ಸಿರಿಂಜ್ ಕೊಳ್ಳಲು ಸಾಧ್ಯವಿರಲಿಲ್ಲ. ಹಾಗಾಗಿ ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್ ಅನ್ನು ಕಂಡುಕೊಂಡೆವು. ನಾವು ಯಾವಾಗಲೂ ಪರ್ಯಾಯವನ್ನು ಹುಡುಕುತ್ತೇವೆ” ಎಂದು ತಮ್ಮ ದೇಶದ ಸ್ವಾಭಿಮಾನದ ಬಗ್ಗೆ ಅಭಿಮಾನದಿಂದ ನುಡಿದರು. ಭಾಷಣದ ಕೊನೆಯಲ್ಲಿ ಅಲಿಡಾ ಹಾಡನ್ನು ಕೂಡಾ ಹಾಡಿದರು.

ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಹಿರಿಯ ಲೇಖಕಿ ಡಾ. ವಿಜಯಾ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ದಲಿತ ಹಕ್ಕುಗಳ ಮುಖಂಡ ಮಾವಳ್ಳಿ ಶಂಕರ್, ಜನವಾದಿ ಮಹಿಳಾ ಸಂಘಟನೆ ನಾಯಕಿ ವಿಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...