Homeಕರ್ನಾಟಕಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಚೆ’ ಎಲ್ಲಾ ಸಂಸ್ಕೃತಿಯವರನ್ನು ಸೆಳೆದ ಕ್ರಾಂತಿಕಾರಿಯಾಗಿದ್ದಾರೆ. ಬಹುತ್ವವನ್ನು ಪ್ರತಿಪಾದಿಸುವ ಈ ನೆಲದಲ್ಲಿ ಬಹುಸಂಸ್ಕೃತಿಯನ್ನು ನಾಶ ಮಾಡಲು ಹೊರಟ್ಟಿದ್ದಾರೆ. ಅಂತವರ ಅಟಾಟೋಪಕ್ಕೆ ‘ಚೆ’ ಅಭಿಮಾನಿಗಳು ಉತ್ತರ ಕೊಡುತ್ತೇವೆ ಎಂದು ಚಿಂತಕ ಮತ್ತು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸ್ಕೌಟ್ ಮತ್ತು ಗೈಡ್‌ ಸಭಾಂಗಣದಲ್ಲಿ ‘ಚೆ ಗೆವಾರ’ ಅವರ ಮಗಳು ಡಾ. ಅಲಿಡಾ ಗೆವಾರ ಮತ್ತು ಮೊಮ್ಮಗಳು ಎಸ್ತೆಫಾನಿಯಾ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚೇ ಗೆವೆರಾ ಅವರ ಮಗಳು ಮತ್ತು ಮೊಮ್ಮಗಳಿಗೆ ಕನ್ನಡದ ನೆಲದಲ್ಲಿ ನಾಗರಿಕ ಸನ್ಮಾನ ಮಾಡಿದ್ದು ಚಾರಿತ್ರಿಕ ಸಂದರ್ಭವಾಗಿದೆ. ಕರ್ನಾಟಕ ಹುಸಿ ಸಂಸ್ಕೃತಿಯ ಪರವಾಗಿಲ್ಲ, ಜನಸಂಸ್ಕೃತಿಯ ಪರವಾಗಿದೆ, ಸಂವೇದನೆಗೆ ಪೂರಕವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ” ಎಂದು ಬರಗೂರು ಹೇಳಿದರು.

ಹಿರಿಯ ವಿದ್ವಾಂಸರಾದ ಜಿ. ರಾಮಕೃಷ್ಣ ಅವರು ಮಾತನಾಡಿ, “ಯಾರದ್ದೊ ಶ್ರಮವನ್ನು ಇನ್ಯಾರೊ ಕಬಳಿಸುತ್ತಿದ್ದ ಸಂದರ್ಭದಲ್ಲಿ, ‘ಚೆ’ ತಲೆ ಮೇಲೆ ನಕ್ಷತ್ರ ಚಿಹ್ನೆಯ ಟೋಪಿ ಹಾಕಿದ ಭರವಸೆಯ ಆಶಾಕಿರಣವಾಗಿದ್ದ. ವಿಶ್ವದ ಯಾವುದೇ ಮೂಲೆಯಲ್ಲಿ ಅನ್ಯಾಯವಾಗುತ್ತಿದ್ದರೆ, ಅದರ ವಿರುದ್ಧ ದನಿ ಎತ್ತುವ ಮನುಜರು ನನ್ನ ಸಂಗಾತಿಗಳು ಎಂದು ಹೇಳಿದ್ದ” ಎಂದು ಹೇಳಿದರು.

‘‘ಇಂದು ‘ಚೆ’ ಎಂದರೇ ಇಡೀ ವಿಶ್ವ ಇವ ನಮ್ಮವ ಎನ್ನುತ್ತಿದೆ. ವಿಶ್ವಮಾನವ ಪರಿಕಲ್ಪನೆ ಹೊಂದಿದ್ದ ‘ಚೆ’ ಕ್ಯೂಬಾದ ಹವಾನದಲ್ಲಿ ‘ಪ್ರತಿಯೊಬ್ಬ ಕ್ರಾಂತಿಕಾರಿಯ ಕೆಲಸ ಕ್ರಾಂತಿ ಮಾಡುವುದೆ ಹೊರತು ಸಾಮ್ರಾಜ್ಯಶಾಹಿ ಎಂಬ ಹೆಣ ಬೀಳುತ್ತದೆ, ಅದನ್ನು ಹೊರೋಣ ಎಂದು ಕಾಯುವುದಲ್ಲ. ಗೆಲ್ಲುವವರೆಗೂ ಹೋರಾಡುತ್ತಿರಬೇಕು’ ಎಂಬ ಸಂದೇಶ ಕೊಟ್ಟಿದ್ದರು” ಎಂದು ಹೇಳಿದರು.

“ಅಮೆರಿಕದ ಸಿಎಎ ‘ಚೆ’ಯನ್ನು ಕೊಲೆ ಮಾಡಿದ್ದು ಇತಿಹಾಸದಲ್ಲಿ ಹಲವರು ರಂಜನೀಯವಾಗಿ ಚಿತ್ರಿಸಿದರೆ, ಕೆಲವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಭಾರತದಲ್ಲಿ ಮೂರನೇ ಬಾರಿಗೂ ಅಧಿಕಾರಕ್ಕೆ ಬರುತ್ತೇವೆ ಎಂದುಕೊಂಡಿರುವ ಮೋದಿಯನ್ನು ಮಹಾನಾಯಕ ಎಂದರೆ ಅಂತಹ ದೇಶ ಭ್ರಮಾತ್ಮಕವಾಗಿದೆ ಎಂದರ್ಥ. ಈ ವೇಳೆ ‘ಚೆ’ ಎಂಬ ಮಹಾನ್ ವ್ಯಕ್ತಿಯನ್ನು ಅನುಕರಿಸಲು ಎಲ್ಲರೂ ಸಾಮೂದಾಯಿಕವಾಗಿ ಪಾಲ್ಗೊಳ್ಳುವುದು ಒಂದೇ ದಾರಿ” ಎಂದು ವಿಧ್ವಾಂಸ ಜಿ. ರಾಮಕೃಷ್ಣ ಅವರು ಕರೆ ಕೊಟ್ಟಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ ಮಾತನಾಡಿ, “ಎಲ್ಲ ತಲೆಮಾರಿನ ಜನರು ‘ಚೆ’ಗೆ ಆಕರ್ಷಿತರಾಗಿದ್ದಾರೆ. ಭಾರತದ ಇಂದಿನ ಪರಿಸ್ಥಿತಿಯಲ್ಲಿ ‘ಚೆ’ ವ್ಯಕ್ತಿತ್ವ ಬಹುಮುಖ್ಯ. ಕಾವ್ಯ ಮತ್ತು ಕೋವಿಯನ್ನು ಪ್ರೀತಿಯಿಂದ ಜೊತೆಗಿರಿಸಿಕೊಂಡ ಚೇತನ ನಮ್ಮೊಳಗೂ ಮೂಡಲಿ” ಎಂದು ಆಶಿಸಿದರು.

ಅಪ್ಪನ ನೆನಪಿನ ಬುತ್ತಿ ತೆರೆದು ಹಾಡು ಹಾಡಿದ ಚೆ ಗೆವಾರ ಪುತ್ರಿ!

“ನನ್ನಪ್ಪ ತುಂಬಾ ಒಳ್ಳೆಯ ಕವಿಯಾಗಿದ್ದರು, ಹಲವು ಪುಸ್ತಕಗಳನ್ನು, ಕವಿತೆಗಳನ್ನು ಓದುತ್ತಿದ್ದರು. ಆದರೆ ಅವರು ತಮ್ಮ ಕವಿತೆಗಳನ್ನು ತಾವೆ ಓದುತ್ತಿರಲಿಲ್ಲ. ಯಾಕೆಂದರೆ ಅವರೊಳಗೊಬ್ಬ ವಿಮರ್ಶಕನಿದ್ದ” ಎಂದು 7ನೇ ವಯಸ್ಸಿಗೆ ಅಪ್ಪನನ್ನು ಕಳೆದುಕೊಂಡಿರುವ ಅಲಿಡಾ, ತಮ್ಮ ನೆನಪುಗಳ ಬುತ್ತಿಯನ್ನು ತೆರೆದಿಟ್ಟರು.

“ಅಸ್ತಮಾ ಇದ್ದ ಕಾರಣ ವೈದ್ಯರು ದಿನಕ್ಕೆ ಒಂದೇ ಸಿಗಾರ್ ಸೇದುವಂತೆ ಅಪ್ಪನಿಗೆ ಸೂಚಿಸಿದ್ದರು. ಆದರೆ, ಅಪ್ಪನಿಗೆ ತಂಬಾಕು ತೋಟದ ಕಾರ್ಮಿಕರು ದೊಡ್ಡ ಗಾತ್ರದ ಸಿಗಾರ್ ಮಾಡಿಕೊಟ್ಟಿದ್ದರು. ಅದನ್ನು ಸೇದಿ ವೈದ್ಯರಿಗೆ ಒಂದೇ ಸಿಗಾರ್ ಸೇದಿದೆ ಎಂದು ಫೋನ್ ಮಾಡಿ ಹೇಳುತ್ತಿದ್ದರು” ಎಂದು ಅಪ್ಪ ಅದೆಷ್ಟು ಉಡಾಫೆತನ ತೋರುತ್ತಿದ್ದರೆಂಬುದನ್ನು ಅವರು ವಿವರಿಸಿದರು.

“ಕೊರೋನಾ ಸೋಂಕು‌ ನಿಯಂತ್ರಿಸಲು ಕ್ಯೂಬಾ ತನ್ನದೆ ಆದ ವ್ಯಾಕ್ಸಿನ್ ಕಂಡು ಹಿಡಿದಿತ್ತು. ಆದರೆ ಅಮೇರಿಕಾ ಪೇಟೆಂಟ್ ಕಾರಣಕ್ಕೆ ಸಿರಿಂಜ್ ಕೊಳ್ಳಲು ಸಾಧ್ಯವಿರಲಿಲ್ಲ. ಹಾಗಾಗಿ ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್ ಅನ್ನು ಕಂಡುಕೊಂಡೆವು. ನಾವು ಯಾವಾಗಲೂ ಪರ್ಯಾಯವನ್ನು ಹುಡುಕುತ್ತೇವೆ” ಎಂದು ತಮ್ಮ ದೇಶದ ಸ್ವಾಭಿಮಾನದ ಬಗ್ಗೆ ಅಭಿಮಾನದಿಂದ ನುಡಿದರು. ಭಾಷಣದ ಕೊನೆಯಲ್ಲಿ ಅಲಿಡಾ ಹಾಡನ್ನು ಕೂಡಾ ಹಾಡಿದರು.

ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಹಿರಿಯ ಲೇಖಕಿ ಡಾ. ವಿಜಯಾ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ದಲಿತ ಹಕ್ಕುಗಳ ಮುಖಂಡ ಮಾವಳ್ಳಿ ಶಂಕರ್, ಜನವಾದಿ ಮಹಿಳಾ ಸಂಘಟನೆ ನಾಯಕಿ ವಿಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...